Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...