Homeಮುಖಪುಟರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ರೈತರ ಬಗ್ಗೆ ತುಚ್ಛವಾಗಿ ಮಾತನಾಡಿದ ಬಿಜೆಪಿ ನಾಯಕರಿವರು: ಇವರನ್ನು ಕ್ಷಮಿಸಲಾದಿತೇ?

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು - ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಸರ್ಕಾರವು ರೈತರ ಧೀರ್ಘ ಮತ್ತು ದಿಟ್ಟ ಹೋರಾಟದ ಎದುರು ಮಂಡಿಯೂರಿದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದೆ. ಒಂದು ವರ್ಷದಿಂದ ಧೀರೋಧಾತ್ತ ಹೋರಾಟ ನಡೆಸಿದ ರೈತರು ಕೊನೆಗೂ ಗೆಲುವಿನ ನಗೆ ಬೀರಿದ್ದಾರೆ. ಆದರೆ ಈ ಹೋರಾಟದಲ್ಲಿ ರೈತರು ತೆತ್ತ ಬಲೆ ಅಪರಿಮಿತವಾದುದು. 700 ಕ್ಕೂ ಹೆಚ್ಚು ರೈತರು ತಮ್ಮ ಪ್ರಾಣ ತೆತ್ತಿದ್ದಾರೆ. ಅಷ್ಟು ಮಾತ್ರವಲ್ಲದೆ ಇಡಿ ಒಂದು ವರ್ಷ ರೈತರನ್ನು ಕೆಟ್ಟ ಪದಗಳಿಂದ ಬಿಜೆಪಿ ನಾಯಕರು ಮತ್ತು ಬೆಂಬಲಿಗರು ಟೀಕಿಸಿದರು. ಇಲ್ಲಸಲ್ಲದ ಆರೋಪ ಹೊರಿಸಿದರು. ಅವರನ್ನು ಕ್ಷಮಿಸಲು ಸಾಧ್ಯವೇ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ಆರಂಭವಾಗಿದೆ.

ರೈತರನ್ನು ಅವಮಾನಿಸಿದ ಬಿಜೆಪಿ ನಾಯಕರು ಮತ್ತು ಅವರ ಆಧಾರ ರಹಿತ ಆರೋಪಗಳು, ಕೆಟ್ಟ ಹೇಳಿಕೆಗಳು ಕೆಳಗಿನಂತಿವೆ. ನೀವೂ ಓದಿ, ಅವರನ್ನು ಕ್ಷಮಿಸಬೇಕೊ? ಶಿಕ್ಷಸಬೇಕೊ ತೀರ್ಮಾನಿಸಿ.

2021ರ ಆಗಸ್ಟ್ 17 ರಂದು ಮೈಸೂರಿನಲ್ಲಿ ಮಾತನಾಡಿದ ಕೃಷಿ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು “ರೈತರ ಆದಾಯ ದ್ವಿಗುಣಕ್ಕೆ ಮೋದಿ ಕಾಯ್ದೆಗಳನ್ನು ತಂದಿದ್ದಾರೆ. ಇದನ್ನು ಸಹಿಸಿದವರು ಹೋರಾಟಕ್ಕೆ ಇಳಿದಿದ್ದಾರೆ. ದೆಹಲಿ ಗಡಿಗಳಲ್ಲಿ ನಡೆಯುತ್ತಿರುವ ರೈತ ಹೋರಾಟ ದಲ್ಲಾಳಿಗಳ, ಮಧ್ಯವರ್ತಿಗಳ ಧರಣಿಯಾಗಿ ಬದಲಾಗಿದೆ” ಎಂದು ಹೇಳಿದ್ದರು.

2021ರ ಸೆಪ್ಟಂಬರ್ 21 ರಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿ, ದೆಹಲಿಯ ಗಡಿಗಳಲ್ಲಿ ಮತ್ತು ದೇಶದ ಇತರೆಡೆ ನಡೆಯುತ್ತಿರುವ ರೈತ ಹೋರಾಟವನ್ನು “ಕಾಂಗ್ರೆಸ್, ಫಾರಿನ್ ಏಜೆಂಟರ್, ಎಂಎಸ್‌ಪಿ ಏಜೆಂಟರ್ ರೈತ ಹೋರಾಟಕ್ಕೆ ಸ್ಪಾನ್ಸರ್ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದರು.

