Homeಫ್ಯಾಕ್ಟ್‌ಚೆಕ್2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಮಂಗಳೂರಿನ ಕಾರ್ಯಕ್ರಮದೆಂದು ಬಿಂಬಿಸಿದ ಬಿಜೆಪಿ ನಾಯಕರು!

2019ರಲ್ಲಿ ನಡೆದ ಕೊಲ್ಕತ್ತಾ ರ್‍ಯಾಲಿ ವಿಡಿಯೊವನ್ನು ಕಚ್ ಹಾಗೂ ಮಂಗಳೂರು ಕಾರ್ಯಕ್ರಮದ ವಿಡಿಯೊ ಎಂದು ಪ್ರತಿಪಾದಿಸಿ ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.

- Advertisement -
- Advertisement -

ರ್‍ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜನಸಮೂಹದತ್ತ ಕೈಬೀಸುತ್ತಿರುವ 30 ಸೆಕೆಂಡುಗಳ ಕ್ಲಿಪ್ಅನ್ನು ಬಿಜೆಪಿ ನಾಯಕರಾದ ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಹಂಚಿಕೊಳ್ಳುತ್ತಿದ್ದಾರೆ.

ಈ ವೀಡಿಯೊ ಕಚ್‌ನಲ್ಲಿ ನಡೆದ ಕಾರ್ಯಕ್ರಮದೆಂದು ಎಂದು ಪ್ರತಿಪಾದಿಸಿದರೆ ಮತ್ತೆ ಕೆಲವರು ಇದು ಮಂಗಳೂರಿನದ್ದು ಎಂದು ಟ್ವೀಟ್ ಮಾಡಿದ್ದಾರೆ.

2022ರ ಆಗಸ್ಟ್ 28ರಂದು ನರ್ಮದಾ ಕಾಲುವೆಯನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿಯವರು ಕಚ್ ಜಿಲ್ಲೆಯ ಭುಜ್‌ನಲ್ಲಿ ರೋಡ್‌ಶೋ ನಡೆಸಿದರು. ಸೆಪ್ಟೆಂಬರ್ 2ರಂದು ಮಂಗಳೂರಿಗೆ ಭೇಟಿ ನೀಡಿದ ಅವರು ₹ 3,800 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು.

ಅಮಿತ್ ಮಾಳವಿಯಾ ಸೆಪ್ಟೆಂಬರ್ 2ರಂದು ಟ್ವೀಟ್ ಮಾಡಿದ್ದು #Mangaluru ಹ್ಯಾಶ್‌ಟ್ಯಾಗ್‌ ಬಳಸಿದ್ದಾರೆ. ಈ ವೀಡಿಯೊ ಮಂಗಳೂರಿನದ್ದು ಎಂದು ಪ್ರತಿಪಾದಿಸಿದ್ದಾರೆ. ಬಳಿಕ ವಿಡಿಯೋವನ್ನು ಡಿಲೀಟ್‌ ಮಾಡಿದ್ದಾರೆ. (ಟ್ವೀಟ್‌ನ ಆರ್ಕೈವ್ ಲಿಂಕ್)

ಆಂಧ್ರಪ್ರದೇಶದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಷ್ಣುವರ್ಧನ್ ರೆಡ್ಡಿ ಕೂಡ ಈ ವಿಡಿಯೋವನ್ನು ಶೇರ್ ಮಾಡಿದ್ದು, ಇದು ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೆಂದು ಪ್ರತಿಪಾದಿಸಿದ್ದಾರೆ (ಆರ್ಕೈವ್ ಲಿಂಕ್).

ಇದೇ ವಿಡಿಯೋವನ್ನು ಸ್ಥಳೀಯ ಪತ್ರಕರ್ತ ಸೂರಜ್ ಸುರೇಶ್ ಹಂಚಿಕೊಂಡಿದ್ದು, “ಇಂದು ಮಂಗಳೂರಿನಲ್ಲಿ ಪ್ರಧಾನಿ ಮೋದಿ ಅವರನ್ನು ಹೀಗೆ ಸ್ವಾಗತಿಸಲಾಯಿತು” ಎಂದು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ಬಿಜೆಪಿ ನಾಯಕಿ ಪ್ರೀತಿ ಗಾಂಧಿ ಅವರು ಇದೇ ವೀಡಿಯೋವನ್ನು ಆಗಸ್ಟ್ 28ರಂದು ಹಂಚಿಕೊಂಡಿದ್ದು, ಭುಜ್ ರೋಡ್‌ಶೋ ವಿಡಿಯೊವೆಂದು ಟ್ವೀಟ್ ಮಾಡಿದ್ದರು. “ಇದು ಕಚ್‌ನ ಜನರು ಇಂದು ನಮ್ಮ ಗೌರವಾನ್ವಿತ ಪ್ರಧಾನಿ ಅವರಿಗೆ ನೀಡಿದ ರೋಚಕ ಸ್ವಾಗತವಿದು. ಊಹೆಗೂ ನಿಲುಕದ ಉತ್ಸಾಹ” ಎಂದು ಅವರು ಬರೆದುಕೊಂಡಿದ್ದಾರೆ (ಆರ್ಕೈವ್ ಲಿಂಕ್).

ವಾಸ್ತವವೇನು?

