Homeಮುಖಪುಟರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು - ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ ಹೋರಾಟ ನಡೆಸಿದ ರೈತರು ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ. ಆದರೆ ಈ ಹೋರಾಟದಲ್ಲಿ ರೈತರು ತೆತ್ತ ಬಲೆ ಅಪರಿಮಿತವಾದುದು. 700 ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ತೆತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಇಡಿ ಒಂದು ವರ್ಷ ರೈತರನ್ನು ಕೆಟ್ಟ ಪದಗಳಿಂದ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಟೀಕಿಸಿದರು. ಇಲ್ಲಸಲ್ಲದ ಆರೋಪ ಹೊರಿಸಿದರು. ಅವರನ್ನು ಕ್ಷಮಿಸಲು ಸಾಧ್ಯವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

ರೈತರನ್ನು ಅವಮಾನಿಸಿದ ಬಿಜೆಪಿ ನಾಯಕರು ಮತ್ತು ಅವರ ಆಧಾರ ರಹಿತ ಆರೋಪಗಳು, ಕೆಟ್ಟ ಹೇಳಿಕೆಗಳು ಕೆಳಗಿನಂತಿವೆ. ನೀವೂ ಓದಿ, ಅವರನ್ನು ಕ್ಷಮಿಸಬೇಕೊ? ಶಿಕ್ಷಸಬೇಕೊ ತೀರ್ಮಾನಿಸಿ.

2021ರ ಆಗಸ್ಟ್ 17 ರಂದು ಮೈಸೂರಿನಲ್ಲಿ ಮಾತನಾಡಿದ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು “ರೈತರ ಆದಾಯ ದ್ವಿಗುಣಕ್ಕೆ ಮೋದಿ ಕಾಯ್ದೆಗಳನ್ನು ತಂದಿದ್ದಾರೆ. ಇದನ್ನು ಸಹಿಸಿದವರು ಹೋರಾಟಕ್ಕೆ ಇಳಿದಿದ್ದಾರೆ. ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ದಲ್ಲಾಳಿಗಳ, ಮಧ್ಯವರ್ತಿಗಳ ಧರಣಿಯಾಗಿ ಬದಲಾಗಿದೆ” ಎಂದು ಹೇಳಿದ್ದರು.

2021ರ ಸೆಪ್ಟಂಬರ್ 21 ರಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ, ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದರು.

ಇನ್ನು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅಂತು “ಇದು ರೈತರ ಪ್ರತಿಭಟನೆಯಲ್ಲ, ಭಯೋತ್ಪಾದಕರ ಕೃತ್ಯ. ಖಾಲಿಸ್ತಾನ ಮತ್ತು ಕಾಂಗ್ರೆಸ್‌‌ನವರು ಇದರ ಹಿಂದೆ ಇದ್ದು, ಮೋದಿ ಬೆಳವಣಿಗೆ ಸಹಿಸದೆ ಹತಾಶರಾದವರು ಈ ರೀತಿಯ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ” ಎಂದು ಅಸೂಕ್ಷ್ಮವಾಗಿ ಮಾತನಾಡಿದ್ದರು.

ನಾಲಿಗೆ ಹರಿಯಬಿಟ್ಟ ಕೇಂದ್ರದ ನಾಯಕರು

“ನಿಮಗೆ ಪಾಠ ಕಲಿಸಲು ಎರಡು ನಿಮಿಷ ಸಾಕು” ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಹೇಳಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಮಗ ಆಶಿಸ್ ಮಿಶ್ರಾ ಮತ್ತು ಇನ್ನಿತರ ಬಿಜೆಪಿ ಮುಖಂಡರು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮುಗಿಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕಾರು ಹರಿಸಿದರು. ನಾಲ್ವರು ರೈತರು ಸೇರಿ 8 ಜನರ ಕೊಲೆಗೆ ಕಾರಣರಾದರು.

“ಈ ಪ್ರತಿಭಟನೆ ಮಾಡುತ್ತಿರುವವರು ಖಲಿಸ್ತಾನ್‌ ಧ್ವಜ ಹಿಡಿದ ಭಯೋತ್ಪಾದಕರು” ಎಂದು ರಾಜಸ್ತಾನದ ದೌಸಾ ಕ್ಷೇತ್ರದ ಬಿಜೆಪಿ ಸಂಸದೆ ಜಸ್‌ ಕೌರ್‌ ಮೀನಾ ನಾಳಿಗೆ ಹರಿಬಿಟ್ಟಿದ್ದರು. ಅಲ್ಲದೆ ಈ ಪ್ರತಿಭಟನಾ ನಿರತ ರೈತರಲ್ಲಿ ಎ.ಕೆ.-47 ಕೂಡಾ ಇದೆ ಎಂದು ಅವರು ಆಪಾದಿಸಿದ್ದರು.

“ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” – ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್.

“ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಇವರು” ಎಂದು ಬಿಜೆಪಿ ಐಟಿಸೆಲ್ಲಿನ ಮುಖ್ಯಸ್ಥ ಅಮಿತ್‌ ಮಾಳವೀಯಾ ಮಾಡಿದ ಆರೋಪಿಸಿದ್ದರು.

“ದೇಶದಲ್ಲಿ ಆಂದೋಲನ್ ಜೀವಿ ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ. ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್ ಜೀವಿ ಎಂಬ ಹೊಸ ಪದವು ಅಸ್ತಿತ್ವಕ್ಕೆ ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ.. – ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಮಾತುಗಳಿವು.

