Homeಮುಖಪುಟರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು - ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ ಹೋರಾಟ ನಡೆಸಿದ ರೈತರು ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ. ಆದರೆ ಈ ಹೋರಾಟದಲ್ಲಿ ರೈತರು ತೆತ್ತ ಬಲೆ ಅಪರಿಮಿತವಾದುದು. 700 ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ತೆತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಇಡಿ ಒಂದು ವರ್ಷ ರೈತರನ್ನು ಕೆಟ್ಟ ಪದಗಳಿಂದ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಟೀಕಿಸಿದರು. ಇಲ್ಲಸಲ್ಲದ ಆರೋಪ ಹೊರಿಸಿದರು. ಅವರನ್ನು ಕ್ಷಮಿಸಲು ಸಾಧ್ಯವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

ರೈತರನ್ನು ಅವಮಾನಿಸಿದ ಬಿಜೆಪಿ ನಾಯಕರು ಮತ್ತು ಅವರ ಆಧಾರ ರಹಿತ ಆರೋಪಗಳು, ಕೆಟ್ಟ ಹೇಳಿಕೆಗಳು ಕೆಳಗಿನಂತಿವೆ. ನೀವೂ ಓದಿ, ಅವರನ್ನು ಕ್ಷಮಿಸಬೇಕೊ? ಶಿಕ್ಷಸಬೇಕೊ ತೀರ್ಮಾನಿಸಿ.

2021ರ ಆಗಸ್ಟ್ 17 ರಂದು ಮೈಸೂರಿನಲ್ಲಿ ಮಾತನಾಡಿದ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು “ರೈತರ ಆದಾಯ ದ್ವಿಗುಣಕ್ಕೆ ಮೋದಿ ಕಾಯ್ದೆಗಳನ್ನು ತಂದಿದ್ದಾರೆ. ಇದನ್ನು ಸಹಿಸಿದವರು ಹೋರಾಟಕ್ಕೆ ಇಳಿದಿದ್ದಾರೆ. ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ದಲ್ಲಾಳಿಗಳ, ಮಧ್ಯವರ್ತಿಗಳ ಧರಣಿಯಾಗಿ ಬದಲಾಗಿದೆ” ಎಂದು ಹೇಳಿದ್ದರು.

2021ರ ಸೆಪ್ಟಂಬರ್ 21 ರಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ, ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದರು.

ಇನ್ನು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅಂತು “ಇದು ರೈತರ ಪ್ರತಿಭಟನೆಯಲ್ಲ, ಭಯೋತ್ಪಾದಕರ ಕೃತ್ಯ. ಖಾಲಿಸ್ತಾನ ಮತ್ತು ಕಾಂಗ್ರೆಸ್‌‌ನವರು ಇದರ ಹಿಂದೆ ಇದ್ದು, ಮೋದಿ ಬೆಳವಣಿಗೆ ಸಹಿಸದೆ ಹತಾಶರಾದವರು ಈ ರೀತಿಯ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ” ಎಂದು ಅಸೂಕ್ಷ್ಮವಾಗಿ ಮಾತನಾಡಿದ್ದರು.

ನಾಲಿಗೆ ಹರಿಯಬಿಟ್ಟ ಕೇಂದ್ರದ ನಾಯಕರು

“ನಿಮಗೆ ಪಾಠ ಕಲಿಸಲು ಎರಡು ನಿಮಿಷ ಸಾಕು” ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಹೇಳಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಮಗ ಆಶಿಸ್ ಮಿಶ್ರಾ ಮತ್ತು ಇನ್ನಿತರ ಬಿಜೆಪಿ ಮುಖಂಡರು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮುಗಿಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕಾರು ಹರಿಸಿದರು. ನಾಲ್ವರು ರೈತರು ಸೇರಿ 8 ಜನರ ಕೊಲೆಗೆ ಕಾರಣರಾದರು.

“ಈ ಪ್ರತಿಭಟನೆ ಮಾಡುತ್ತಿರುವವರು ಖಲಿಸ್ತಾನ್‌ ಧ್ವಜ ಹಿಡಿದ ಭಯೋತ್ಪಾದಕರು” ಎಂದು ರಾಜಸ್ತಾನದ ದೌಸಾ ಕ್ಷೇತ್ರದ ಬಿಜೆಪಿ ಸಂಸದೆ ಜಸ್‌ ಕೌರ್‌ ಮೀನಾ ನಾಳಿಗೆ ಹರಿಬಿಟ್ಟಿದ್ದರು. ಅಲ್ಲದೆ ಈ ಪ್ರತಿಭಟನಾ ನಿರತ ರೈತರಲ್ಲಿ ಎ.ಕೆ.-47 ಕೂಡಾ ಇದೆ ಎಂದು ಅವರು ಆಪಾದಿಸಿದ್ದರು.

“ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” – ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್.

“ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಇವರು” ಎಂದು ಬಿಜೆಪಿ ಐಟಿಸೆಲ್ಲಿನ ಮುಖ್ಯಸ್ಥ ಅಮಿತ್‌ ಮಾಳವೀಯಾ ಮಾಡಿದ ಆರೋಪಿಸಿದ್ದರು.

“ದೇಶದಲ್ಲಿ ಆಂದೋಲನ್ ಜೀವಿ ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ. ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್ ಜೀವಿ ಎಂಬ ಹೊಸ ಪದವು ಅಸ್ತಿತ್ವಕ್ಕೆ ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ.. – ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಮಾತುಗಳಿವು.

