Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...