Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...