Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...