Homeಕರ್ನಾಟಕಬಿಜೆಪಿಯೆಂದರೆ ’ಬ್ಲಾಕ್‌ಮೇಲರ್ಸ್ ಜನತಾ ಪಕ್ಷ’: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬಿಜೆಪಿಯೆಂದರೆ ’ಬ್ಲಾಕ್‌ಮೇಲರ್ಸ್ ಜನತಾ ಪಕ್ಷ’: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಇಷ್ಟೆಲ್ಲಾ ಆಗುತ್ತಿದ್ದರೂ ಇಡಿ, ಐಟಿ, ಎಸಿಬಿ ಏನು ಮಾಡುತ್ತಿದ್ದಾರೆ? ಈ ಸಂಸ್ಥೆಗಳು ಯಾಕೆ ಸುಮ್ಮನಿವೆ? ಇವರೆಲ್ಲರೂ ಸುಮೋಟೋ ಕೇಸ್ ಯಾಕೆ ದಾಖಲಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಜೆಪಿ ಎಂದರೆ ಬ್ಲಾಕ್‌ಮೇಲರ್ಸ್ ಜನತಾ ಪಕ್ಷ. ಹಾಗೆಂದು ಆ ಪಕ್ಷದ ನಾಯಕರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್‌ಮೇಲ್, ಲಂಚದ ಆರೋಪ ಕೇಳಿ ಬಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ನೈತಿಕ ಹೊಣೆ ಹೊರಬೇಕಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಯಡಿಯೂರಪ್ಪನವರೇ ನಿನ್ನೆ ಸಂಪುಟ ವಿಸ್ತರಣೆ ಮಾಡಿದ್ದೀರ. ನೀವು ಯಾರನ್ನ ಬೇಕಾದರೂ ಮಾಡಿಕೊಳ್ಳಿ. ನಮ್ಮದು ಯಾವ ಅಭ್ಯಂತರವೂ ಇಲ್ಲ. ನಿಮ್ಮವರೇ ಬ್ಲಾಕ್ ಮೇಲರ್ಸ್ ಸಂಪುಟ ಎಂದಿದ್ದಾರೆ. ನಿಮ್ಮ ಸಿಡಿಯ ಬಗ್ಗೆಯೂ ಮಾತನಾಡಿದ್ದಾರೆ. ಬ್ಲಾಕ್‌ಮೇಲರ್‌ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ನಿಮ್ಮದೇ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಹೇಳಿಕೆ ಕೊಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌ ಪ್ರಶ್ನೆ

“ನೀವು ಲಂಚ ಪಡೆದಿದ್ದೀರಿ ಎಂಬ ಮಾತುಗಳು ಕೇಳಿ ಬಂದಿವೆ. ಇದ್ಯಾವುದೂ ನನ್ನ ಹೇಳಿಕೆಯಲ್ಲ. ಇದೆಲ್ಲವೂ ಬಿಜೆಪಿ ಧ್ವನಿ. ಸಿಡಿಯಲ್ಲಿ ಏನಿದೆ ಎಂಬುದು ಅದನ್ನು ನೋಡಿ, ಚರ್ಚೆ ಮಾಡಿರುವ ಬಿಜೆಪಿಯವರಿಗೆ ಗೊತ್ತಿದೆ. ನಾನು ಕಾರವಾರದಲ್ಲೇ ಸಿಡಿ ಬಗ್ಗೆ ಹೇಳಿಕೆ ಕೊಟ್ಟಿದ್ದೆ. ಅದನ್ನ ತೆಗೆದಿಡಿ ಅಂತ ಹೋಂ ಮಿನಿಸ್ಟರ್ ಹೇಳಿದ್ದರು. ಈಗ ನಿಮ್ಮವರೇ ತೆಗೆದಿಡುತ್ತಿದ್ದಾರೆ. ಬಿಜೆಪಿಯವರೇ ಸಿಡಿ ಮತ್ತು ಲಂಚದ ಬಗ್ಗೆ ಹೇಳಿಕೆ ನೀಡ್ತಿದ್ದಾರೆ. ಇದು ಐಪಿಸಿ ಅಪರಾಧ ಆಗುತ್ತದೆ.

ಸಿಡಿ ಒಳಗೆ ಏನಿದೆ ಎಂಬುದು ನಿಮ್ಮವರಿಗೇ ಗೊತ್ತಿದೆ. ಇದರ ಜತೆ ಲಂಚದ ಬಗ್ಗೆಯೂ ಮಾತನಾಡಿದ್ದಾರೆ. ಎಷ್ಟು ಲಂಚ ಕೊಟ್ಟಿದ್ದಾರೆ? ಮತ್ತೊಬ್ಬ ಸಚಿವರು ಅದೆಷ್ಟೋ ಖರ್ಚು ಮಾಡಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲದಕ್ಕೂ ಉತ್ತರ ಸಿಗಬೇಕಲ್ಲವೇ? ಇಷ್ಟೆಲ್ಲಾ ಆಗುತ್ತಿದ್ದರೂ ಇಡಿ, ಐಟಿ, ಎಸಿಬಿ ಏನು ಮಾಡುತ್ತಿದ್ದಾರೆ? ಈ ಸಂಸ್ಥೆಗಳು ಯಾಕೆ ಸುಮ್ಮನಿವೆ? ಇವರೆಲ್ಲರೂ ಸುಮೋಟೋ ಕೇಸ್ ಯಾಕೆ ದಾಖಲಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಿಮ್ಮ ನಾಯಕರೇ ಇಷ್ಟೆಲ್ಲಾ ಆರೋಪ ಮಾಡಿರುವಾಗ ನೀವು ನೈತಿಕ ಹೊಣೆ ಹೊರಬೇಕಿದೆ. ಬ್ಲಾಕ್ ಮೇಲ್, ಲಂಚ ಆರೋಪದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಈ ತನಿಖೆ ನಡೆಯಬೇಕು. ಐಟಿ, ಇಡಿಯವರು ಸುಮೋಟೋ ಕೇಸ್ ಹಾಕಬೇಕು” ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...