Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...