Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...