Homeಮುಖಪುಟರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು - ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ ಹೋರಾಟ ನಡೆಸಿದ ರೈತರು ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ. ಆದರೆ ಈ ಹೋರಾಟದಲ್ಲಿ ರೈತರು ತೆತ್ತ ಬಲೆ ಅಪರಿಮಿತವಾದುದು. 700 ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ತೆತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಇಡಿ ಒಂದು ವರ್ಷ ರೈತರನ್ನು ಕೆಟ್ಟ ಪದಗಳಿಂದ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಟೀಕಿಸಿದರು. ಇಲ್ಲಸಲ್ಲದ ಆರೋಪ ಹೊರಿಸಿದರು. ಅವರನ್ನು ಕ್ಷಮಿಸಲು ಸಾಧ್ಯವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

ರೈತರನ್ನು ಅವಮಾನಿಸಿದ ಬಿಜೆಪಿ ನಾಯಕರು ಮತ್ತು ಅವರ ಆಧಾರ ರಹಿತ ಆರೋಪಗಳು, ಕೆಟ್ಟ ಹೇಳಿಕೆಗಳು ಕೆಳಗಿನಂತಿವೆ. ನೀವೂ ಓದಿ, ಅವರನ್ನು ಕ್ಷಮಿಸಬೇಕೊ? ಶಿಕ್ಷಸಬೇಕೊ ತೀರ್ಮಾನಿಸಿ.

2021ರ ಆಗಸ್ಟ್ 17 ರಂದು ಮೈಸೂರಿನಲ್ಲಿ ಮಾತನಾಡಿದ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು “ರೈತರ ಆದಾಯ ದ್ವಿಗುಣಕ್ಕೆ ಮೋದಿ ಕಾಯ್ದೆಗಳನ್ನು ತಂದಿದ್ದಾರೆ. ಇದನ್ನು ಸಹಿಸಿದವರು ಹೋರಾಟಕ್ಕೆ ಇಳಿದಿದ್ದಾರೆ. ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ದಲ್ಲಾಳಿಗಳ, ಮಧ್ಯವರ್ತಿಗಳ ಧರಣಿಯಾಗಿ ಬದಲಾಗಿದೆ” ಎಂದು ಹೇಳಿದ್ದರು.

2021ರ ಸೆಪ್ಟಂಬರ್ 21 ರಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ, ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದರು.

ಇನ್ನು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅಂತು “ಇದು ರೈತರ ಪ್ರತಿಭಟನೆಯಲ್ಲ, ಭಯೋತ್ಪಾದಕರ ಕೃತ್ಯ. ಖಾಲಿಸ್ತಾನ ಮತ್ತು ಕಾಂಗ್ರೆಸ್‌‌ನವರು ಇದರ ಹಿಂದೆ ಇದ್ದು, ಮೋದಿ ಬೆಳವಣಿಗೆ ಸಹಿಸದೆ ಹತಾಶರಾದವರು ಈ ರೀತಿಯ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ” ಎಂದು ಅಸೂಕ್ಷ್ಮವಾಗಿ ಮಾತನಾಡಿದ್ದರು.

ನಾಲಿಗೆ ಹರಿಯಬಿಟ್ಟ ಕೇಂದ್ರದ ನಾಯಕರು

“ನಿಮಗೆ ಪಾಠ ಕಲಿಸಲು ಎರಡು ನಿಮಿಷ ಸಾಕು” ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಹೇಳಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಮಗ ಆಶಿಸ್ ಮಿಶ್ರಾ ಮತ್ತು ಇನ್ನಿತರ ಬಿಜೆಪಿ ಮುಖಂಡರು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮುಗಿಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕಾರು ಹರಿಸಿದರು. ನಾಲ್ವರು ರೈತರು ಸೇರಿ 8 ಜನರ ಕೊಲೆಗೆ ಕಾರಣರಾದರು.

“ಈ ಪ್ರತಿಭಟನೆ ಮಾಡುತ್ತಿರುವವರು ಖಲಿಸ್ತಾನ್‌ ಧ್ವಜ ಹಿಡಿದ ಭಯೋತ್ಪಾದಕರು” ಎಂದು ರಾಜಸ್ತಾನದ ದೌಸಾ ಕ್ಷೇತ್ರದ ಬಿಜೆಪಿ ಸಂಸದೆ ಜಸ್‌ ಕೌರ್‌ ಮೀನಾ ನಾಳಿಗೆ ಹರಿಬಿಟ್ಟಿದ್ದರು. ಅಲ್ಲದೆ ಈ ಪ್ರತಿಭಟನಾ ನಿರತ ರೈತರಲ್ಲಿ ಎ.ಕೆ.-47 ಕೂಡಾ ಇದೆ ಎಂದು ಅವರು ಆಪಾದಿಸಿದ್ದರು.

“ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” – ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್.

“ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಇವರು” ಎಂದು ಬಿಜೆಪಿ ಐಟಿಸೆಲ್ಲಿನ ಮುಖ್ಯಸ್ಥ ಅಮಿತ್‌ ಮಾಳವೀಯಾ ಮಾಡಿದ ಆರೋಪಿಸಿದ್ದರು.

“ದೇಶದಲ್ಲಿ ಆಂದೋಲನ್ ಜೀವಿ ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ. ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್ ಜೀವಿ ಎಂಬ ಹೊಸ ಪದವು ಅಸ್ತಿತ್ವಕ್ಕೆ ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ.. – ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಮಾತುಗಳಿವು.

