Homeಮುಖಪುಟತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ತನ್ನ ವಿರುದ್ದದ 44 ಪೇಜ್‌ಗಳನ್ನು ಡಿಲೀಟ್ ಮಾಡುವಂತೆ ಫೇಸ್‌‌ಬುಕ್‌‌ಗೆ ಬಿಜೆಪಿ ತಾಕೀತು!

ಬಿಜೆಪಿ ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದ್ದು, ಜೊತೆಗೆ 17 ಬಿಜೆಪಿ ಪರವಿರುವ ಪೇಜ್‌‌ಗಳನ್ನು ಮರುಸ್ಥಾಪಿಸಿತ್ತು.

- Advertisement -
- Advertisement -

ಕಳೆದ ವರ್ಷ ಲೋಕಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಬಿಜೆಪಿಯು ತನ್ನ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರು ನಡೆಸುತ್ತಿರುವ 44 ಫೇಸ್‌ಬುಕ್‌ ಪೇಜ್‌ಗಳನ್ನು ಕಿತ್ತು ಹಾಕುವಂತೆ ಫೇಸ್‌ಬುಕ್‌ಗೆ ಹೇಳಿತ್ತು ಎನ್ನಲಾಗಿದೆ.

’ಭೀಮ್‌ ಆರ್ಮಿ’ಯ ಅಧಿಕೃತ ಪೇಜ್, ’ವಿ ಹೇಟ್ ಬಿಜೆಪಿ’, ಆಲ್ಟ್‌ ನ್ಯೂಸ್ ಸಂಸ್ಥಾಪಕ ಪ್ರತೀಕ್ ಸಿನ್ಹಾ ನಿರ್ವಹಿಸುತ್ತಿದ್ದ ’ದ ಟ್ರುತ್ ಆಫ್ ಗುಜರಾತ್’ ಮುಂತಾದ ಪ್ರಸಿದ್ದ ಪೇಜ್‌ಗಳು ಬಿಜೆಪಿ ನೀಡಿದ್ದ ಪಟ್ಟಿಯಲ್ಲಿದ್ದವು ಎನ್ನಲಾಗಿದೆ.

2014ರ ಲೋಕಸಭಾ ಚುನಾವಣೆ ಗೆಲ್ಲಲು ಫೇಸ್‌ಬುಕ್‌ ಬಿಜೆಪಿ ಪರವಾಗಿ ಕೆಲಸ ಮಾಡಿತ್ತು ಮತ್ತು ಬಿಜೆಪಿಯ ದ್ವೇಷ ಭಾಷಣಗಳನ್ನು ತೆಗೆದುಹಾಕದಂತೆ ಸೂಚಿಸಲಾಗಿತ್ತು ಎಂದು ಅಮೆರಿಕಾ ವಾಲ್‌ಸ್ಟ್ರೀಟ್‌ ಜರ್ನಲ್ ವರದಿ ಮಾಡಿದ ಬೆನ್ನಲ್ಲೇ ಈ ಆರೋಪಗಳು ಕೇಳಿಬಂದಿವೆ.

ಅಷ್ಟೇ ಅಲ್ಲದೆ, ನವೆಂಬರ್ 2019 ರಲ್ಲಿ ಬಿಜೆಪಿ ಬೆಂಬಲಿತ ‘ಒಪಿಇಂಡಿಯಾ’ ಹಾಗೂ `ಚೌಪಾಲ್’ ಪೇಜನ್ನು ಮಾನಿಟೈಸ್‌ ಮಾಡಲು (ಅದಕ್ಕೆ ಜಾಹೀರಾತು ಹಣ ಬರುವಂತೆ) ಬಿಜೆಪಿಯು ಫೇಸ್‌ಬುಕ್ ಅನ್ನು ಕೇಳಿಕೊಂಡಿತ್ತು ಎಂದು ವರದಿಯಾಗಿದೆ.

ಇದನ್ನೂ ಓದಿ: ತಮಿಳುನಾಡಿನ ಕುಖ್ಯಾತ ರೌಡಿಶೀಟರ್ ಬಿಜೆಪಿಗೆ ಸೇರ್ಪಡೆ: ಪೋಲಿಸರನ್ನು ಕಂಡು ಪರಾರಿ!

ಬಿಜೆಪಿಯ ಐಟಿ ಸೆಲ್‌ನ ಮುಖ್ಯಸ್ಥರಾದ ಅಮಿತ್ ಮಾಳವಿಯ ಮತ್ತು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿ ಕಾರ್ಯನಿರ್ವಾಹಕರಾದ ಅಂಖಿ ದಾಸ್ ಮತ್ತು ಶಿವನಾಥ್ ತುಕ್ರಾಲ್ ನಡುವಿನ ಇಮೇಲ್‌ಗಳನ್ನು ಆಧರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ಈ ವರದಿ ಮಾಡಿದೆ.