ಇನ್ನು ರಾಜ್ಯ ಕೃಷಿ ಸಚಿವ ಬಿ.ಸಿ ಪಾಟೀಲ್ ಅಂತು “ಇದು ರೈತರ ಪ್ರತಿಭಟನೆಯಲ್ಲ, ಭಯೋತ್ಪಾದಕರ ಕೃತ್ಯ. ಖಾಲಿಸ್ತಾನ ಮತ್ತು ಕಾಂಗ್ರೆಸ್‌‌ನವರು ಇದರ ಹಿಂದೆ ಇದ್ದು, ಮೋದಿ ಬೆಳವಣಿಗೆ ಸಹಿಸದೆ ಹತಾಶರಾದವರು ಈ ರೀತಿಯ ಕೃತ್ಯಗಳನ್ನು ಮಾಡಿಸುತ್ತಿದ್ದಾರೆ” ಎಂದು ಅಸೂಕ್ಷ್ಮವಾಗಿ ಮಾತನಾಡಿದ್ದರು.

ನಾಲಿಗೆ ಹರಿಯಬಿಟ್ಟ ಕೇಂದ್ರದ ನಾಯಕರು

“ನಿಮಗೆ ಪಾಠ ಕಲಿಸಲು ಎರಡು ನಿಮಿಷ ಸಾಕು” ಎಂದು ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ಅಜಯ್‌ ಕುಮಾರ್‌ ಮಿಶ್ರಾ ಹೇಳಿದ್ದರು. ಇದಾದ ಕೆಲವೇ ದಿನದಲ್ಲಿ ಅವರ ಮಗ ಆಶಿಸ್ ಮಿಶ್ರಾ ಮತ್ತು ಇನ್ನಿತರ ಬಿಜೆಪಿ ಮುಖಂಡರು ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ಮುಗಿಸಿ ವಾಪಸ್ ತೆರಳುತ್ತಿದ್ದ ರೈತರ ಮೇಲೆ ಕಾರು ಹರಿಸಿದರು. ನಾಲ್ವರು ರೈತರು ಸೇರಿ 8 ಜನರ ಕೊಲೆಗೆ ಕಾರಣರಾದರು.

“ಈ ಪ್ರತಿಭಟನೆ ಮಾಡುತ್ತಿರುವವರು ಖಲಿಸ್ತಾನ್‌ ಧ್ವಜ ಹಿಡಿದ ಭಯೋತ್ಪಾದಕರು” ಎಂದು ರಾಜಸ್ತಾನದ ದೌಸಾ ಕ್ಷೇತ್ರದ ಬಿಜೆಪಿ ಸಂಸದೆ ಜಸ್‌ ಕೌರ್‌ ಮೀನಾ ನಾಳಿಗೆ ಹರಿಬಿಟ್ಟಿದ್ದರು. ಅಲ್ಲದೆ ಈ ಪ್ರತಿಭಟನಾ ನಿರತ ರೈತರಲ್ಲಿ ಎ.ಕೆ.-47 ಕೂಡಾ ಇದೆ ಎಂದು ಅವರು ಆಪಾದಿಸಿದ್ದರು.

“ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” – ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್.

“ಖಲಿಸ್ತಾನಿಗಳು ಮತ್ತು ಮಾವೋವಾದಿಗಳು ಇವರು” ಎಂದು ಬಿಜೆಪಿ ಐಟಿಸೆಲ್ಲಿನ ಮುಖ್ಯಸ್ಥ ಅಮಿತ್‌ ಮಾಳವೀಯಾ ಮಾಡಿದ ಆರೋಪಿಸಿದ್ದರು.

“ದೇಶದಲ್ಲಿ ಆಂದೋಲನ್ ಜೀವಿ ಎಂಬ ಹೊಸ ಸಮುದಾಯವೊಂದು ಹುಟ್ಟಿಕೊಂಡಿದೆ. ಪ್ರತಿ ಪ್ರತಿಭಟನೆಯಲ್ಲಿಯೂ ಅವರನ್ನು ನೋಡಬಹುದು, ಅವರು ದೇಶಕ್ಕೆ ಪರವಾಲಂಬಿಯಾಗಿದ್ದಾರೆ. ಶ್ರಮ ಜೀವಿ ಮತ್ತು ಬುದ್ದಿಜೀವಿ ಎಂಬ ಪದಗಳನ್ನು ಕೇಳಿದ್ದೇವೆ. ಆದರೆ, ಈ ದೇಶದಲ್ಲಿ ಕೆಲವು ಸಮಯದಿಂದ ಆಂದೋಲನ್ ಜೀವಿ ಎಂಬ ಹೊಸ ಪದವು ಅಸ್ತಿತ್ವಕ್ಕೆ ಬಂದಿರುವುದನ್ನು ನಾನು ನೋಡುತ್ತಿದ್ದೇನೆ. ವಿದ್ಯಾರ್ಥಿ ಹೋರಾಟದಲ್ಲಿಯೂ ಇರುತ್ತಾರೆ, ರೈತರ ಹೋರಾಟದಲ್ಲಿಯೂ ಇರುತ್ತಾರೆ.. – ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರು ಹೇಳಿದ್ದ ಮಾತುಗಳಿವು.

