Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶದ ಕಟ್ನಿಯಲ್ಲಿ ಮಹಾರಾಷ್ಟ್ರಕ್ಕೆ ರೈಲಿನಲ್ಲಿ ಕಳ್ಳಸಾಗಣೆ ಮಾಡುತ್ತಿದ್ದ 163 ಅಪ್ರಾಪ್ತ ಬಾಲಕರ ರಕ್ಷಣೆ; 8 ಮಂದಿ ಬಂಧನ

ಕಟ್ನಿ: ಬಿಹಾರದಿಂದ ಮಹಾರಾಷ್ಟ್ರಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎನ್ನಲಾದ 163 ಅಪ್ರಾಪ್ತ ಬಾಲಕರನ್ನು ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ಎಕ್ಸ್‌ಪ್ರೆಸ್ ರೈಲಿನಿಂದ ರೈಲ್ವೆ ಪೊಲೀಸರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಆರು ರಿಂದ 13 ವರ್ಷದೊಳಗಿನ...

ನಗರಪಾಲಿಕೆ ಚುನಾವಣೆಯಲ್ಲಿ ನಮಗೆ ಅಧಿಕಾರಕ್ಕೆ ಬರಲು ಒಂದು ಅವಕಾಶ ನೀಡಿ: ಬೆಂಗಳೂರಿಗರಿಗೆ ಎಚ್‌.ಡಿ ಕುಮಾರಸ್ವಾಮಿ ಮನವಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಡಿಯಲ್ಲಿರುವ ಐದು ಮಹಾನಗರ ಪಾಲಿಕೆಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತಮ್ಮನ್ನು ಬೆಂಬಲಿಸುವ ಮೂಲಕ ಅಧಿಕಾರಕ್ಕೆ ಬರುವ ಅವಕಾಶ ನೀಡುವಂತೆ ದೇವೇಗೌಡ ನೇತೃತ್ವದ ಜೆಡಿಎಸ್ ಶನಿವಾರ ಬೆಂಗಳೂರಿನ ಜನರನ್ನು...

ಅಬ್ದುಲ್ ಜಬ್ಬಾರ್ ರಾಜೀನಾಮೆ ಅಂಗೀಕರಿಸಿದ ಡಿ.ಕೆ ಶಿವಕುಮಾರ್; ಕೆಪಿಸಿಸಿ ಅಲ್ಪಸಂಖ್ಯಾತ ಘಟಕ ಸಮಿತಿ ವಿಸರ್ಜನೆ

ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಅವರು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗಕ್ಕೆ ನೀಡಿದ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಂಗೀಕರಿಸಿದ್ದಾರೆ, ಜೊತೆಗೆ ಅಲ್ಪಸಂಖ್ಯಾತ ಘಟಕ ಸಮಿತಿಯನ್ನೂ ವಿಸರ್ಜಿಸಿದ್ದಾರೆ ಎಂದು ವರದಿಯಾಗಿದೆ. ಕೆಪಿಸಿಸಿ ಅಲ್ಪಸಂಖ್ಯಾತ...

‘ಯುದ್ಧ ಭುಗಿಲೆದ್ದು ಪಾಕಿಸ್ತಾನ ಶಾಂತಿ ಸ್ಥಾಪಿಸಲು ವಿಫಲವಾದರೆ, ಇಸ್ರೇಲ್ ಮೇಲೆ ದಾಳಿ ಮಾಡುವುದು ನಮ್ಮ ಕರ್ತವ್ಯ’: ಟರ್ಕಿ ಅಧ್ಯಕ್ಷ ಎರ್ಡೋಗನ್

ಟರ್ಕಿ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಇಸ್ರೇಲ್ ವಿರುದ್ಧ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ನಡೆಯುತ್ತಿರುವ ಸಂಘರ್ಷವನ್ನು ಶಮನಗೊಳಿಸಲು ರಾಜತಾಂತ್ರಿಕ ಪ್ರಯತ್ನಗಳು ವಿಫಲವಾದರೆ ಸಂಭಾವ್ಯ ಕ್ರಮ ಕೈಗೊಳ್ಳುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ಕಠಿಣ ಪದಗಳ ಹೇಳಿಕೆಯಲ್ಲಿ,...

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ನಿಧನ

ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ (92) ಅವರು ಭಾನುವಾರ (ಏ.12) ನಿಧನರಾಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ. ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ. ಪ್ರತೀತ್ ಸಮ್ದಾನಿ...

