Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...