“ಗೂಂಡಾಗಳು ರೈತರ ವೇಶದಲ್ಲಿ ಕೂತಿದ್ದಾರೆ” ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ವೈ. ಸತ್ಯಕುಮಾರ್ ಇಲ್ಲಸಲ್ಲದ ಆರೋಪ ಹೊರಿಸಿದ್ದರು. ಖಲಿಸ್ತಾನಿ ಮತ್ತು ಜಿಹಾದಿ ಪಡೆಗಳು ಭಯೋತ್ಪಾದನೆ ಸೃಷ್ಟಿ ಮಾಡಲು ಹೊರಟಿದ್ದಾರೆ ಎಂದೂ ಈ ನಾಯಕ ಹೇಳಿದ್ದ.

“ರಾಷ್ಟ್ರ ವಿರೋಧಿ ಚಿಂತನೆಯ ಬೀಜಗಳನ್ನು ಹೊಂದಿರುವವರು ದಿಶಾ ರವಿಯಾದರೂ ಸರಿ ಅಥವಾ ಬೇರೆಯವರಾದರೂ ಸರಿ, ಅದನ್ನು ಸಂಪೂರ್ಣವಾಗಿ ನಾಶಮಾಡಬೇಕು” – ಅನಿಲ್ ವಿಜ್, ಹರಿಯಾಣದ ಗೃಹ ಸಚಿವ.

“ಉಗ್ರವಾದಿಗಳು ಚಳವಳಿಯನ್ನು ಹೈಜಾಕ್‌ ಮಾಡಿದ್ದಾರೆ. ಖಲಿಸ್ತಾನಿ ಮತ್ತು ಪಾಕಿಸ್ತಾನ ಪರ ಘೋಷಣೆಗಳನ್ನು ಪ್ರತಿಭಟನಾ ನಿರತ ರೈತರು ಕೂಗಿದ್ದಾರೆ” ಎಂದು ಮತ್ತೊಬ್ಬ ಬಿಜೆಪಿ ಕಾರ್ಯದರ್ಶಿ ದುಷ್ಯಂತ್‌ ಕುಮಾರ್‌ ಗೌತಮ್ ಮನಬಂದಂತೆ ಮಾತನಾಡಿದ್ದರು.

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು – ಹೋರಾಟದ ಕಣದಲ್ಲಿ ಹುತಾತ್ಮರಾದ ರೈತರ ಕುರಿತು ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್ ಹೇಳಿಕೆ.

“ಅನಪೇಕ್ಷಿತ ಪಡೆಗಳು ಇಲ್ಲಿವೆ. ಇವು ಮುಕ್ತವಾಗಿ ಖಲಿಸ್ತಾನವನ್ನು ಬೆಂಬಲಿಸುತ್ತಿವೆ. ಕಿಸಾನ್ ಎಂಬ ಪದವು ಪವಿತ್ರವಾಗಿದೆ, ಅದನ್ನು ಎಲ್ಲರೂ ಗೌರವದಿಂದ ಕಾಣುತ್ತಾರೆ. ಕೆಲವು ದುರದೃಷ್ಟಕರ ಘಟನೆಗಳಿಂದಾಗಿ ಈ ಪದವು ಕಳಂಕಿತವಾಗಿದೆ. ಸಹೋದರಿಯರು ಮತ್ತು ಹೆಣ್ಣುಮಕ್ಕಳ ಘನತೆಯನ್ನು ಕಸಿದುಕೊಳ್ಳಲಾಗಿದೆ, ಕೊಲೆಗಳು ನಡೆಯುತ್ತಿವೆ, ರಸ್ತೆಗಳು ನಿರ್ಬಂಧಿಸಲ್ಪಟ್ಟಿವೆ. ಇದು ಪ್ರಜಾಪ್ರಭುತ್ವ ವಿರೋಧಿ ಘಟನೆಗಳಾಗಿದ್ದು, ನಾನು ಇದನ್ನು ಖಂಡಿಸುತ್ತೇನೆ” ಎಂದು ಹರ್ಯಾಣಾದ ಮುಖ್ಯಮಂತ್ರಿ ಎಂದು ಮನೋಹರ ಲಾಲ್‌ ಖಟ್ಟರ್ ಹೇಳಿದ್ದರು.

