Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...