Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...