Homeಮುಖಪುಟಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಬಿಜೆಪಿ ಮತ್ತೆ ಹೊಂದಾಣಿಕೆಗೆ ಪ್ರಯತ್ನಿಸುತ್ತಿದೆ: ಶಿವಸೇನೆಯ ಹಿರಿಯ ನಾಯಕ

ಪ್ರತಿ ಎರಡು ವಾರಗಳಿಗೊಮ್ಮೆ ಬಿಜೆಪಿ ನಾಯಕರು ಮುಖ್ಯಮಂತ್ರಿಗೆ ಕರೆ ಮಾಡಿ ಮೈತ್ರಿಗಾಗಿ ವಿನಂತಿಸುತ್ತಿದ್ದಾರೆ

- Advertisement -
- Advertisement -

ಮಹಾರಾಷ್ಟ್ರದ ವಿರೋಧ ಪಕ್ಷವಾದ ಬಿಜೆಪಿಯು ಮುಖ್ಯಮಂತ್ರಿ ಉದ್ಧವ್ ಠಾಕ್ರೆಯೊಂದಿಗೆ ಹೊಂದಾಣಿಕೆ ಮಾಡಲು ಉತ್ಸುಕರಾಗಿದ್ದು, ಅದಕ್ಕೆ ಪ್ರಯತ್ನಿಸುತ್ತಿದೆ ಎಂದು ಶಿವಸೇನೆಯ ಹಿರಿಯ ನಾಯಕ ಕಿಶೋರ್ ತಿವಾರಿ ಶುಕ್ರವಾರ ಹೇಳಿದ್ದಾರೆ. ಇದಲ್ಲದೇ, ಶಿವಸೇನೆಯ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಳ್ಳಲು ಬಿಜೆಪಿ ಸಿದ್ಧವಿದೆ ಎಂದು ಅವರು ತಿಳಿಸಿದ್ದಾರೆ.

ಶಿವಸೇನೆ ಎರಡು ದಶಕಗಳಿಂದ ಬಿಜೆಪಿಯ ಮಿತ್ರಪಕ್ಷವಾಗಿತ್ತು. ಆದರೆ ಮಹಾರಾಷ್ಟ್ರದಲ್ಲಿ ಕಳೆದ ಬಾರಿ ಸರ್ಕಾರ ರಚನೆಯ ಸಂದರ್ಭದ “ಮಹಾ ವಿಕಾಸ ಅಘಾಡಿ” ಸರ್ಕಾರ ರಚಿಸಿ ರಾಷ್ಟ್ರೀಯವಾದಿ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿತು.

ಇದನ್ನೂ ಓದಿ: ಮಹಾರಾಷ್ಟ್ರ BJP ಕಾರ್ಯಕರ್ತರ ಮೇಲೆ ಪ್ರಕರಣ ದಾಖಲು: ಬಿಜೆಪಿ -ಶಿವಸೇನೆ ನಡುವೆ ವಾಕ್ಸಮರ

“ಪ್ರತಿ ಎರಡು ವಾರಗಳಿಗೊಮ್ಮೆ, ಬಿಜೆಪಿ ನಾಯಕರು ಮುಖ್ಯಮಂತ್ರಿಗೆ ಕರೆ ಮಾಡಿ, ಭೂತಕಾಲವನ್ನು ಸಮಾಧಿ ಮಾಡಲು ಮತ್ತು ಹೊಸದಾಗಿ ಆರಂಭಿಸಲು ವಿನಂತಿಸುತ್ತಾರೆ. ವಾಸ್ತವವಾಗಿ, ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರಂತಹ ಜನರು ಮತ್ತು ನಾನು ಶಿವಸೇನೆ-ಬಿಜೆಪಿ ನಡುವೆ ಮಧ್ಯಸ್ಥಿಕೆ ವಹಿಸಲು ಬಯಸುತ್ತೇನೆ” ಎಂದು ಕಿಶೋರ್ ತಿವಾರಿ ಹೇಳಿದ್ದಾರೆ.

ಕಳೆದ ಆರು ತಿಂಗಳಿನಿಂದಲೂ ಫಡ್ನವೀಸ್ ಮತ್ತು ಇತರ ಬಿಜೆಪಿಯ ಉನ್ನತ ನಾಯಕರು ಠಾಕ್ರೆ ಅವರ ಜೊತೆಗೆ ಮತ್ತೆ ಸಂಬಂಧ ಸಾಧಿಸಲು ಭೇಟಿಗಾಗಿ ಕಾಯುತ್ತಿದ್ದಾರೆ. ಬಿಜೆಪಿಯ ಪೂರ್ಣ ಬೆಂಬಲದೊಂದಿಗೆ, ಐದು ವರ್ಷವು ಮುಖ್ಯಮಂತ್ರಿ ಸ್ಥಾನವನ್ನು ಅವರಿಗೆ ನೀಡುವ ಮತ್ತು ಅವರ ಆಯ್ಕೆಯ ಇಲಾಖೆಯನ್ನೂ ನೀಡುವುದಕ್ಕೂ ಬಿಜೆಪಿ ತಯಾರಿದೆ ಎಂದು ತಿವಾರಿ ಹೇಳಿದ್ದಾರೆ.

ಆದರೆ, ಮುಖ್ಯಮಂತ್ರಿ ಠಾಕ್ರೆ ಬಿಜೆಪಿಯ ಎಲ್ಲಾ ಆಫರ್‌ಗಳನ್ನು ಜೂನ್‌ನಲ್ಲಿ ಸಾರ್ವಜನಿಕವಾಗಿ ತಿರಸ್ಕರಿಸಿದ್ದಾರೆ. “ನಾನು ನನ್ನ ಮಾತನ್ನು ಎನ್‌ಸಿಪಿ-ಕಾಂಗ್ರೆಸ್‌ಗೆ ನೀಡಿದ್ದೇನೆ, ಅವರಿಗೆ ದ್ರೋಹ ಮಾಡುವುದಿಲ್ಲ” ಎಂದು ಠಾಕ್ರೆ ಹೇಳಿದ್ದಾರೆ ಎಂದು ತಿವಾರಿ ಹೇಳಿದ್ದಾರೆ.

ಠಾಕ್ರೆ ಸೇರಿದಂತೆ ಪ್ರಮುಖ ಶಿವಸೇನೆಯ ನಾಯಕರು, “ಲೋಕಸಭಾ ಚುನಾವಣೆಗೆ ಮುನ್ನ ಫೆಬ್ರವರಿ 2019 ರಲ್ಲಿ ಬಿಜೆಪಿ ನೀಡಿದ್ದ ಮಾತನ್ನು ಮುರಿದು ‘ವಿಶ್ವಾಸಘಾತುಕತನ’ ಮಾಡಿದೆ” ಎಂದು ಎಂದು ಪದೇ ಪದೇ ಆರೋಪಿಸುತ್ತಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ಸ್ಥಳೀಯ ಸಂಸ್ಥೆಯಿಂದ 4.80 ಲಕ್ಷ ರೂ. ಬಿಜೆಪಿಗೆ ವರ್ಗಾವಣೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...