Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...