Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...

ಕುವೈತ್ ವಿದ್ಯುತ್ ಸ್ಥಾವರ, ಉಪ್ಪು ನಿವಾರಣಾ ಘಟಕದ ಮೇಲೆ ಇರಾನ್ ದಾಳಿ: ಭಾರತ ಮೂಲದ ಕಾರ್ಮಿಕ ಸಾವು

ದುಬೈ: ಕುವೈತ್‌ನಲ್ಲಿ ವಿದ್ಯುತ್ ಮತ್ತು ನೀರು ನಿವಾರಣಾ ಘಟಕದ ಮೇಲೆ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸುದ್ದಿ ಸಂಸ್ಥೆ ಕುನಾ ಸೋಮವಾರ ವರದಿ ಮಾಡಿದೆ. ದಾಳಿಯ ಸಮಯದಲ್ಲಿ...

1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆ ಆರೋಪ; ದೆಹಲಿ ಪೊಲೀಸರಿಂದ ಮೈಸೂರಿನ ವ್ಯಕ್ತಿ ಬಂಧನ

ದೇಶಾದ್ಯಂತ ಹಲವು ಶಾಲೆಗಳು, ಹೈಕೋರ್ಟ್‌ ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ಬಾಂಬ್ ಬೆದರಿಕೆಗಳನ್ನು ಕಳುಹಿಸಿದ ಆರೋಪದ ಮೇಲೆ ದೆಹಲಿ ಪೊಲೀಸರು ಮೈಸೂರಿನ ವ್ಯಕ್ತಿಯನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ದೆಹಲಿ...

ಬಾಂಗ್ಲಾದೇಶದಿಂದ ಭಾರತದಲ್ಲಿ ಭಯೋತ್ಪಾದಕ ದಾಳಿ ನಿರ್ವಹಿಸುತ್ತಿದ್ದ ಲಷ್ಕರ್ ಕಮಾಂಡರ್ ಶಬ್ಬೀರ್ ಅಹ್ಮದ್ ಲೋನ್ ಬಂಧನ

ನವದೆಹಲಿ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಪ್ರಮುಖ ಪ್ರಗತಿಯಲ್ಲಿ, ಬಾಂಗ್ಲಾದೇಶದಲ್ಲಿ ನೆಲೆಸಿದ್ದು, ಭಾರತದಲ್ಲಿ ದಾಳಿಗಳನ್ನು ಯೋಜಿಸುತ್ತಿದ್ದ ಆರೋಪ ಹೊತ್ತಿರುವ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಕಾರ್ಯಕರ್ತನನ್ನು ದೆಹಲಿ ಗಡಿಯ ಬಳಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ದೃಢಪಡಿಸಿದ್ದಾರೆ. ಆರೋಪಿ...

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. 'ಖಬರ್ ರಾಜ್‌ಕೋಟ್ ಕಿ ನ್ಯೂಸ್' ಎಂಬ ಆನ್‌ಲೈನ್...

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...