Homeಮುಖಪುಟಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಪ್ರತಿ ಎರಡು ವಾರಗಳಿಗೊಮ್ಮೆ ಬಿಜೆಪಿ ನಾಯಕರು ಮುಖ್ಯಮಂತ್ರಿಗೆ ಕರೆ ಮಾಡಿ ಮೈತ್ರಿಗಾಗಿ ವಿನಂತಿಸುತ್ತಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದ ವಿರೋಧ ಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯೊಂದಿಗೆ ಹೊಂದಾಣಿಕೆ ಮಾಡಲು ಉತ್ಸುಕರಾಗಿದ್ದು, ಅದಕ್ಕೆ ಪ್ರಯತ್ನಿಸುತ್ತಿದೆ ಎಂದು ಶಿವಸೇನೆಯ ಹಿರಿಯ ನಾಯಕ ಕಿಶೋರ್ ತಿವಾರಿ ಶುಕ್ರವಾರ ಹೇಳಿದ್ದಾರೆ. ಇದಲ್ಲದೇ, ಶಿವಸೇನೆಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.

ಶಿವಸೇನೆ ಎರಡು ದಶಕಗಳಿಂದ ಬಿಜೆಪಿಯ ಮಿತ್ರಪಕ್ಷವಾಗಿತ್ತು. ಆದರೆ ಮಹಾರಾಷ್ಟ್ರದಲ್ಲಿ ಕಳೆದ ಬಾರಿ ಸರ್ಕಾರ ರಚನೆಯ ಸಂದರ್ಭದ “ಮಹಾ ವಿಕಾಸ ಅಘಾಡಿ” ಸರ್ಕಾರ ರಚಿಸಿ ರಾಷ್ಟ್ರೀಯವಾದಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

“ಪ್ರತಿ ಎರಡು ವಾರಗಳಿಗೊಮ್ಮೆ, ಬಿಜೆಪಿ ನಾಯಕರು ಮುಖ್ಯಮಂತ್ರಿಗೆ ಕರೆ ಮಾಡಿ, ಭೂತಕಾಲವನ್ನು ಸಮಾಧಿ ಮಾಡಲು ಮತ್ತು ಹೊಸದಾಗಿ ಆರಂಭಿಸಲು ವಿನಂತಿಸುತ್ತಾರೆ. ವಾಸ್ತವವಾಗಿ, ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರಂತಹ ಜನರು ಮತ್ತು ನಾನು ಶಿವಸೇನೆ-ಬಿಜೆಪಿ ನಡುವೆ ಮಧ್ಯಸ್ಥಿಕೆ ವಹಿಸಲು ಬಯಸುತ್ತೇನೆ” ಎಂದು ಕಿಶೋರ್ ತಿವಾರಿ ಹೇಳಿದ್ದಾರೆ.

ಕಳೆದ ಆರು ತಿಂಗಳಿನಿಂದಲೂ ಫಡ್ನವೀಸ್ ಮತ್ತು ಇತರ ಬಿಜೆಪಿಯ ಉನ್ನತ ನಾಯಕರು ಠಾಕ್ರೆ ಅವರ ಜೊತೆಗೆ ಮತ್ತೆ ಸಂಬಂಧ ಸಾಧಿಸಲು ಭೇಟಿಗಾಗಿ ಕಾಯುತ್ತಿದ್ದಾರೆ. ಬಿಜೆಪಿಯ ಪೂರ್ಣ ಬೆಂಬಲದೊಂದಿಗೆ, ಐದು ವರ್ಷವು ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ನೀಡುವ ಮತ್ತು ಅವರ ಆಯ್ಕೆಯ ಇಲಾಖೆಯನ್ನೂ ನೀಡುವುದಕ್ಕೂ ಬಿಜೆಪಿ ತಯಾರಿದೆ ಎಂದು ತಿವಾರಿ ಹೇಳಿದ್ದಾರೆ.

ಆದರೆ, ಮುಖ್ಯಮಂತ್ರಿ ಠಾಕ್ರೆ ಬಿಜೆಪಿಯ ಎಲ್ಲಾ ಆಫರ್‌ಗಳನ್ನು ಜೂನ್‌ನಲ್ಲಿ ಸಾರ್ವಜನಿಕವಾಗಿ ತಿರಸ್ಕರಿಸಿದ್ದಾರೆ. “ನಾನು ನನ್ನ ಮಾತನ್ನು ಎನ್‌ಸಿಪಿ-ಕಾಂಗ್ರೆಸ್‌ಗೆ ನೀಡಿದ್ದೇನೆ, ಅವರಿಗೆ ದ್ರೋಹ ಮಾಡುವುದಿಲ್ಲ” ಎಂದು ಠಾಕ್ರೆ ಹೇಳಿದ್ದಾರೆ ಎಂದು ತಿವಾರಿ ಹೇಳಿದ್ದಾರೆ.

ಠಾಕ್ರೆ ಸೇರಿದಂತೆ ಪ್ರಮುಖ ಶಿವಸೇನೆಯ ನಾಯಕರು, “ಲೋಕಸಭಾ ಚುನಾವಣೆಗೆ ಮುನ್ನ ಫೆಬ್ರವರಿ 2019 ರಲ್ಲಿ ಬಿಜೆಪಿ ನೀಡಿದ್ದ ಮಾತನ್ನು ಮುರಿದು ‘ವಿಶ್ವಾಸಘಾತುಕತನ’ ಮಾಡಿದೆ” ಎಂದು ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...