“ತುಕ್ಡೇ ಗ್ಯಾಂಗ್‌ ಈ ಪ್ರತಿಭಟನೆಯನ್ನು ಹೈಜಾಕ್‌ ಮಾಡಿದೆ” ಎಂದು ಬಿಹಾರದ ಭಾಜಪ ನಾಯಕ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದರು.

“ಅರಾಜಕತಾ ಷಡ್ಯಂತ್ರಗಳ ಪ್ರಯೋಗಪಶುಗಳು ಈ ರೈತರು” ಎಂದು ಆರ್‌ಎಸ್‌ಎಸ್‌ಮುಖಂಡ ಬಿ.ಎಲ್‌ ಸಂತೋಷ್ ಆರೋಪಿಸಿದ್ದರು.

“ಕರಾಳ ಷಡ್ಯಂತ್ರ. ತುಕುಡೇ ಗ್ಯಾಂಗ್‌ ಈ ಚಳವಳಿಯ ನೇತೃತ್ವ ಕಸಿದುಕೊಂಡಿದ್ದು ಕರಾಳ ಹುನ್ನಾರ ಹೊಂದಿದೆ” ಎಂದು ಆಗಿನ ಕೇಂದ್ರ ಕಾನೂನುಸಚಿವ ರವಿಶಂಕರ್‌ ಪ್ರಸಾದ್ ಹೇಳಿದ್ದರು.

”ಈ ಪ್ರತಿಭಟನೆಗಳ ಹಿಂದೆ ಚೀನಾ ಮತ್ತು ಪಾಕಿಸ್ತಾನ ಇವೆ. ಈ ಚಳವಳಿ ರೈತರದ್ದಲ್ಲ. ಇದರಲ್ಲಿ ಖಂಡಿತ ಚೀನಾ ಮತ್ತು ಪಾಕಿಸ್ತಾನದ ಕೈವಾಡ ಇದೆ” ಎಂದು ಕೇಂದ್ರ ಮಂತ್ರಿ ರಾವ್‌ ಸಾಹೇಬ್‌ ದನ್ವೆ ಹೇಳಿದ್ದರು. ಹಾಗಾದರೆ ಈಗ ಮೋದಿ ಕೃಷಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಂಡು ಚೀನಾ ಮತ್ತು ಪಾಕಿಸ್ತಾನದ ಎದುರು ಸೋಲಪ್ಪಿಕೊಂಡರು ಅರ್ಥವೇ?

ಇದನ್ನೂ ಓದಿ: ರಾಜ್ಯ ಸರ್ಕಾರವು ಮೋದಿಯ ದಾರಿಯಲ್ಲಿ ಹೆಜ್ಜೆ ಹಾಕಲಿ: ‘ಸಂಯುಕ್ತ ಹೋರಾಟ ಕರ್ನಾಟಕ’ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಜಗದ ಪ್ರತಿಕ್ರಿಯೆ ಹೇಗೆ ಇರಲಿ ನಮ್ಮೋಡನೆ ಶಿಕ್ಷಣ ಪಡೆದು ಕ್ಕೃಷಿ ಹೋಗು ಗಳನ್ನು ಅರಿಯುವ ಶಕ್ತಿ ಶಿಕ್ಷಿತರು ನಮ್ಮಲ್ಲಿಇಲ್ಲವೇ. ಪರಮ ಪ್ರಥಮ ಸ್ಥಾನ ಕೃಷಿ ಗೆ ಮಾತ್ರ. ಈ ತಿಳುವಳಿಕೆ ನಂದಿಹೋದ ದಿನದಂದು ಈ ಪ್ರಪಂಚದ ಎಲ್ಲಾ ಜನರು ಸಂಪೂರ್ಣನಾಶವಾಗಿ ಈ ಭೂಮಿ ನಿಶಬ್ದವಾಗುವುದು.
    ರವಿಕುಮಾರ.
    ಮೈಸೂರು-8

LEAVE A REPLY

Please enter your comment!
Please enter your name here

- Advertisment -

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...