“ಗೂಂಡಾಗಳು ರೈತರ ವೇಶದಲ್ಲಿ ಕೂತಿದ್ದಾರೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವೈ. ಸತ್ಯಕುಮಾರ್ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಖಲಿಸ್ತಾನಿ ಮತ್ತು ಜಿಹಾದಿ ಪಡೆಗಳು ಭಯೋತ್ಪಾದನೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದೂ ಈ ನಾಯಕ ಹೇಳಿದ್ದ.

“ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” – ಅನಿಲ್ ವಿಜ್, ಹರಿಯಾಣದ ಗೃಹ ಸಚಿವ.

“ಉಗ್ರವಾದಿಗಳು ಚಳವಳಿಯನ್ನು ಹೈಜಾಕ್‌ ಮಾಡಿದ್ದಾರೆ. ಖಲಿಸ್ತಾನಿ ಮತ್ತು ಪಾಕಿಸ್ತಾನ ಪರ ಘೋಷಣೆಗಳನ್ನು ಪ್ರತಿಭಟನಾ ನಿರತ ರೈತರು ಕೂಗಿದ್ದಾರೆ” ಎಂದು ಮತ್ತೊಬ್ಬ ಬಿಜೆಪಿ ಕಾರ್ಯದರ್ಶಿ ದುಷ್ಯಂತ್‌ ಕುಮಾರ್‌ ಗೌತಮ್ ಮನಬಂದಂತೆ ಮಾತನಾಡಿದ್ದರು.

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು – ಹೋರಾಟದ ಕಣದಲ್ಲಿ ಹುತಾತ್ಮರಾದ ರೈತರ ಕುರಿತು ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್ ಹೇಳಿಕೆ.

“ಅನಪೇಕ್ಷಿತ ಪಡೆಗಳು ಇಲ್ಲಿವೆ. ಇವು ಮುಕ್ತವಾಗಿ ಖಲಿಸ್ತಾನವನ್ನು ಬೆಂಬಲಿಸುತ್ತಿವೆ. ಕಿಸಾನ್ ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಎಂದು ಹರ್ಯಾಣಾದ ಮುಖ್ಯಮಂತ್ರಿ ಎಂದು ಮನೋಹರ ಲಾಲ್‌ ಖಟ್ಟರ್ ಹೇಳಿದ್ದರು.

“ತುಕ್ಡೇ ಗ್ಯಾಂಗ್‌ ಈ ಪ್ರತಿಭಟನೆಯನ್ನು ಹೈಜಾಕ್‌ ಮಾಡಿದೆ” ಎಂದು ಬಿಹಾರದ ಭಾಜಪ ನಾಯಕ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದರು.

“ಅರಾಜಕತಾ ಷಡ್ಯಂತ್ರಗಳ ಪ್ರಯೋಗಪಶುಗಳು ಈ ರೈತರು” ಎಂದು ಆರ್‌ಎಸ್‌ಎಸ್‌ಮುಖಂಡ ಬಿ.ಎಲ್‌ ಸಂತೋಷ್ ಆರೋಪಿಸಿದ್ದರು.

“ಕರಾಳ ಷಡ್ಯಂತ್ರ. ತುಕುಡೇ ಗ್ಯಾಂಗ್‌ ಈ ಚಳವಳಿಯ ನೇತೃತ್ವ ಕಸಿದುಕೊಂಡಿದ್ದು ಕರಾಳ ಹುನ್ನಾರ ಹೊಂದಿದೆ” ಎಂದು ಆಗಿನ ಕೇಂದ್ರ ಕಾನೂನುಸಚಿವ ರವಿಶಂಕರ್‌ ಪ್ರಸಾದ್ ಹೇಳಿದ್ದರು.

”ಈ ಪ್ರತಿಭಟನೆಗಳ ಹಿಂದೆ ಚೀನಾ ಮತ್ತು ಪಾಕಿಸ್ತಾನ ಇವೆ. ಈ ಚಳವಳಿ ರೈತರದ್ದಲ್ಲ. ಇದರಲ್ಲಿ ಖಂಡಿತ ಚೀನಾ ಮತ್ತು ಪಾಕಿಸ್ತಾನದ ಕೈವಾಡ ಇದೆ” ಎಂದು ಕೇಂದ್ರ ಮಂತ್ರಿ ರಾವ್‌ ಸಾಹೇಬ್‌ ದನ್ವೆ ಹೇಳಿದ್ದರು. ಹಾಗಾದರೆ ಈಗ ಮೋದಿ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡು ಚೀನಾ ಮತ್ತು ಪಾಕಿಸ್ತಾನದ ಎದುರು ಸೋಲಪ್ಪಿಕೊಂಡರು ಅರ್ಥವೇ?

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗದ ಪ್ರತಿಕ್ರಿಯೆ ಹೇಗೆ ಇರಲಿ ನಮ್ಮೋಡನೆ ಶಿಕ್ಷಣ ಪಡೆದು ಕ್ಕೃಷಿ ಹೋಗು ಗಳನ್ನು ಅರಿಯುವ ಶಕ್ತಿ ಶಿಕ್ಷಿತರು ನಮ್ಮಲ್ಲಿಇಲ್ಲವೇ. ಪರಮ ಪ್ರಥಮ ಸ್ಥಾನ ಕೃಷಿ ಗೆ ಮಾತ್ರ. ಈ ತಿಳುವಳಿಕೆ ನಂದಿಹೋದ ದಿನದಂದು ಈ ಪ್ರಪಂಚದ ಎಲ್ಲಾ ಜನರು ಸಂಪೂರ್ಣನಾಶವಾಗಿ ಈ ಭೂಮಿ ನಿಶಬ್ದವಾಗುವುದು.
    ರವಿಕುಮಾರ.
    ಮೈಸೂರು-8

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...