Homeಮುಖಪುಟಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

ಯುಪಿಯನ್ನು ಬಣ್ಣಿಸಲು ಇಟಲಿ ಯುದ್ದ ವಿಮಾನ ಮತ್ತು ಆ ದೇಶದ ಧ್ವಜದ ಬಣ್ಣ ಬಳಸಿದ ಬಿಜೆಪಿ!

- Advertisement -
- Advertisement -

ಯುಪಿಯಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆಗೆ ಆಡಳಿತ ಪಕ್ಷ ಬಿಜೆಪಿ ಭರ್ಜರಿಯಾಗಿ ತಯಾರಿ ನಡೆಸುತ್ತಿದೆ. ದಲಿತ ಮತ್ತು ಮಹಿಳಾ ವಿರೋಧಿ ನೀತಿ, ಕೊರೊನಾ ಸೋಂಕಿನ ಅಸಮರ್ಪಕ ನಿರ್ವಹಣೆ ಹಾಗೂ ಪಶ್ಚಿಮ ಯುಪಿಯಲ್ಲಿ ರೈತರ ಹೋರಾಟ ಬಿಜೆಪಿಗೆ ದೊಡ್ಡ ಹೊಡೆತ ನೀಡಲಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ರಾಜ್ಯದ ಪೂರ್ವಭಾಗವಾದ ಪೂರ್ವಾಂಚಲ ಪ್ರದೇಶದ ಕಡೆಗೆ ಬಿಜೆಪಿ ಗಮನವಹಿಸಿದೆ. ಪ್ರಧಾನಿ ಮೋದಿ ಮಂಗಳವಾರ ಕೂಡಾ ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದ್ದರು.

ಪೂರ್ವಾಂಚಲ್ ಎಕ್ಸ್‌ಪ್ರೆಸ್‌ವೇ ಉಧ್ಘಾಟನೆಯಾದ ಹಿನ್ನಲೆಯಲ್ಲಿ ಪ್ರಧಾನಿ ಮತ್ತು ಯುಪಿ ಮುಖ್ಯಮಂತ್ರಿ ಆದಿತ್ಯನಾಥ್‌ಗೆ ಧನ್ಯವಾದ ಕೋರಿ ಬಿಜೆಪಿಯ ರಾಷ್ಟ್ರೀಯ ಕಾರ್ಯದರ್ಶಿ ವೈ. ಸತ್ಯ ಕುಮಾರ್ ಸೇರಿದಂತೆ ಹಲವಾರು ಟ್ವಿಟರ್ ಬಳಕೆದಾರರು ಚಿತ್ರವೊಂದನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಯುಪಿ ಚುನಾವಣೆ-2022: ‘ಪೂರ್ವಾಂಚಲ’ ಕಡೆಗೆ ಗಮನ ಹರಿಸಿದ BJP!; ಮೋದಿ ಯಾಕೆ ಪದೇ ಪದೇ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ?

ಈ ಚಿತ್ರದಲ್ಲಿ ಪ್ರಧಾನಿ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ  ಆದಿತ್ಯನಾಥ್ ಇದ್ದಾರೆ. ಜೊತೆಗೆ ಉತ್ತರ ಪ್ರದೇಶವನ್ನು ‘ಎಕ್ಸ್‌ಪ್ರೆಸ್‌ ಪ್ರದೇಶ್‌‌’ ಎಂದು ಬಣ್ಣಿಸಿ ಆ ಚಿತ್ರದಲ್ಲಿ ಹಿಂದಿಯಲ್ಲಿ ಬರೆಯಲಾಗಿದೆ. ಪ್ರಧಾನಿ ಮತ್ತು ಸಿಎಂ ಅವರ ಚಿತ್ರದ ಹಿನ್ನೆಲೆಯಲ್ಲಿ ಕೆಂಪು(ಗಮನಿಸಿ ಅದು ಕೇಸರಿ ಅಲ್ಲ, ‘ಕೆಂಪು’) ಬಿಳಿ ಮತ್ತು ಹಸಿರು ಹೊಗೆಯನ್ನು ಹೊರಸೂಸುತ್ತಾ ಹಾರಾಡುತ್ತಿರುವ ಯುದ್ದವಿಮಾನಗಳನ್ನು ಕೂಡಾ ಚಿತ್ರಿಸಲಾಗಿದೆ.

ಇದನ್ನೂ ಓದಿ: ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಈ ಚಿತ್ರವನ್ನು ಬಲಪಂಥೀಯ ಪತ್ರಕರ್ತರು, ಲೇಖಕರು, ಬಿಜೆಪಿ ಬೆಂಬಲಿಗರು ಹಂಚಿಕೊಂಡಿದ್ದಾರೆ.

