Homeಮುಖಪುಟರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು - ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ ಹೋರಾಟ ನಡೆಸಿದ ರೈತರು ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ. ಆದರೆ ಈ ಹೋರಾಟದಲ್ಲಿ ರೈತರು ತೆತ್ತ ಬಲೆ ಅಪರಿಮಿತವಾದುದು. 700 ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ತೆತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಇಡಿ ಒಂದು ವರ್ಷ ರೈತರನ್ನು ಕೆಟ್ಟ ಪದಗಳಿಂದ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಟೀಕಿಸಿದರು. ಇಲ್ಲಸಲ್ಲದ ಆರೋಪ ಹೊರಿಸಿದರು. ಅವರನ್ನು ಕ್ಷಮಿಸಲು ಸಾಧ್ಯವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

ರೈತರನ್ನು ಅವಮಾನಿಸಿದ ಬಿಜೆಪಿ ನಾಯಕರು ಮತ್ತು ಅವರ ಆಧಾರ ರಹಿತ ಆರೋಪಗಳು, ಕೆಟ್ಟ ಹೇಳಿಕೆಗಳು ಕೆಳಗಿನಂತಿವೆ. ನೀವೂ ಓದಿ, ಅವರನ್ನು ಕ್ಷಮಿಸಬೇಕೊ? ಶಿಕ್ಷಸಬೇಕೊ ತೀರ್ಮಾನಿಸಿ.

2021ರ ಆಗಸ್ಟ್ 17 ರಂದು ಮೈಸೂರಿನಲ್ಲಿ ಮಾತನಾಡಿದ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು “ರೈತರ ಆದಾಯ ದ್ವಿಗುಣಕ್ಕೆ ಮೋದಿ ಕಾಯ್ದೆಗಳನ್ನು ತಂದಿದ್ದಾರೆ. ಇದನ್ನು ಸಹಿಸಿದವರು ಹೋರಾಟಕ್ಕೆ ಇಳಿದಿದ್ದಾರೆ. ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ದಲ್ಲಾಳಿಗಳ, ಮಧ್ಯವರ್ತಿಗಳ ಧರಣಿಯಾಗಿ ಬದಲಾಗಿದೆ” ಎಂದು ಹೇಳಿದ್ದರು.

2021ರ ಸೆಪ್ಟಂಬರ್ 21 ರಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ, ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದರು.

ಇನ್ನು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅಂತು “ಇದು ರೈತರ ಪ್ರತಿಭಟನೆಯಲ್ಲ, ಭಯೋತ್ಪಾದಕರ ಕೃತ್ಯ. ಖಾಲಿಸ್ತಾನ ಮತ್ತು ಕಾಂಗ್ರೆಸ್‌‌ನವರು ಇದರ ಹಿಂದೆ ಇದ್ದು, ಮೋದಿ ಬೆಳವಣಿಗೆ ಸಹಿಸದೆ ಹತಾಶರಾದವರು ಈ ರೀತಿಯ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ” ಎಂದು ಅಸೂಕ್ಷ್ಮವಾಗಿ ಮಾತನಾಡಿದ್ದರು.

ನಾಲಿಗೆ ಹರಿಯಬಿಟ್ಟ ಕೇಂದ್ರದ ನಾಯಕರು

“ನಿಮಗೆ ಪಾಠ ಕಲಿಸಲು ಎರಡು ನಿಮಿಷ ಸಾಕು” ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಹೇಳಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಮಗ ಆಶಿಸ್ ಮಿಶ್ರಾ ಮತ್ತು ಇನ್ನಿತರ ಬಿಜೆಪಿ ಮುಖಂಡರು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮುಗಿಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕಾರು ಹರಿಸಿದರು. ನಾಲ್ವರು ರೈತರು ಸೇರಿ 8 ಜನರ ಕೊಲೆಗೆ ಕಾರಣರಾದರು.

“ಈ ಪ್ರತಿಭಟನೆ ಮಾಡುತ್ತಿರುವವರು ಖಲಿಸ್ತಾನ್‌ ಧ್ವಜ ಹಿಡಿದ ಭಯೋತ್ಪಾದಕರು” ಎಂದು ರಾಜಸ್ತಾನದ ದೌಸಾ ಕ್ಷೇತ್ರದ ಬಿಜೆಪಿ ಸಂಸದೆ ಜಸ್‌ ಕೌರ್‌ ಮೀನಾ ನಾಳಿಗೆ ಹರಿಬಿಟ್ಟಿದ್ದರು. ಅಲ್ಲದೆ ಈ ಪ್ರತಿಭಟನಾ ನಿರತ ರೈತರಲ್ಲಿ ಎ.ಕೆ.-47 ಕೂಡಾ ಇದೆ ಎಂದು ಅವರು ಆಪಾದಿಸಿದ್ದರು.

“ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” – ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್.

“ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಇವರು” ಎಂದು ಬಿಜೆಪಿ ಐಟಿಸೆಲ್ಲಿನ ಮುಖ್ಯಸ್ಥ ಅಮಿತ್‌ ಮಾಳವೀಯಾ ಮಾಡಿದ ಆರೋಪಿಸಿದ್ದರು.

“ದೇಶದಲ್ಲಿ ಆಂದೋಲನ್ ಜೀವಿ ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ. ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್ ಜೀವಿ ಎಂಬ ಹೊಸ ಪದವು ಅಸ್ತಿತ್ವಕ್ಕೆ ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ.. – ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಮಾತುಗಳಿವು.

