Homeಮುಖಪುಟಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಪ್ರತಿ ಎರಡು ವಾರಗಳಿಗೊಮ್ಮೆ ಬಿಜೆಪಿ ನಾಯಕರು ಮುಖ್ಯಮಂತ್ರಿಗೆ ಕರೆ ಮಾಡಿ ಮೈತ್ರಿಗಾಗಿ ವಿನಂತಿಸುತ್ತಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದ ವಿರೋಧ ಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯೊಂದಿಗೆ ಹೊಂದಾಣಿಕೆ ಮಾಡಲು ಉತ್ಸುಕರಾಗಿದ್ದು, ಅದಕ್ಕೆ ಪ್ರಯತ್ನಿಸುತ್ತಿದೆ ಎಂದು ಶಿವಸೇನೆಯ ಹಿರಿಯ ನಾಯಕ ಕಿಶೋರ್ ತಿವಾರಿ ಶುಕ್ರವಾರ ಹೇಳಿದ್ದಾರೆ. ಇದಲ್ಲದೇ, ಶಿವಸೇನೆಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.

ಶಿವಸೇನೆ ಎರಡು ದಶಕಗಳಿಂದ ಬಿಜೆಪಿಯ ಮಿತ್ರಪಕ್ಷವಾಗಿತ್ತು. ಆದರೆ ಮಹಾರಾಷ್ಟ್ರದಲ್ಲಿ ಕಳೆದ ಬಾರಿ ಸರ್ಕಾರ ರಚನೆಯ ಸಂದರ್ಭದ “ಮಹಾ ವಿಕಾಸ ಅಘಾಡಿ” ಸರ್ಕಾರ ರಚಿಸಿ ರಾಷ್ಟ್ರೀಯವಾದಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

“ಪ್ರತಿ ಎರಡು ವಾರಗಳಿಗೊಮ್ಮೆ, ಬಿಜೆಪಿ ನಾಯಕರು ಮುಖ್ಯಮಂತ್ರಿಗೆ ಕರೆ ಮಾಡಿ, ಭೂತಕಾಲವನ್ನು ಸಮಾಧಿ ಮಾಡಲು ಮತ್ತು ಹೊಸದಾಗಿ ಆರಂಭಿಸಲು ವಿನಂತಿಸುತ್ತಾರೆ. ವಾಸ್ತವವಾಗಿ, ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರಂತಹ ಜನರು ಮತ್ತು ನಾನು ಶಿವಸೇನೆ-ಬಿಜೆಪಿ ನಡುವೆ ಮಧ್ಯಸ್ಥಿಕೆ ವಹಿಸಲು ಬಯಸುತ್ತೇನೆ” ಎಂದು ಕಿಶೋರ್ ತಿವಾರಿ ಹೇಳಿದ್ದಾರೆ.

ಕಳೆದ ಆರು ತಿಂಗಳಿನಿಂದಲೂ ಫಡ್ನವೀಸ್ ಮತ್ತು ಇತರ ಬಿಜೆಪಿಯ ಉನ್ನತ ನಾಯಕರು ಠಾಕ್ರೆ ಅವರ ಜೊತೆಗೆ ಮತ್ತೆ ಸಂಬಂಧ ಸಾಧಿಸಲು ಭೇಟಿಗಾಗಿ ಕಾಯುತ್ತಿದ್ದಾರೆ. ಬಿಜೆಪಿಯ ಪೂರ್ಣ ಬೆಂಬಲದೊಂದಿಗೆ, ಐದು ವರ್ಷವು ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ನೀಡುವ ಮತ್ತು ಅವರ ಆಯ್ಕೆಯ ಇಲಾಖೆಯನ್ನೂ ನೀಡುವುದಕ್ಕೂ ಬಿಜೆಪಿ ತಯಾರಿದೆ ಎಂದು ತಿವಾರಿ ಹೇಳಿದ್ದಾರೆ.

ಆದರೆ, ಮುಖ್ಯಮಂತ್ರಿ ಠಾಕ್ರೆ ಬಿಜೆಪಿಯ ಎಲ್ಲಾ ಆಫರ್‌ಗಳನ್ನು ಜೂನ್‌ನಲ್ಲಿ ಸಾರ್ವಜನಿಕವಾಗಿ ತಿರಸ್ಕರಿಸಿದ್ದಾರೆ. “ನಾನು ನನ್ನ ಮಾತನ್ನು ಎನ್‌ಸಿಪಿ-ಕಾಂಗ್ರೆಸ್‌ಗೆ ನೀಡಿದ್ದೇನೆ, ಅವರಿಗೆ ದ್ರೋಹ ಮಾಡುವುದಿಲ್ಲ” ಎಂದು ಠಾಕ್ರೆ ಹೇಳಿದ್ದಾರೆ ಎಂದು ತಿವಾರಿ ಹೇಳಿದ್ದಾರೆ.

ಠಾಕ್ರೆ ಸೇರಿದಂತೆ ಪ್ರಮುಖ ಶಿವಸೇನೆಯ ನಾಯಕರು, “ಲೋಕಸಭಾ ಚುನಾವಣೆಗೆ ಮುನ್ನ ಫೆಬ್ರವರಿ 2019 ರಲ್ಲಿ ಬಿಜೆಪಿ ನೀಡಿದ್ದ ಮಾತನ್ನು ಮುರಿದು ‘ವಿಶ್ವಾಸಘಾತುಕತನ’ ಮಾಡಿದೆ” ಎಂದು ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...