ಟ್ವಿಟರ್‌‌ನಲ್ಲಿ ತಮ್ಮನ್ನು ತಾವು ರಾಜಕೀಯ ನಿರೂಪಕಿ, ಅಂಕಣಕಾರ್ತಿ ಎಂದು ಘೋಷಿಸಿಕೊಂಡಿರುವ ಸುನಂದಾ ವಶಿಷ್ಟ್ ಅವರು ಈ ಚಿತ್ರವನ್ನು ಹಂಚಿಕೊಂಡು, “ಈ ಒಂದು ಚಿತ್ರವು ಸಾವಿರ ಪದಗಳನ್ನು ಹೇಳುತ್ತದೆ. ಈ ಚಿತ್ರದಿಂದ ನೀವು ಊಹಿಸಬಹುದಾದ ಸಾವಿರ ಸಂಗತಿಗಳಿವೆ. ನೀವು ಭಾರತದ ರಾಜಕೀಯವನ್ನು ನಿಯಮಿತವಾಗಿ ಅನುಸರಿಸಿದರೆ, ಇದು ಭಾರತವು ಎಲ್ಲಿಗೆ ಹೋಗುತ್ತಿದೆ ಎಂಬುದರ ಉತ್ತಮ ಅರ್ಥವನ್ನು ನೀಡುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಫ್ಯಾಕ್ಟ್‌ಚೆಕ್‌

ಬಿಜೆಪಿ ತನ್ನ ಪೋಸ್ಟರ್‌ನಲ್ಲಿ ಬಳಸಿರುವ ಫೈಟರ್‌ ಜೆಟ್‌ಗಳ ಚಿತ್ರವು ವಾಸ್ತವವಾಗಿ 2008 ರ ಆಗಸ್ಟ್‌ 17 ರಂದು ಹಂಗೇರಿಯ ‘ಕೆಕ್ಸ್‌ಕೆಮೆಟ್‌ನಲ್ಲಿ ನಡೆದ ಏರ್‌ಶೋದಲ್ಲಿ ಕ್ಲಿಕ್ಕಿಸಿದ ಚಿತ್ರವಾಗಿದೆ. ಇದನ್ನು ಇಟಾಲಿಯನ್ ವಾಯುಪಡೆಯ ಪ್ರಖ್ಯಾತ ಏರೋಬ್ಯಾಟಿಕ್ಸ್‌‌ ಪ್ರದರ್ಶನ ತಂಡವಾದ ‘ಫ್ರೆಸ್ಸೆ ಟ್ರೈಕೊಲೊರಿ’ ಪ್ರದರ್ಶಿಸಿತ್ತು.

ಈ ಚಿತ್ರವು ಶಟ್ಟರ್‌ಸ್ಟೋಕ್‌ನಲ್ಲಿ ಉಚಿತವಾಗಿ ಲಭ್ಯವಿದೆ. ಜೊತೆಗೆ ಫೈಟರ್‌ ಯುದ್ದ ವಿಮಾನಗಳು ಹೊರಸೂಸುತ್ತಿರುವ ಹೊಗೆಯು ಇಟಲಿ ದೇಶದ ಧ್ವಜದ ಬಣ್ಣವಾದ ಕೆಂಪು, ಬಿಳಿ ಮತ್ತು ಹಸಿರಾಗಿದೆಯೆ ಹೊರತು ಭಾರತದ ಧ್ವಜದ ಬಣ್ಣವಾಗಿರುವ ಕೇಸರಿ ಬಿಳಿ ಹಸಿರಲ್ಲ.

ಯುಪಿಯಲ್ಲಿ ಆಡಳಿತ ವಿರೋಧಿ ಅಲೆ ಭುಗಿಲೇಳುತ್ತಿದ್ದು, ಬಿಜೆಪಿಯು ರಾಜ್ಯದ 33% ವಿಧಾನಸಭಾ ಕ್ಷೇತ್ರಗಳಿರುವ ಪೂರ್ವಾಂಚಲ ಪ್ರದೇಶಕ್ಕೆ ಹೆಚ್ಚಿನ ಗಮನ ನೀಡಿದೆ. ಈ ಹಿನ್ನಲೆಯಲ್ಲೇ ಇತ್ತೀಚೆಗಿನ ದಿನಗಳಲ್ಲಿ ಪ್ರಧಾನಿ ಮೋದಿ ಅಲ್ಲಿಗೆ ಹಲವಾರು ಭಾರಿ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಯುಪಿಯಲ್ಲಿ ರೈತರ ಪ್ರತಿಭಟನೆ ಧ್ವನಿ ಹೆಚ್ಚಾಗಿರುವುದರಿಂದ ಬಿಜೆಪಿ ಪೂರ್ವ ಭಾಗವನ್ನು ಗುರಿಯಾಗಿಸಿಕೊಂಡಿದೆ. ಮುಂದಿನ ವರ್ಷ ಯುಪಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಚುವಾವಣೆಯು 2023 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಗೆ ದಿಕ್ಸೂಚಿಯಾಗಲಿದೆ.

ಇದನ್ನೂ ಓದಿ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ನ ಮಹಿಳಾ ಕೇಂದ್ರಿತ ರಾಜಕಾರಣ: ಪ್ರಿಯಾಂಕಾ ಗಾಂಧಿ ಮುಖ್ಯಮಂತ್ರಿ ಅಭ್ಯರ್ಥಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...