Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...