Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...

ಉತ್ತರ ಪ್ರದೇಶದಲ್ಲಿ ಮತ್ತೋರ್ವ ಬಿಎಲ್‌ಒ ಆತ್ಮಹತ್ಯೆ: ಎಸ್‌ಐಆರ್‌ ಕೆಲಸದ ಒತ್ತಡ ಕಾರಣವೆಂದ ಕುಟುಂಬ

ಉತ್ತರ ಪ್ರದೇಶದ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ಬೂತ್ ಮಟ್ಟದ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದ ಕೆಲಸದ ಒತ್ತಡದಿಂದಾಗಿ ಅವರು ಈ ನಿರ್ಧಾರ ಮಾಡಿದ್ದಾರೆ ಎಂದು...

ಉನ್ನಾವೋ ಅತ್ಯಾಚಾರ ಪ್ರಕರಣ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ 

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು "ಕಾನೂನಿಗೆ ವಿರುದ್ಧ" ಮತ್ತು "ವಿಕೃತ" ಎಂದು ಕರೆದಿರುವ ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ...