Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...