Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....