Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...