Homeಕರ್ನಾಟಕದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

ದಲಿತ ಶಾಸಕನಿಗೆ ಅಶ್ಲೀಲವಾಗಿ ನಿಂದಿಸಿ, ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿದ ಬಿಜೆಪಿ ಶಾಸಕ

- Advertisement -
- Advertisement -

ಬಾಗಲಕೋಟೆ ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ತಮ್ಮ ಪಕ್ಷದ ದಲಿತ ಶಾಸಕರೊಬ್ಬರಿಗೆ ಅಶ್ಲೀಲ ಪದದಿಂದ ನಿಂದಿಸಿದ್ದಲ್ಲದೆ, ಮೀಸಲಾತಿ ವಿಚಾರದಲ್ಲಿ ದಲಿತ ಸಮುದಾಯದ ಬಗ್ಗೆ ಹಗುರವಾಗಿ ಮಾತನಾಡಿರುವ ಆಡಿಯೊ ವೈರಲಾಗಿದೆ. ಆಡಿಯೊ ಮಾಧ್ಯಮಗಳಲ್ಲಿ ವರದಿಯಾಗಿದ್ದು, ವ್ಯಾಪಕ ಆಕ್ರೋಶ ಹುಟ್ಟು ಹಾಕಿದೆ.

ಕರ್ನಾಟಕ ಬೇಡ ಜಂಗಮ ಸಮಾಜ ಸಂಘಟನಾ ಕಾರ್ಯದರ್ಶಿ ರವಿ ಹಿರೆಮಠ ಎಂಬವರ ಜೊತೆ ಪೋನಿನಲ್ಲಿ ಮಾತನಾಡಿರುವ ಶಾಸಕ ವೀರಣ್ಣ ಚರಂತಿಮಠ ಅವರು ಕಲ್ಯಾಣಸಮಿತಿ ಅಧ್ಯಕ್ಷ ಹಾಗೂ ಮೂಡಿಗೆರೆ ಬಿಜೆಪಿ ಶಾಸಕರಾಗಿರುವ ಎಂ.ಪಿ. ಕುಮಾರಸ್ವಾಮಿ ಅವರ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ್ದಾರೆ. “ಆ ಲೋಪರ್ ಸೂ* ಮಗ ನನ್ನ ಭೇಟಿಯೇ ಆಗಿಲ್ಲ. ಸುಮ್ಮನೆ ನಾ‌ನು ಏನೋ ಹೇಳಿದ್ದೀನಿ ಎಂದು ಹೇಳಿದ್ದಾನೆ” ಎಂದು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಸಕ ಚರಂತಿಮಠ ಅವರು ಲಿಂಗಾಯತ ಜಂಗಮ ಸಮುದಾಯಕ್ಕೆ ‘ಬೇಡ ಜಂಗಮ’ ಜಾತಿ ಪ್ರಮಾಣಪತ್ರ ನೀಡುವ ವಿಚಾರವಾಗಿ ಪೋನಿನಲ್ಲಿ ಮಾತನಾಡಿದ್ದು, ಈ ವಿಚಾರದಲ್ಲಿ ನಿಮ್ಮ ಪರವಾಗಿ ನಾವು ಇದ್ದೇವೆ. ಆದರೆ ಅದನ್ನ ಬಹಿರಂಗವಾಗಿ ಹೇಳಲು ಆಗುವುದಿಲ್ಲ. ಹೇಳಿದರೆ ದಲಿತ ಸಮುದಾಯ ನಮ್ಮ ಮೈಮೇಲೆ ಬೀಳುತ್ತವೆ ