Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...