“ಗೂಂಡಾಗಳು ರೈತರ ವೇಶದಲ್ಲಿ ಕೂತಿದ್ದಾರೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವೈ. ಸತ್ಯಕುಮಾರ್ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಖಲಿಸ್ತಾನಿ ಮತ್ತು ಜಿಹಾದಿ ಪಡೆಗಳು ಭಯೋತ್ಪಾದನೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದೂ ಈ ನಾಯಕ ಹೇಳಿದ್ದ.

“ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” – ಅನಿಲ್ ವಿಜ್, ಹರಿಯಾಣದ ಗೃಹ ಸಚಿವ.

“ಉಗ್ರವಾದಿಗಳು ಚಳವಳಿಯನ್ನು ಹೈಜಾಕ್‌ ಮಾಡಿದ್ದಾರೆ. ಖಲಿಸ್ತಾನಿ ಮತ್ತು ಪಾಕಿಸ್ತಾನ ಪರ ಘೋಷಣೆಗಳನ್ನು ಪ್ರತಿಭಟನಾ ನಿರತ ರೈತರು ಕೂಗಿದ್ದಾರೆ” ಎಂದು ಮತ್ತೊಬ್ಬ ಬಿಜೆಪಿ ಕಾರ್ಯದರ್ಶಿ ದುಷ್ಯಂತ್‌ ಕುಮಾರ್‌ ಗೌತಮ್ ಮನಬಂದಂತೆ ಮಾತನಾಡಿದ್ದರು.

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು – ಹೋರಾಟದ ಕಣದಲ್ಲಿ ಹುತಾತ್ಮರಾದ ರೈತರ ಕುರಿತು ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್ ಹೇಳಿಕೆ.

“ಅನಪೇಕ್ಷಿತ ಪಡೆಗಳು ಇಲ್ಲಿವೆ. ಇವು ಮುಕ್ತವಾಗಿ ಖಲಿಸ್ತಾನವನ್ನು ಬೆಂಬಲಿಸುತ್ತಿವೆ. ಕಿಸಾನ್ ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಎಂದು ಹರ್ಯಾಣಾದ ಮುಖ್ಯಮಂತ್ರಿ ಎಂದು ಮನೋಹರ ಲಾಲ್‌ ಖಟ್ಟರ್ ಹೇಳಿದ್ದರು.

“ತುಕ್ಡೇ ಗ್ಯಾಂಗ್‌ ಈ ಪ್ರತಿಭಟನೆಯನ್ನು ಹೈಜಾಕ್‌ ಮಾಡಿದೆ” ಎಂದು ಬಿಹಾರದ ಭಾಜಪ ನಾಯಕ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದರು.

“ಅರಾಜಕತಾ ಷಡ್ಯಂತ್ರಗಳ ಪ್ರಯೋಗಪಶುಗಳು ಈ ರೈತರು” ಎಂದು ಆರ್‌ಎಸ್‌ಎಸ್‌ಮುಖಂಡ ಬಿ.ಎಲ್‌ ಸಂತೋಷ್ ಆರೋಪಿಸಿದ್ದರು.

“ಕರಾಳ ಷಡ್ಯಂತ್ರ. ತುಕುಡೇ ಗ್ಯಾಂಗ್‌ ಈ ಚಳವಳಿಯ ನೇತೃತ್ವ ಕಸಿದುಕೊಂಡಿದ್ದು ಕರಾಳ ಹುನ್ನಾರ ಹೊಂದಿದೆ” ಎಂದು ಆಗಿನ ಕೇಂದ್ರ ಕಾನೂನುಸಚಿವ ರವಿಶಂಕರ್‌ ಪ್ರಸಾದ್ ಹೇಳಿದ್ದರು.

”ಈ ಪ್ರತಿಭಟನೆಗಳ ಹಿಂದೆ ಚೀನಾ ಮತ್ತು ಪಾಕಿಸ್ತಾನ ಇವೆ. ಈ ಚಳವಳಿ ರೈತರದ್ದಲ್ಲ. ಇದರಲ್ಲಿ ಖಂಡಿತ ಚೀನಾ ಮತ್ತು ಪಾಕಿಸ್ತಾನದ ಕೈವಾಡ ಇದೆ” ಎಂದು ಕೇಂದ್ರ ಮಂತ್ರಿ ರಾವ್‌ ಸಾಹೇಬ್‌ ದನ್ವೆ ಹೇಳಿದ್ದರು. ಹಾಗಾದರೆ ಈಗ ಮೋದಿ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡು ಚೀನಾ ಮತ್ತು ಪಾಕಿಸ್ತಾನದ ಎದುರು ಸೋಲಪ್ಪಿಕೊಂಡರು ಅರ್ಥವೇ?

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗದ ಪ್ರತಿಕ್ರಿಯೆ ಹೇಗೆ ಇರಲಿ ನಮ್ಮೋಡನೆ ಶಿಕ್ಷಣ ಪಡೆದು ಕ್ಕೃಷಿ ಹೋಗು ಗಳನ್ನು ಅರಿಯುವ ಶಕ್ತಿ ಶಿಕ್ಷಿತರು ನಮ್ಮಲ್ಲಿಇಲ್ಲವೇ. ಪರಮ ಪ್ರಥಮ ಸ್ಥಾನ ಕೃಷಿ ಗೆ ಮಾತ್ರ. ಈ ತಿಳುವಳಿಕೆ ನಂದಿಹೋದ ದಿನದಂದು ಈ ಪ್ರಪಂಚದ ಎಲ್ಲಾ ಜನರು ಸಂಪೂರ್ಣನಾಶವಾಗಿ ಈ ಭೂಮಿ ನಿಶಬ್ದವಾಗುವುದು.
    ರವಿಕುಮಾರ.
    ಮೈಸೂರು-8

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...