Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...