Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...