“ಗೂಂಡಾಗಳು ರೈತರ ವೇಶದಲ್ಲಿ ಕೂತಿದ್ದಾರೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವೈ. ಸತ್ಯಕುಮಾರ್ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಖಲಿಸ್ತಾನಿ ಮತ್ತು ಜಿಹಾದಿ ಪಡೆಗಳು ಭಯೋತ್ಪಾದನೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದೂ ಈ ನಾಯಕ ಹೇಳಿದ್ದ.

“ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” – ಅನಿಲ್ ವಿಜ್, ಹರಿಯಾಣದ ಗೃಹ ಸಚಿವ.

“ಉಗ್ರವಾದಿಗಳು ಚಳವಳಿಯನ್ನು ಹೈಜಾಕ್‌ ಮಾಡಿದ್ದಾರೆ. ಖಲಿಸ್ತಾನಿ ಮತ್ತು ಪಾಕಿಸ್ತಾನ ಪರ ಘೋಷಣೆಗಳನ್ನು ಪ್ರತಿಭಟನಾ ನಿರತ ರೈತರು ಕೂಗಿದ್ದಾರೆ” ಎಂದು ಮತ್ತೊಬ್ಬ ಬಿಜೆಪಿ ಕಾರ್ಯದರ್ಶಿ ದುಷ್ಯಂತ್‌ ಕುಮಾರ್‌ ಗೌತಮ್ ಮನಬಂದಂತೆ ಮಾತನಾಡಿದ್ದರು.

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು – ಹೋರಾಟದ ಕಣದಲ್ಲಿ ಹುತಾತ್ಮರಾದ ರೈತರ ಕುರಿತು ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್ ಹೇಳಿಕೆ.

“ಅನಪೇಕ್ಷಿತ ಪಡೆಗಳು ಇಲ್ಲಿವೆ. ಇವು ಮುಕ್ತವಾಗಿ ಖಲಿಸ್ತಾನವನ್ನು ಬೆಂಬಲಿಸುತ್ತಿವೆ. ಕಿಸಾನ್ ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಎಂದು ಹರ್ಯಾಣಾದ ಮುಖ್ಯಮಂತ್ರಿ ಎಂದು ಮನೋಹರ ಲಾಲ್‌ ಖಟ್ಟರ್ ಹೇಳಿದ್ದರು.

“ತುಕ್ಡೇ ಗ್ಯಾಂಗ್‌ ಈ ಪ್ರತಿಭಟನೆಯನ್ನು ಹೈಜಾಕ್‌ ಮಾಡಿದೆ” ಎಂದು ಬಿಹಾರದ ಭಾಜಪ ನಾಯಕ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದರು.

“ಅರಾಜಕತಾ ಷಡ್ಯಂತ್ರಗಳ ಪ್ರಯೋಗಪಶುಗಳು ಈ ರೈತರು” ಎಂದು ಆರ್‌ಎಸ್‌ಎಸ್‌ಮುಖಂಡ ಬಿ.ಎಲ್‌ ಸಂತೋಷ್ ಆರೋಪಿಸಿದ್ದರು.

“ಕರಾಳ ಷಡ್ಯಂತ್ರ. ತುಕುಡೇ ಗ್ಯಾಂಗ್‌ ಈ ಚಳವಳಿಯ ನೇತೃತ್ವ ಕಸಿದುಕೊಂಡಿದ್ದು ಕರಾಳ ಹುನ್ನಾರ ಹೊಂದಿದೆ” ಎಂದು ಆಗಿನ ಕೇಂದ್ರ ಕಾನೂನುಸಚಿವ ರವಿಶಂಕರ್‌ ಪ್ರಸಾದ್ ಹೇಳಿದ್ದರು.

”ಈ ಪ್ರತಿಭಟನೆಗಳ ಹಿಂದೆ ಚೀನಾ ಮತ್ತು ಪಾಕಿಸ್ತಾನ ಇವೆ. ಈ ಚಳವಳಿ ರೈತರದ್ದಲ್ಲ. ಇದರಲ್ಲಿ ಖಂಡಿತ ಚೀನಾ ಮತ್ತು ಪಾಕಿಸ್ತಾನದ ಕೈವಾಡ ಇದೆ” ಎಂದು ಕೇಂದ್ರ ಮಂತ್ರಿ ರಾವ್‌ ಸಾಹೇಬ್‌ ದನ್ವೆ ಹೇಳಿದ್ದರು. ಹಾಗಾದರೆ ಈಗ ಮೋದಿ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡು ಚೀನಾ ಮತ್ತು ಪಾಕಿಸ್ತಾನದ ಎದುರು ಸೋಲಪ್ಪಿಕೊಂಡರು ಅರ್ಥವೇ?

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗದ ಪ್ರತಿಕ್ರಿಯೆ ಹೇಗೆ ಇರಲಿ ನಮ್ಮೋಡನೆ ಶಿಕ್ಷಣ ಪಡೆದು ಕ್ಕೃಷಿ ಹೋಗು ಗಳನ್ನು ಅರಿಯುವ ಶಕ್ತಿ ಶಿಕ್ಷಿತರು ನಮ್ಮಲ್ಲಿಇಲ್ಲವೇ. ಪರಮ ಪ್ರಥಮ ಸ್ಥಾನ ಕೃಷಿ ಗೆ ಮಾತ್ರ. ಈ ತಿಳುವಳಿಕೆ ನಂದಿಹೋದ ದಿನದಂದು ಈ ಪ್ರಪಂಚದ ಎಲ್ಲಾ ಜನರು ಸಂಪೂರ್ಣನಾಶವಾಗಿ ಈ ಭೂಮಿ ನಿಶಬ್ದವಾಗುವುದು.
    ರವಿಕುಮಾರ.
    ಮೈಸೂರು-8

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...