‘ಸಂವಿಧಾನವನ್ನು ಕೊನೆಗೊಳಿಸುವುದು ಆರ್‌ಎಸ್‌ಎಸ್-ಬಿಜೆಪಿಯ ಮುಖ್ಯ ಉದ್ದೇಶ’: ರಾಹುಲ್ ಗಾಂಧಿ ಆರೋಪ

ನವದೆಹಲಿ: ಆರ್‌ಎಸ್‌ಎಸ್ - ಬಿಜೆಪಿ ವಿರುದ್ಧ ಭಾನುವಾರ ತೀವ್ರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಭಾರತದಲ್ಲಿ ಎಲ್ಲರನ್ನೂ ಸಮಾನರು ಎಂದು ಪರಿಗಣಿಸಲು ಬಯಸದ ಕಾರಣ ಸಂವಿಧಾನವನ್ನು ಕೊನೆಗೊಳಿಸುವುದು ಅವರ ಮುಖ್ಯ...

ಗಾಝಾಗೆ ಜೀವರಕ್ಷಕ ನೆರವಿಗಾಗಿ ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ನೌಕಾಯಾನ; ನಾಗರಿಕರ ರಕ್ಷಣೆಗೆ ಕರೆ ನೀಡಿದ ಯುನೈಟೆಡ್ ಸ್ಟಾಫ್ ಫಾರ್ ಗಾಝಾ

ಗ್ಲೋಬಲ್ ಸುಮುದ್ ಫ್ಲೋಟಿಲ್ಲಾ ಭಾನುವಾರ ನೌಕಾಯಾನ ಮಾಡಲು ಸಿದ್ಧವಾಗುತ್ತಿದ್ದಂತೆ, ಗಾಝಾದ ಯುನೈಟೆಡ್ ಸ್ಟಾಫ್ ಅಂತರರಾಷ್ಟ್ರೀಯ ಕಾನೂನಿನ ಅಡಿಯಲ್ಲಿ ಕಾರ್ಯಾಚರಣೆಯಲ್ಲಿರುವ ನಾಗರಿಕರ ರಕ್ಷಣೆಗಾಗಿ ಕರೆ ನೀಡಿತು ಮತ್ತು ಗಾಝಾಗೆ ಮಾನವೀಯ ನೆರವು ಪ್ರಯತ್ನಗಳಿಗೆ ಬೆಂಬಲವನ್ನು...

ಲೆಬನಾನ್ ಮೇಲೆ ದಾಳಿ ಮುಂದುವರಿಸಿದ ಇಸ್ರೇಲ್ : 2 ಸಾವಿರ ದಾಟಿದ ಮೃತರ ಸಂಖ್ಯೆ

ಮಾರ್ಚ್ 2ರಿಂದ ಇಸ್ರೇಲ್ ನಡೆಸಿದ ದಾಳಿಯಲ್ಲಿ ಕನಿಷ್ಠ 2,020 ಜನರು ಸಾವನ್ನಪ್ಪಿದ್ದಾರೆ ಮತ್ತು 6,436 ಜನರು ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ. ಸಾವನ್ನಪ್ಪಿದವರಲ್ಲಿ 165 ಮಕ್ಕಳು, 248 ಮಹಿಳೆಯರು ಮತ್ತು 85...

ಪ. ಬಂಗಾಳ ಚುನಾವಣೆ | ಭವಾನಿಪುರದಲ್ಲಿ ನನ್ನ ನಾಮಪತ್ರ ರದ್ದತಿಗೆ ಪಿತೂರಿ ನಡೆದಿತ್ತು : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ತನ್ನ ನಾಮಪತ್ರವನ್ನು ರದ್ದುಗೊಳಿಸಲು ಉದ್ದೇಶಪೂರ್ವಕ ಪಿತೂರಿ ನಡೆದಿತ್ತು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. "ನಮ್ಮ ಹೋರಾಟ ಬಿಜೆಪಿ ವಿರುದ್ಧವಲ್ಲ; ವ್ಯವಸ್ಥೆಯಲ್ಲಿರುವ ದೋಷಗಳ ವಿರುದ್ಧ. ನನ್ನ ಸ್ವಂತ...

ಇಸ್ರೇಲ್‌ನಾದ್ಯಂತ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತ ವಿರುದ್ಧ ಬೀದಿಗಿಳಿದ ಜನ

ಗಾಝಾದಲ್ಲಿ ಸುಮಾರು 80 ಸಾವಿರದಷ್ಟು ಜನರನ್ನು ಹತ್ಯೆಗೈದ ಬಳಿಕ, ಈಗ ಲೆಬನಾನ್ ಮತ್ತು ಇರಾನ್ ಮೇಲೆ ದಾಳಿ ನಡೆಸುತ್ತಿರುವ ಇಸ್ರೇಲ್‌ನ ಬೆಂಜಮಿನ್ ನೆತನ್ಯಾಹು ಸರ್ಕಾರದ ವಿರುದ್ದ ಅಲ್ಲಿನ ನಾಗರಿಕರು ಬೀದಿಗಿಳಿದಿದ್ದಾರೆ. ನೆತನ್ಯಾಹು ಆಡಳಿತದ...