Homeಮುಖಪುಟಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯೆಂದರೆ ಬ್ರಾಹ್ಮಣ-ಬನಿಯಾ ಕ್ಲಬ್: ಅವರಿಂದ `ಒಳ’ಮೀಸಲಾತಿ ಸಾಧ್ಯವೇ?

ಬಿಜೆಪಿಯ 36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಅಧ್ಯಕ್ಷರಲ್ಲಿ ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು.

- Advertisement -
- Advertisement -

ಇದೀಗ ಪರಿಶಿಷ್ಠ ಜಾತಿಯ ಮೀಸಲಾತಿಯಲ್ಲಿ ಒಳ ಮೀಸಲಾತಿಯ ಚರ್ಚೆಗಳು ಮುನ್ನಲೆಗೆ ಬಂದಿವೆ. ಈ ಮೀಸಲಾತಿಗೆ ಒಳಗಾಗುವ ಸಮುದಾಯಗಳು ಒಂದು ರಾಜಕೀಯ ಪಕ್ಷದ `ಒಳ’ ಮೀಸಲಾತಿಯಲ್ಲಿ ಯಾವ ಸ್ಥಾನ ಪಡೆದಿವೆ ಎನ್ನುವುದು ಕುತೂಹಲದ ವಿಷಯ. 2018ರ ಆಗಸ್ಟ್ 1 ರಂದು `ದಿ ಪ್ರಿಂಟ್’ ರುಹಿ ತಿವಾರಿ ಮತ್ತು ಪ್ರ್ರಾಗ್ಯ ಕೌಶಿಕ್ ಅವರುಗಳು ಬರೆದ ಸಂಶೋಧನ ವರದಿಯೊಂದನ್ನು ಪ್ರಕಟಿಸಿತ್ತು. ಇದು ಒಂದು ಸಾವಿರ ಬಿಜೆಪಿ ನಾಯಕರುಗಳನ್ನು ಸಮೀಕ್ಷೆಗೆ ಒಳಪಡಿಸಿ ಬಿಜೆಪಿಯು `ಬ್ರಾಹ್ಮಣ-ಬನಿಯಾ ಕ್ಲಬ್’ ಎಂದು ವಿಶ್ಲೇಷಿಸಿತು. ಈ ಎರಡು ವರ್ಷದ ಅವಧಿಯಲ್ಲಿ ಅಂಕೆಸಂಖ್ಯೆಗಳು ಚೂರು ಬದಲಾಗಿದ್ದರೂ ಈ ಬ್ರಾಹ್ಮಣ-ಬನಿಯಾ ಕ್ಲಬ್ ಮಾದರಿ ಹಿಡಿತ ಸಡಿಲವಾಗಿಲ್ಲ. ಈ ವರದಿಯ ಕೆಲವು ಮುಖ್ಯಾಂಶಗಳು ಈ ಕೆಳಗಿನಂತಿವೆ.

2011ರ ಜನಗಣತಿಯ ಪ್ರಕಾರ ದಲಿತರು ದೇಶದ ಜನಸಂಖ್ಯೆಯ ಶೇಕಡಾ 16.6ರಷ್ಟಿದ್ದರೆ, ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಶೇಕಡಾ 8.6 ರಷ್ಟಿದೆ. ಮುಸ್ಲಿಮರು ಶೇಕಡಾ 14ರಷ್ಟಿದ್ದರೆ, 2007ರಲ್ಲಿ ರಾಷ್ಟ್ರೀಯ ಮಾದರಿ ಸಮೀಕ್ಷಾ ಸಂಸ್ಥೆ (ಎನ್‍ಎಸ್‍ಎಸ್‍ಒ) ನಡೆಸಿದ ಸಮೀಕ್ಷೆಯ ಪ್ರಕಾರ ಒಬಿಸಿ ಜನಸಂಖ್ಯೆ ಶೇಕಡಾ 41ರಷ್ಟಿದೆ. ಈ ಪ್ರಾತಿನಿಧ್ಯಕ್ಕೆ ತಕ್ಕ ಹಾಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ರಾಜಕೀಯ ಪಕ್ಷವೊಂದು ಪ್ರಾತಿನಿಧ್ಯ ನೀಡಿದೆಯೇ?

