Homeಕರ್ನಾಟಕಬಿಜೆಪಿಯೆಂದರೆ ’ಬ್ಲಾಕ್‌ಮೇಲರ್ಸ್ ಜನತಾ ಪಕ್ಷ’: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಬಿಜೆಪಿಯೆಂದರೆ ’ಬ್ಲಾಕ್‌ಮೇಲರ್ಸ್ ಜನತಾ ಪಕ್ಷ’: ಡಿ.ಕೆ. ಶಿವಕುಮಾರ್ ವ್ಯಂಗ್ಯ

ಇಷ್ಟೆಲ್ಲಾ ಆಗುತ್ತಿದ್ದರೂ ಇಡಿ, ಐಟಿ, ಎಸಿಬಿ ಏನು ಮಾಡುತ್ತಿದ್ದಾರೆ? ಈ ಸಂಸ್ಥೆಗಳು ಯಾಕೆ ಸುಮ್ಮನಿವೆ? ಇವರೆಲ್ಲರೂ ಸುಮೋಟೋ ಕೇಸ್ ಯಾಕೆ ದಾಖಲಿಸುತ್ತಿಲ್ಲ? ಎಂದು ಅವರು ಪ್ರಶ್ನಿಸಿದ್ದಾರೆ.

- Advertisement -
- Advertisement -

ಬಿಜೆಪಿ ಎಂದರೆ ಬ್ಲಾಕ್‌ಮೇಲರ್ಸ್ ಜನತಾ ಪಕ್ಷ. ಹಾಗೆಂದು ಆ ಪಕ್ಷದ ನಾಯಕರೇ ಹೇಳಿಕೊಂಡಿದ್ದಾರೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಬ್ಲಾಕ್‌ಮೇಲ್, ಲಂಚದ ಆರೋಪ ಕೇಳಿ ಬಂದಿದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ನೈತಿಕ ಹೊಣೆ ಹೊರಬೇಕಿದೆ. ಈ ಬಗ್ಗೆ ಹೈಕೋರ್ಟ್ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದ್ದಾರೆ.

ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮುಖ್ಯಮಂತ್ರಿ ಯಡಿಯೂರಪ್ಪನವರೇ ನಿನ್ನೆ ಸಂಪುಟ ವಿಸ್ತರಣೆ ಮಾಡಿದ್ದೀರ. ನೀವು ಯಾರನ್ನ ಬೇಕಾದರೂ ಮಾಡಿಕೊಳ್ಳಿ. ನಮ್ಮದು ಯಾವ ಅಭ್ಯಂತರವೂ ಇಲ್ಲ. ನಿಮ್ಮವರೇ ಬ್ಲಾಕ್ ಮೇಲರ್ಸ್ ಸಂಪುಟ ಎಂದಿದ್ದಾರೆ. ನಿಮ್ಮ ಸಿಡಿಯ ಬಗ್ಗೆಯೂ ಮಾತನಾಡಿದ್ದಾರೆ. ಬ್ಲಾಕ್‌ಮೇಲರ್‌ಗಳು, ಲಂಚ ನೀಡಿರುವವರು ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ ಎಂದು ನಿಮ್ಮದೇ ಪಕ್ಷದ ಕೇಂದ್ರ ಹಾಗೂ ರಾಜ್ಯದ ಮಾಜಿ ಸಚಿವರು, ಶಾಸಕರು ಹೇಳಿಕೆ ಕೊಟ್ಟಿದ್ದಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯ ಸರ್ಕಾರಕ್ಕೆ ಇಷ್ಟು ದಿನ ಮರಾಠರ ಬಗ್ಗೆ ಕಾಳಜಿ ಇರಲಿಲ್ಲವೇ? – ಡಿ.ಕೆ. ಶಿವಕುಮಾರ್‌ ಪ್ರಶ್ನೆ

