Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಜೊತೆಗಿನ ಮಾತುಕತೆಗಳು ಫಲಪ್ರದವಾಗಿವೆ, ಐದು ದಿನಗಳ ಕಾಲ ದಾಳಿ ಮಾಡದಂತೆ ಸೂಚಿಸಿದ್ದೇನೆ : ಟ್ರಂಪ್

ಕಳೆದ ಎರಡು ದಿನಗಳಲ್ಲಿ ಅಮೆರಿಕ ಮತ್ತು ಇರಾನ್ ನಡುವೆ ನಡೆದ ಮಾತುಕತೆಗಳು ಫಲಪ್ರದವಾಗಿವೆ. ಆದ್ದರಿಂದ ಇರಾನ್‌ನ ಇಂಧನ ಕೇಂದ್ರಗಳ ಮೇಲಿನ ಅಮೆರಿಕದ ದಾಳಿಯನ್ನು ಐದು ದಿನಗಳವರೆಗೆ ಮುಂದೂಡಲು ಸೂಚಿಸಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್...

ಎಸ್‌ಐಆರ್ ದೂರಾಲೋಚನೆ ಅಲ್ಲ, ಸಿಎಎ-ಎನ್‌ಆರ್‌ಸಿ ಜಾರಿಗೊಳಿಸುವ ದುರಾಲೋಚನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು 'ದೂರಾಲೋಚನೆ'ಯಲ್ಲ, ಬದಲಿಗೆ ಅದು ಸಿಎಎ-ಎನ್‌ಅರ್‌ಸಿಯನ್ನು ಜಾರಿಗೊಳಿಸುವ 'ದುರಾಲೋಚನೆ'ಯನ್ನು ತನ್ನ ಒಡಲಲ್ಲಿಟ್ಟಿಕೊಂಡಿದೆ. ಮೊಕದ್ದಮೆಗಳ ವಿಚಾರಣೆಯು ಸುಪ್ರೀಂ ಕೋರ್ಟಿನಲ್ಲಿರುವಾಗ ಕರ್ನಾಟಕದಲ್ಲಿ ತರಾರುರಿಯಲ್ಲಿ ಎಸ್‌ಐಆರ್ ಪ್ರಕ್ರಿಯೆಯನ್ನು ನಡೆಸಬಾರದು...

ಸ್ವಘೋಷಿತ ದೇವಮಾನವನ ಖರಾತ್ ವಿರುದ್ಧ ಮತ್ತೆರಡು ಎಫ್‌ಐಆರ್ : ಗರ್ಭಿಣಿ ಮೇಲೆ ಅತ್ಯಾಚಾರವೆಸಗಿದ ಆರೋಪ

ಅತ್ಯಾಚಾರ ಸೇರಿದಂತೆ ಹಲವು ಕ್ರಿಮಿನಲ್ ಆರೋಪಗಳ ಮೇಲೆ ಈಗಾಗಲೇ ಬಂಧಿತನಾಗಿರುವ ಸ್ವಘೋಷಿತ ದೇವಮಾನವ ಹಾಗೂ ಜ್ಯೋತಿಷಿ ಅಶೋಕ್ ಖರಾತ್ ವಿರುದ್ಧ ಮಹಾರಾಷ್ಟ್ರದ ನಾಸಿಕ್‌ನ ಸರ್ಕಾರವಾಡಾ ಪೊಲೀಸರು ಶನಿವಾರ (ಮಾ.21) ಎರಡು ಹೊಸ ಅತ್ಯಾಚಾರ...

ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು

ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು 'ಸಿಯಾಸಾಟ್.ಕಾಮ್' ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ...

ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ; ಇಬ್ಬರು ಸಾವು

ಭಾನುವಾರ ತಡರಾತ್ರಿ ನ್ಯೂಯಾರ್ಕ್‌ನ ಲಾಗಾರ್ಡಿಯಾ ವಿಮಾನ ನಿಲ್ದಾಣದಲ್ಲಿ ಸುಮಾರು 76 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನವು ನೆಲದ ಮೇಲೆ ಚಲಿಸುತ್ತಿದ್ದ ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪೈಲಟ್ ಮತ್ತು...