36 ರಾಜ್ಯ ಘಟಕಗಳ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಬಿಜೆಪಿ ಅಧ್ಯಕ್ಷರಲ್ಲಿ ಯಾರೂ ದಲಿತರಿಲ್ಲ. ಏಳು ಮಂದಿ ಬ್ರಾಹ್ಮಣರು, 17 ಮಂದಿ ಇತರ ಜಾತಿಗಳಿಗೆ ಸೇರಿದವರು, ಆರು ಮಂದಿ ಎಸ್‍ಟಿಗಳು, ಐದು ಮಂದಿ ಒಬಿಸಿಗಳು ಮತ್ತು ಒಬ್ಬರು ಮುಸ್ಲಿಂ. ಇದರಲ್ಲಿ ಶೇಕಡಾ 66 ಕ್ಕಿಂತ ಹೆಚ್ಚು ಜನರು ಮೇಲ್ಜಾತಿಯವರು. ಜಿಲ್ಲಾ ಮಟ್ಟದಲ್ಲಿಯೂ ಸಹ, ಪಕ್ಷದ ಅಧ್ಯಕ್ಷರಲ್ಲಿ 65 ಪ್ರತಿಶತ ಜನರು ಮೇಲ್ಜಾತಿಯವರಾಗಿದ್ದು, ಅವರಲ್ಲಿ ನಾಲ್ಕನೇ ಒಂದು ಭಾಗದಷ್ಟು ಬ್ರಾಹ್ಮಣರಾಗಿದ್ದಾರೆ. ಬಿಜೆಪಿಯಲ್ಲಿ 752 ಜಿಲ್ಲಾಧ್ಯಕ್ಷರು ಇರಬೇಕಿದ್ದರೆ, ಮೂರು ಹುದ್ದೆಗಳು ಖಾಲಿ ಇರುವುದರಿಂದ 746 ಕ್ಕೆ ದತ್ತಾಂಶಗಳು ಲಭ್ಯವಿದ್ದು, ಮೂವರು ಜಿಲ್ಲಾಧ್ಯಕ್ಷರ ಜಾತಿಗಳು ಸ್ಪಷ್ಟವಾಗಿಲ್ಲ. ಈ ಪೈಕಿ 487 ಮೇಲ್ಜಾತಿಯವರಾಗಿದ್ದರೆ, ಶೇಕಡಾ 25 ರಷ್ಟು ಒಬಿಸಿ, ಬಿ.ಸಿ, ಎಂಬಿಸಿ ವರ್ಗಗಳಿಗೆ ಸೇರಿದವರಾಗಿದ್ದಾರೆ. ಶೇಕಡಾ 4 ಕ್ಕಿಂತ ಕಡಿಮೆ ಎಸ್‍ಸಿಗಳು. ಶೇಕಡಾ 2 ರಷ್ಟು ಸಹ ಅಲ್ಪಸಂಖ್ಯಾತ ಸಮುದಾಯಗಳಿಂದ ಬಂದವರಿಲ್ಲ. ಇವುಗಳಲ್ಲಿ ಯಾವುದೂ ಜನಸಂಖ್ಯೆಯನ್ನಾಧರಿಸಿದ ಪಾಲುದಾರಿಕೆಯಿಲ್ಲ.