“ನೀವು ಲಂಚ ಪಡೆದಿದ್ದೀರಿ ಎಂಬ ಮಾತುಗಳು ಕೇಳಿ ಬಂದಿವೆ. ಇದ್ಯಾವುದೂ ನನ್ನ ಹೇಳಿಕೆಯಲ್ಲ. ಇದೆಲ್ಲವೂ ಬಿಜೆಪಿ ಧ್ವನಿ. ಸಿಡಿಯಲ್ಲಿ ಏನಿದೆ ಎಂಬುದು ಅದನ್ನು ನೋಡಿ, ಚರ್ಚೆ ಮಾಡಿರುವ ಬಿಜೆಪಿಯವರಿಗೆ ಗೊತ್ತಿದೆ. ನಾನು ಕಾರವಾರದಲ್ಲೇ ಸಿಡಿ ಬಗ್ಗೆ ಹೇಳಿಕೆ ಕೊಟ್ಟಿದ್ದೆ. ಅದನ್ನ ತೆಗೆದಿಡಿ ಅಂತ ಹೋಂ ಮಿನಿಸ್ಟರ್ ಹೇಳಿದ್ದರು. ಈಗ ನಿಮ್ಮವರೇ ತೆಗೆದಿಡುತ್ತಿದ್ದಾರೆ. ಬಿಜೆಪಿಯವರೇ ಸಿಡಿ ಮತ್ತು ಲಂಚದ ಬಗ್ಗೆ ಹೇಳಿಕೆ ನೀಡ್ತಿದ್ದಾರೆ. ಇದು ಐಪಿಸಿ ಅಪರಾಧ ಆಗುತ್ತದೆ.

ಸಿಡಿ ಒಳಗೆ ಏನಿದೆ ಎಂಬುದು ನಿಮ್ಮವರಿಗೇ ಗೊತ್ತಿದೆ. ಇದರ ಜತೆ ಲಂಚದ ಬಗ್ಗೆಯೂ ಮಾತನಾಡಿದ್ದಾರೆ. ಎಷ್ಟು ಲಂಚ ಕೊಟ್ಟಿದ್ದಾರೆ? ಮತ್ತೊಬ್ಬ ಸಚಿವರು ಅದೆಷ್ಟೋ ಖರ್ಚು ಮಾಡಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಇದೆಲ್ಲದಕ್ಕೂ ಉತ್ತರ ಸಿಗಬೇಕಲ್ಲವೇ? ಇಷ್ಟೆಲ್ಲಾ ಆಗುತ್ತಿದ್ದರೂ ಇಡಿ, ಐಟಿ, ಎಸಿಬಿ ಏನು ಮಾಡುತ್ತಿದ್ದಾರೆ? ಈ ಸಂಸ್ಥೆಗಳು ಯಾಕೆ ಸುಮ್ಮನಿವೆ? ಇವರೆಲ್ಲರೂ ಸುಮೋಟೋ ಕೇಸ್ ಯಾಕೆ ದಾಖಲಿಸುತ್ತಿಲ್ಲ?” ಎಂದು ಅವರು ಪ್ರಶ್ನಿಸಿದ್ದಾರೆ.

“ನಿಮ್ಮ ನಾಯಕರೇ ಇಷ್ಟೆಲ್ಲಾ ಆರೋಪ ಮಾಡಿರುವಾಗ ನೀವು ನೈತಿಕ ಹೊಣೆ ಹೊರಬೇಕಿದೆ. ಬ್ಲಾಕ್ ಮೇಲ್, ಲಂಚ ಆರೋಪದ ಬಗ್ಗೆ ನ್ಯಾಯಾಂಗ ತನಿಖೆಯಾಗಬೇಕು. ಹೈಕೋರ್ಟ್ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಈ ತನಿಖೆ ನಡೆಯಬೇಕು. ಐಟಿ, ಇಡಿಯವರು ಸುಮೋಟೋ ಕೇಸ್ ಹಾಕಬೇಕು” ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ: ಕೊರೊನಾದಿಂದ ದೇವರೆ ಕಾಪಾಡುವುದಾದರೆ ನೀವು ಯಾಕೆ ? ರಾಜಿನಾಮೆ ಕೊಟ್ಟು ಹೋಗಿ: ಡಿ. ಕೆ. ಶಿವಕುಮಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...