Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...