‘ತೀರ್ಮಾನಿಸಲು ಏನೂ ಉಳಿದಿಲ್ಲ’ : ಸೋನಮ್ ವಾಂಗ್ಚುಕ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಲೇವಾರಿ ಮಾಡಿದ ಸುಪ್ರೀಂ ಕೋರ್ಟ್

ಲಡಾಖ್‌ನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಿರುವುದನ್ನು ಪ್ರಶ್ನಿಸಿ ಅವರ ಪತ್ನಿ ಗೀತಾಂಜಲಿ ಅಂಗ್ಮೋ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಮಾ.23)...

ಡೋನಾಲ್ಡ್‌ ಟ್ರಂಪ್ ಕಠಿಣ ವೀಸಾ ನೀತಿಗಳಿಂದ ಸಂಕಷ್ಟಕ್ಕೆ ಸಿಲುಕಿದ ಭಾರತ-ಚೀನಾ

ಡೊನಾಲ್ಡ್‌ ಟ್ರಂಪ್ ಆಡಳಿತವು ಅನಾವರಣಗೊಳಿಸಿದ ಕಠಿಣ ವಲಸೆ ನೀತಿಯ ಗರಿಷ್ಠ ಹೊರೆಯು ಭಾರತ ಮತ್ತು ಚೀನಾ ದೇಶಗಳ ಮೇಲೆ ಬಿದ್ದಿದೆ. 2024 ರ ಅದೇ ಅವಧಿಗೆ ಹೋಲಿಸಿದರೆ 2025 ರ ಮೊದಲ ಎಂಟು...

ಉತ್ತರಾಖಂಡ| ಪೌರಿಯಲ್ಲಿ ಅಂಬೇಡ್ಕರ್ ಪ್ರತಿಮೆ ವಿರೂಪ; ದೂರು ದಾಖಲು

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಯನ್ನು ವಿರೂಪಗೊಳಿಸಿದ ನಂತರ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು (ಮಾ.22) ತಿಳಿಸಿದ್ದಾರೆ. ಮಾರ್ಚ್ 21 ರ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಅಲಕನಂದಾ...

ಅಸ್ಸಾಂ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಸಚಿವೆ ನಂದಿತಾ ಗರ್ಲೋಸಾ

ಅಸ್ಸಾಂನ ಬಿಜೆಪಿ ಸರ್ಕಾರದಲ್ಲಿ ಸಚಿವೆಯಾಗಿದ್ದ ನಂದಿತಾ ಗರ್ಲೋಸಾ ಅವರು ಭಾನುವಾರ (ಮಾ.22) ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ವಿಧಾನಸಭೆ ಚುನಾವಣೆಗೆ ಟಿಕೆಟ್ ನಿರಾಕರಿಸಿದ ಹಿನ್ನೆಲೆ ನಂದಿತಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ನಂದಿತಾ ಅವರು ಪ್ರತಿನಿಧಿಸುತ್ತಿದ್ದ...

ಉತ್ತರ ಪ್ರದೇಶ| ವಾಲ್ಮೀಕಿ ಸಮುದಾಯದ ವಿರುದ್ಧ ಹೇಳಿಕೆ; ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ಬಂಧನ

ವಾಲ್ಮೀಕಿ ಸಮುದಾಯದ ವಿರುದ್ಧ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸರ್ ನೀಡಿದ ಆಕ್ಷೇಪಾರ್ಹ ಹೇಳಿಕೆ ಆಕ್ರೋಶ ವ್ಯಕ್ತವಾಗಿದ್ದು, ಸಮುದಾಯದಿಂದ ಪ್ರತಿಭಟನೆ ಮತ್ತು ರಸ್ತೆ ತಡೆಗೆ ಕಾರಣವಾದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನೌಗವಾನ್ ಪಕ್ಡಿಯಾ...