“ಗೂಂಡಾಗಳು ರೈತರ ವೇಶದಲ್ಲಿ ಕೂತಿದ್ದಾರೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವೈ. ಸತ್ಯಕುಮಾರ್ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಖಲಿಸ್ತಾನಿ ಮತ್ತು ಜಿಹಾದಿ ಪಡೆಗಳು ಭಯೋತ್ಪಾದನೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದೂ ಈ ನಾಯಕ ಹೇಳಿದ್ದ.

“ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” – ಅನಿಲ್ ವಿಜ್, ಹರಿಯಾಣದ ಗೃಹ ಸಚಿವ.

“ಉಗ್ರವಾದಿಗಳು ಚಳವಳಿಯನ್ನು ಹೈಜಾಕ್‌ ಮಾಡಿದ್ದಾರೆ. ಖಲಿಸ್ತಾನಿ ಮತ್ತು ಪಾಕಿಸ್ತಾನ ಪರ ಘೋಷಣೆಗಳನ್ನು ಪ್ರತಿಭಟನಾ ನಿರತ ರೈತರು ಕೂಗಿದ್ದಾರೆ” ಎಂದು ಮತ್ತೊಬ್ಬ ಬಿಜೆಪಿ ಕಾರ್ಯದರ್ಶಿ ದುಷ್ಯಂತ್‌ ಕುಮಾರ್‌ ಗೌತಮ್ ಮನಬಂದಂತೆ ಮಾತನಾಡಿದ್ದರು.

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು – ಹೋರಾಟದ ಕಣದಲ್ಲಿ ಹುತಾತ್ಮರಾದ ರೈತರ ಕುರಿತು ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್ ಹೇಳಿಕೆ.

“ಅನಪೇಕ್ಷಿತ ಪಡೆಗಳು ಇಲ್ಲಿವೆ. ಇವು ಮುಕ್ತವಾಗಿ ಖಲಿಸ್ತಾನವನ್ನು ಬೆಂಬಲಿಸುತ್ತಿವೆ. ಕಿಸಾನ್ ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಎಂದು ಹರ್ಯಾಣಾದ ಮುಖ್ಯಮಂತ್ರಿ ಎಂದು ಮನೋಹರ ಲಾಲ್‌ ಖಟ್ಟರ್ ಹೇಳಿದ್ದರು.

“ತುಕ್ಡೇ ಗ್ಯಾಂಗ್‌ ಈ ಪ್ರತಿಭಟನೆಯನ್ನು ಹೈಜಾಕ್‌ ಮಾಡಿದೆ” ಎಂದು ಬಿಹಾರದ ಭಾಜಪ ನಾಯಕ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದರು.

“ಅರಾಜಕತಾ ಷಡ್ಯಂತ್ರಗಳ ಪ್ರಯೋಗಪಶುಗಳು ಈ ರೈತರು” ಎಂದು ಆರ್‌ಎಸ್‌ಎಸ್‌ಮುಖಂಡ ಬಿ.ಎಲ್‌ ಸಂತೋಷ್ ಆರೋಪಿಸಿದ್ದರು.

“ಕರಾಳ ಷಡ್ಯಂತ್ರ. ತುಕುಡೇ ಗ್ಯಾಂಗ್‌ ಈ ಚಳವಳಿಯ ನೇತೃತ್ವ ಕಸಿದುಕೊಂಡಿದ್ದು ಕರಾಳ ಹುನ್ನಾರ ಹೊಂದಿದೆ” ಎಂದು ಆಗಿನ ಕೇಂದ್ರ ಕಾನೂನುಸಚಿವ ರವಿಶಂಕರ್‌ ಪ್ರಸಾದ್ ಹೇಳಿದ್ದರು.

”ಈ ಪ್ರತಿಭಟನೆಗಳ ಹಿಂದೆ ಚೀನಾ ಮತ್ತು ಪಾಕಿಸ್ತಾನ ಇವೆ. ಈ ಚಳವಳಿ ರೈತರದ್ದಲ್ಲ. ಇದರಲ್ಲಿ ಖಂಡಿತ ಚೀನಾ ಮತ್ತು ಪಾಕಿಸ್ತಾನದ ಕೈವಾಡ ಇದೆ” ಎಂದು ಕೇಂದ್ರ ಮಂತ್ರಿ ರಾವ್‌ ಸಾಹೇಬ್‌ ದನ್ವೆ ಹೇಳಿದ್ದರು. ಹಾಗಾದರೆ ಈಗ ಮೋದಿ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡು ಚೀನಾ ಮತ್ತು ಪಾಕಿಸ್ತಾನದ ಎದುರು ಸೋಲಪ್ಪಿಕೊಂಡರು ಅರ್ಥವೇ?

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗದ ಪ್ರತಿಕ್ರಿಯೆ ಹೇಗೆ ಇರಲಿ ನಮ್ಮೋಡನೆ ಶಿಕ್ಷಣ ಪಡೆದು ಕ್ಕೃಷಿ ಹೋಗು ಗಳನ್ನು ಅರಿಯುವ ಶಕ್ತಿ ಶಿಕ್ಷಿತರು ನಮ್ಮಲ್ಲಿಇಲ್ಲವೇ. ಪರಮ ಪ್ರಥಮ ಸ್ಥಾನ ಕೃಷಿ ಗೆ ಮಾತ್ರ. ಈ ತಿಳುವಳಿಕೆ ನಂದಿಹೋದ ದಿನದಂದು ಈ ಪ್ರಪಂಚದ ಎಲ್ಲಾ ಜನರು ಸಂಪೂರ್ಣನಾಶವಾಗಿ ಈ ಭೂಮಿ ನಿಶಬ್ದವಾಗುವುದು.
    ರವಿಕುಮಾರ.
    ಮೈಸೂರು-8

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...