Homeಕರ್ನಾಟಕದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

- Advertisement -
- Advertisement -

ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ತಮ್ಮ ಪಕ್ಷದ ದಲಿತ ಶಾಸಕರೊಬ್ಬರಿಗೆ ಅಶ್ಲೀಲ ಪದದಿಂದ ನಿಂದಿಸಿದ್ದಲ್ಲದೆ, ಮೀಸಲಾತಿ ವಿಚಾರದಲ್ಲಿ ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಆಡಿಯೊ ವೈರಲಾಗಿದೆ. ಆಡಿಯೊ ಮಾಧ್ಯಮಗಳಲ್ಲಿ ವರದಿಯಾಗಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ.

ಕರ್ನಾಟಕ ಬೇಡ ಜಂಗಮ ಸಮಾಜ ಸಂಘಟನಾ ಕಾರ್ಯದರ್ಶಿ ರವಿ ಹಿರೆಮಠ ಎಂಬವರ ಜೊತೆ ಪೋನಿನಲ್ಲಿ ಮಾತನಾಡಿರುವ ಶಾಸಕ ವೀರಣ್ಣ ಚರಂತಿಮಠ ಅವರು ಕಲ್ಯಾಣಸಮಿತಿ ಅಧ್ಯಕ್ಷ ಹಾಗೂ ಮೂಡಿಗೆರೆ ಬಿಜೆಪಿ ಶಾಸಕರಾಗಿರುವ ಎಂ.ಪಿ. ಕುಮಾರಸ್ವಾಮಿ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಆ ಲೋಪರ್ ಸೂ* ಮಗ ನನ್ನ ಭೇಟಿಯೇ ಆಗಿಲ್ಲ. ಸುಮ್ಮನೆ ನಾ‌ನು ಏನೋ ಹೇಳಿದ್ದೀನಿ ಎಂದು ಹೇಳಿದ್ದಾನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಸಕ ಚರಂತಿಮಠ ಅವರು ಲಿಂಗಾಯತ ಜಂಗಮ ಸಮುದಾಯಕ್ಕೆ ‘ಬೇಡ ಜಂಗಮ’ ಜಾತಿ ಪ್ರಮಾಣಪತ್ರ ನೀಡುವ ವಿಚಾರವಾಗಿ ಪೋನಿನಲ್ಲಿ ಮಾತನಾಡಿದ್ದು, ಈ ವಿಚಾರದಲ್ಲಿ ನಿಮ್ಮ ಪರವಾಗಿ ನಾವು ಇದ್ದೇವೆ. ಆದರೆ ಅದನ್ನ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಹೇಳಿದರೆ ದಲಿತ ಸಮುದಾಯ ನಮ್ಮ ಮೈಮೇಲೆ ಬೀಳುತ್ತವೆ ಎಂದು ಕೂಡಾ ಅವರು ದಲಿತ ಸಮುದಾಯದ ಬಗ್ಗೆ ಕೂಡಾ ಹಗುರವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಫೋನಿನಲ್ಲಿ ಮಾತನಾಡುತ್ತಾ ಶಾಕಸ ಚರಂತಿಮಠ,“ಜಂಗಮರಿಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡಬೇಕು ಅಂತ ನಾವು ರಾಜಕಾರಣಿಗಳು ಬಹಿರಂಗವಾಗಿ ಮಾತಾಡಿದ್ರೆ. ಈ ದಲಿತರು ಮೈ ಮೇಲೆ ಬೀಳ್ತಾವೆ” ಎಂದು ಹೇಳಿದ್ದಾರೆ.

ತಮ್ಮನ್ನು ಬೇಡ ಜಂಗಮದ ಪಟ್ಟಿಗೆ ಹಾಕಬೇಕು ಎಂದು ರಾಜ್ಯದ ಜಂಗಮ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಆದರೆ ಇದನ್ನು ಎಸ್‌‌ಟಿ ದಲಿತ ಸಮುದಾಯ ವಿರೋಧಿಸುತ್ತಿದ್ದು, ಬಲಿಷ್ಠ ಸಮುದಾಯವಾದ ಜಂಗಮ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಹಾಕಿದರೆ ನಿಜವಾಗಿಯು ಹಿಂದುಳಿದ ಎಸ್‌ಟಿ ದಲಿತರಿಗೆ ಅನ್ಯಾಯವಾಗುತ್ತದೆ ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಅವರು ವಿರುದ್ಧ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಆಡಳಿತ ಪಕ್ಷದ ಶಾಸಕರಾಗಿ, ದಲಿತ ಶಾಸಕರೊಬ್ಬರ ಮೇಲೆ ಅದರಲ್ಲೂ ಸ್ವಪಕ್ಷೀಯ ನಾಯಕರೊಬ್ಬರ ಬಗ್ಗೆ ಈ ರೀತಿಯಾಗಿ ನಾಲಗೆ ಹರಿಬಿಟ್ಟಿದ್ದಾರೆ. ಅಷ್ಟೆ ಅಲ್ಲದೆ ದಲಿತ ಸಮುದಾಯದ ಮೇಲೆ ಅವರಿಗೆ ಇರುವ ಅಸಮಾಧಾನ ಕೂಡಾ ಇದೀಗ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿಗೆ ದಲಿತರ ಬಗ್ಗೆ ಯಾವುದೆ ಕಾಳಜಿ ಇಲ್ಲ ಎಂಬುವುದು ಈ ಆಡಿಯೊ ಮೂಲಕ ಬಹಿರಂಗವಾಗಿದೆ. ಎಲ್ಲವೂ ಬೂಟಾಟಿಕೆ” ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ್ ಜೆ. ಹೇಳಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ ಹೆಸರು ವೀರಣ್ಣ ಚರಂಡಿ ಮಠನಾ,ಇವನ ನಾಲಿಗೆ ,ಬಾಷೆ ನೋಡಿದರೆ ಅಗೆ ಅನ್ನಿಸತ್ತೆ.

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...