ರಿವರ್ಸ್ ಇಮೇಜ್ ಸರ್ಚ್ ಮತ್ತು ಕೀವರ್ಡ್ ಮೂಲಕ ‘ಆಲ್ಟ್‌ ನ್ಯೂಸ್’ ಹುಡುಕಾಟ ನಡೆಸಿದೆ. ಇದೇ ವಿಡಿಯೊವನ್ನು ಪಶ್ಚಿಮ ಬಂಗಾಳದಲ್ಲಿ ನಡೆದ ಚುನಾವಣಾ ರ್‍ಯಾಲಿಯ ನಂತರ 2019ರ ಏಪ್ರಿಲ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ ಎಂದು ಕಂಡುಬಂದಿದೆ. ಕುತೂಹಲಕಾರಿ ಅಂಶವೆಂದರೆ, 2019ರಲ್ಲಿ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯ ನಂತರ ಪ್ರೀತಿ ಗಾಂಧಿ ಮತ್ತು ಅಮಿತ್ ಮಾಳವಿಯಾ ಇಬ್ಬರೂ ಇದೇ ವೀಡಿಯೊವನ್ನು ಟ್ವೀಟ್ ಮಾಡಿದ್ದರು. (ಆರ್ಕೈವ್ ಮಾಡಿದ ಲಿಂಕ್‌ಗಳು- 1, 2)

ಏಪ್ರಿಲ್ 3, 2019ರಂದು ಬಿಜೆಪಿಯ ಅಧಿಕೃತ ಟ್ವಿಟರ್‌ ಹ್ಯಾಂಡಲ್‌ನಿಂದ ಈ ವೀಡಿಯೊವನ್ನು ಪೋಸ್ಟ್ ಮಾಡಲಾಗಿದೆ. ಕೊಲ್ಕತ್ತಾದಲ್ಲಿ ನಡೆದ ಪ್ರಧಾನಿ ಕಾರ್ಯಕ್ರಮವೆಂದು ಬಿಜೆಪಿ ಟ್ವೀಟ್ ಮಾಡಿತ್ತು. (ಆರ್ಕೈವ್ ಲಿಂಕ್‌)

ಪಿಎಂ ಮೋದಿ ಅವರ ಅಧಿಕೃತ ಹ್ಯಾಂಡಲ್‌ನಲ್ಲೂ ಇದೇ ವಿಡಿಯೊವನ್ನು, ಏಪ್ರಿಲ್ 3, 2019ರಂದು ಟ್ವೀಟ್ ಮಾಡಲಾಗಿತ್ತು. ಈ ವೀಡಿಯೊ ಕೊಲ್ಕತ್ತಾದೆಂದು ತಿಳಿಸಲಾಗಿತ್ತು (ಆರ್ಕೈವ್ ಮಾಡಿದ ಲಿಂಕ್).

 

2019 ಹಾಗೂ 2022ರ ವಿಡಿಯೊವನ್ನು ಈ ಕೆಳಗೆ ತುಲನೆ ಮಾಡಲಾಗಿದೆ ನೋಡಿ. ಎರಡು ಕೂಡ ಒಂದೇ ಎಂಬುದು ಎದ್ದು ಕಾಣುತ್ತಿದೆ.

PC: Alt News

ಕೋಲ್ಕತ್ತಾದ ರ್‍ಯಾಲಿಯ ವಿಡಿಯೋವನ್ನು ಬಿಜೆಪಿಯ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲೂ ಅಪ್ಲೋಡ್ ಮಾಡಲಾಗಿದೆ. ಜನರು ‘ಮೋದಿ ಮೋದಿ’ ಎಂದು ಕೂಗುತ್ತಿರುವುದನ್ನು ವೀಡಿಯೊದ 3:36ನೇ ನಿಮಿಷದಲ್ಲಿ ನೋಡಬಹುದು. ಮೋದಿ ಜನಸಮೂಹದತ್ತ ಕೈ ಬೀಸುತ್ತಿರುವುದನ್ನು ಕಾಣಬಹುದು.

 

ಹಾಗಾಗಿ ಕೋಲ್ಕತ್ತಾದ ಬಿಜೆಪಿ ರ್‍ಯಾಲಿಯ ಹಳೆಯ ವೀಡಿಯೊವನ್ನು ಅಮಿತ್ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಸೇರಿದಂತೆ ಬಿಜೆಪಿಯ ರಾಜಕಾರಣಿಗಳು ಇತ್ತೀಚೆಗೆ ಹಂಚಿಕೊಂಡಿದ್ದಾರೆ ಎಂಬುದು ಸ್ಪಷ್ಟವಾಗಿದೆ. ಕೆಲವರು ಈ ವಿಡಿಯೋವನ್ನು ಕಚ್‌ನ ಕಾರ್ಯಕ್ರಮದೆಂದು ಹೇಳಿಕೊಂಡರೆ, ಇನ್ನು ಕೆಲವರು ಮಂಗಳೂರಿನ ವಿಡಿಯೋ ಎಂದು ಶೇರ್ ಮಾಡಿದ್ದಾರೆ. 2019ರಲ್ಲಿ ಕೋಲ್ಕತ್ತಾ ರ್‍ಯಾಲಿಯ ನಂತರ ಮಾಳವಿಯಾ ಮತ್ತು ಪ್ರೀತಿ ಗಾಂಧಿ ಇಬ್ಬರೂ ಒಂದೇ ವೀಡಿಯೊವನ್ನು ಹಂಚಿಕೊಂಡಿದ್ದರು.

(ಕೃಪೆ: ಆಲ್ಟ್‌ನ್ಯೂಸ್‌)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...