Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...