Photo Courtesy: The Print

ಬಿಜೆಪಿಯ 50 ರಾಷ್ಟ್ರೀಯ ಪದಾಧಿಕಾರಿಗಳಲ್ಲಿ 17 ಮಂದಿ ಬ್ರಾಹ್ಮಣರು, 21 ಮಂದಿ ಇತರ ಮುಂದುವರಿದ ಬಲಾಢ್ಯ ಜಾತಿ, ನಾಲ್ಕು ಒಬಿಸಿಗಳು, ಮೂವರು ಪರಿಶಿಷ್ಟ ಜಾತಿ, ಇಬ್ಬರು ಪರಿಶಿಷ್ಟ ಪಂಗಡ, ಇಬ್ಬರು ಮುಸ್ಲಿಂ ಸಮುದಾಯದವರು, ಮತ್ತು ಒಬ್ಬರು ಸಿಖ್. ಬಿಜೆಪಿಯ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿ ಅಲ್ಪಸಂಖ್ಯಾತರ ಕನಿಷ್ಠ ಪ್ರಾತಿನಿಧ್ಯ ಇದೆ: ಮೂವರು ದಲಿತರಲ್ಲಿ ಒಬ್ಬರು ಪಕ್ಷದ ಎಸ್‍ಸಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇಬ್ಬರು ಮುಸ್ಲಿಮರಲ್ಲಿ ಒಬ್ಬರು ಅಲ್ಪಸಂಖ್ಯಾತ ಮೋರ್ಚಾದ ಮುಖ್ಯಸ್ಥರಾಗಿದ್ದಾರೆ. ಬುಡಕಟ್ಟು ಪ್ರತಿನಿಧಿಗಳ ವಿಷಯದಲ್ಲಿ ಇದು ಇನ್ನೂ ಕೆಟ್ಟದಾಗಿದೆ, ಏಕೆಂದರೆ ಒಬ್ಬರು ಪಕ್ಷದ ಎಸ್‍ಟಿ ಮೋರ್ಚಾದ ಮುಖ್ಯಸ್ಥರಾಗಿದ್ದರೆ, ಇನ್ನೊಬ್ಬರು ಮಧ್ಯಪ್ರದೇಶದ ಜ್ಯೋತಿ ಧ್ರುವೆ. ರಾಜ್ಯ ಸರ್ಕಾರ ಆಕೆಯ ಎಸ್‍ಟಿ ಪ್ರಮಾಣಪತ್ರವನ್ನು ರದ್ದುಪಡಿಸಿದೆ. ಈ ವಿಷಯ ಇನ್ನೂ ನ್ಯಾಯಾಲಯದಲ್ಲಿದೆ. ಪರಿಣಾಮ, ಪಕ್ಷದ ರಾಷ್ಟ್ರೀಯ ಪದಾಧಿಕಾರಿಗಳಲ್ಲಿ ಶೇಕಡಾ 76 ರಷ್ಟು ಮೇಲ್ಜಾತಿಯವರಾಗಿದ್ದರೆ, ಕೇವಲ ಶೇ.8ರಷ್ಟು ಮಾತ್ರ ಒಬಿಸಿ ಮತ್ತು ಶೇ.6ರಷ್ಟು ಎಸ್‍ಸಿ. ಇನ್ನು ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿರುವ 97 ಸದಸ್ಯರಲ್ಲಿ 29 ಮಂದಿ ಬ್ರಾಹ್ಮಣರು, 37 ಮಂದಿ ಇತರ ಮೇಲ್ಜಾತಿಯವರು, 18 ಮಂದಿ ಒಬಿಸಿಗಳು ಅಥವಾ ಬಿ.ಸಿ.ಗಳು, ಏಳು ಮಂದಿ ಪರಿಶಿಷ್ಟ ಜಾತಿ, ಮೂವರು ಅಲ್ಪಸಂಖ್ಯಾತ ಸಮುದಾಯಗಳು, ಒಬ್ಬರು ಸಿಖ್ ಮತ್ತು ಒಬ್ಬರು ಎಸ್.ಟಿ. ಪರಿಣಾಮವಾಗಿ, ಶೇಕಡಾ 69 ರಷ್ಟು ಜನರು ಮುಂದುವರಿದ ಜಾತಿಗಳಿಂದ ಬಂದವರು ಮತ್ತು ಕೇವಲ 27 ಪ್ರತಿಶತದಷ್ಟು ಜನರು ಇತರ ಸಮುದಾಯಗಳಿಂದ ಬಂದವರು.

2018 ರಲ್ಲಿ `ದಿ ಪ್ರಿಂಟ್’ ಪತ್ರಿಕೆ ಮಾಡಿರುವ ಈ ಸರ್ವೆಯನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ದೇಶದ ದಲಿತರು, ದಮನಿತರು, ಬುಡಕಟ್ಟು ಅಲೆಮಾರಿಗಳು, ಅಲ್ಪಸಂಖ್ಯಾತರನ್ನು ಬಹಳ ಪೂರ್ವಯೋಜಿತವಾಗಿ ಒಂದು ಪ್ರಭಾವಿ ರಾಜಕೀಯ ಪಕ್ಷ ದೂರ ಇಡಲಾಗಿರುವುದು ಕಣ್ಣಿಗೆ ರಾಚುವಂತೆ ಕಾಣುತ್ತದೆ. ದೇಶವನ್ನು ಆಳುವ ರಾಜಕೀಯ ಪಕ್ಷವೊಂದು ತನ್ನ ಆಂತರಿಕ ಆಡಳಿತದಲ್ಲಿ ಹೀಗೆ ಎಸ್‍ಸಿ/ಎಸ್‍ಟಿ/ಒಬಿಸಿ/ಅಲ್ಪಸಂಖ್ಯಾತ/ಮಹಿಳಾ ಪ್ರಾತಿನಿಧ್ಯವನ್ನು ಕಡಿತಗೊಳಿಸಿದರೆ, ಈ ಪಕ್ಷದ ಆಡಳಿತವಿರುವ ಸರಕಾರದ ಆದ್ಯತೆಯೇನು ಎಂದು ಬಿಡಿಸಿ ಹೇಳುವ ಅಗತ್ಯವಿಲ್ಲ. ನಮ್ಮ ಸಂವಿಧಾನಬದ್ಧ ಪಾಲನ್ನೆ ಇಲ್ಲವಾಗಿಸುತ್ತಿರುವ ಈ ಬಿಜೆಪಿಗರು ಮೀಸಲಾತಿ, ಒಳ ಮೀಸಲಾತಿ ನೀಡುವರೆ ಎಂಬುದು ಪ್ರಶ್ನೆಯಾಗಿದೆ.


ಇದನ್ನೂ ಓದಿ: ಒಳಮೀಸಲಾತಿಯ ಕುರಿತು ಡಾ. ಬಿ.ಆರ್. ಅಂಬೇಡ್ಕರ್‌ರವರ ಆಶಯ ಎನು? – ಡಾ.ನರಸಿಂಹ ಗುಂಜಹಳ್ಳಿ
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...