Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...