ಬಿಜೆಪಿ ಬ್ಲಾಕ್ ಮಾಡಲು ಹೇಳಿರುವ 44 ಪೇಜ್‌ಗಳಲ್ಲಿ 14  ಪೇಜ್‌ಗಳನ್ನು ಫೇಸ್‌ಬುಕ್‌ ಕಿತ್ತು ಹಾಕಿದೆ. ಅಲ್ಲದೇ ನಿಯಮ ಉಲ್ಲಂಘನೆಯ ಕಾರಣಕ್ಕಾಗಿ ಕಿತ್ತು ಹಾಕಿದ್ದ 17 ಬಿಜೆಪಿ ಪೇಜ್‌‌ಗಳನ್ನು, ಬಿಜೆಪಿಯ ಒತ್ತಾಯದ ನಂತರ ಮರುಸ್ಥಾಪಿಸಲಾಗಿತ್ತು ಎಂದು ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಬಿಜೆಪಿಯ ಕೋರಿಕೆಯ ಮೇರೆಗೆ ಮರುಸ್ಥಾಪಿಸಿದ ಎಲ್ಲಾ 17 ಪುಟಗಳು ಸುಳ್ಳು ಸುದ್ದಿಗಳನ್ನು ಹರಡುವ ಕನ್ನಡದ ಪೋಸ್ಟ್‌ಕಾರ್ಡ್ ನ್ಯೂಸ್‌ನಿಂದ ಮಾಹಿತಿಗಳನ್ನು ಹಂಚಿಕೊಳ್ಳುತ್ತಿದ್ದವು ಎನ್ನಲಾಗಿದೆ. ಆದರೆ ಈ ಯಾವುದೇ ಪೇಜ್‌ಗಳು ರಾಜಕೀಯ ಪಕ್ಷದೊಂದಿಗೆ ನೇರವಾಗಿ ಸಂಪರ್ಕದಲ್ಲಿದೆ ಎಂದು ಹೇಳಿಕೊಂಡಿಲ್ಲ ಎಂದು ವರದಿ ಹೇಳಿದೆ.

ಅಷ್ಟೇ ಅಲ್ಲದೆ, ಮಾರ್ಚ್ ಮತ್ತು ಜೂನ್ 2019 ರ ನಡುವೆ ರಾಜಕೀಯ ಜಾಹೀರಾತುಗಳಿಗಾಗಿ ಒಪಿ ಇಂಡಿಯಾದ ಫೇಸ್‌ಬುಕ್ ಪೇಜ್ ಸುಮಾರು 90,000 ರೂಗಳನ್ನು ಖರ್ಚು ಮಾಡಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ: ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ಬಿಜೆಪಿ ಪರವಾದ ಪೇಜ್‌ಗಳನ್ನು “ರಕ್ಷಿಸಲು” ವಿನಂತಿಗಳನ್ನು ಮಾಡಲಾಗಿದೆ, ಯಾಕೆಂದರೆ ಫೇಸ್‌‌ಬುಕ್ ನಿರ್ವಾಹಕರು ಅವುಗಳನ್ನು “ತಪ್ಪಾಗಿ ಗುರಿಯಾಗಿಸಿಕೊಂಡಿದ್ದಾರೆ” ಎಂದು ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್‌ ಮಾಳವಿಯಾ ಹೇಳಿದ್ದಾರೆ.

“ಐ ಸಪೋರ್ಟ್ ನರೇಂದ್ರ ಮೋದಿ ಅಂತಹ ಹಲವು ನೈಜ ಕಾರ್ಯಕರ್ತರಿಂದ ನಡೆಸುವ ಹಲವು ಪೇಜ್‌ಗಳನ್ನು ತೆಗೆದು ಹಾಕಬಹುದೆಂಬ ಭಯವಿತ್ತು. ನಾವು ಈ ಹಿಂದೆಯೂ ಫೇಸ್‌ಬುಕ್ ಜತೆ ಸಂಪರ್ಕಿಸಿ ಸರಿಯಾದ ಕ್ರಮ ಕೈಗೊಳ್ಳುವಂತೆ ಹೇಳಿದ್ದೆವು. ನಾವು ಹೆಚ್ಚು ಪಾರದರ್ಶಕ ಮತ್ತು ನ್ಯಾಯಪರ ವ್ಯವಸ್ಥೆಗೆ ಮನವಿ ಮಾಡಿದ್ದೆವು. ಆದರೆ ಅವರು ಮಾತ್ರ ಬೇರೆಯೇ ಅಂದುಕೊಂಡಿದ್ದರು” ಎಂದು ಅವರು ಹೇಳಿದ್ದಾರೆ.

ಇಂಡಿಯನ್ ಎಕ್ಸ್‌ಪ್ರೆಸ್ ‌ವರದಿಗೆ ಪ್ರತಿಕ್ರಿಯಿಸಿದ ಫೇಸ್‌ಬುಕ್‌ ವಕ್ತಾರರು, “ಇಲ್ಲಿ ರಕ್ಷಣೆ ಎಂಬ ವಿಷಯ ಇಲ್ಲ, ನಾವು ಕ್ರಾಸ್-ಚೆಕ್ ಎಂಬ ಪ್ರಕ್ರಿಯೆಯನ್ನು ಹೊಂದಿದ್ದೇವೆ. ಕೆಲವು ಪುಟಗಳು ಮತ್ತು ಪ್ರೊಫೈಲ್‌ಗಳಿಗೆ ನಾವು ನಮ್ಮ ನೀತಿಗಳನ್ನು ಸರಿಯಾಗಿ ಅನ್ವಯಿಸಿದ್ದೇವೆಯೆ ಎಂದು ಖಚಿತಪಡಿಸಿಕೊಳ್ಳಲು ಎರಡನೇ ಹಂತದ ವಿಮರ್ಶೆಯನ್ನು ನೀಡಲಾಗುತ್ತದೆ. ನಮ್ಮ ಸಮುದಾಯ ಮಾನದಂಡಗಳ ಉಲ್ಲಂಘನೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ:  BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...