Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...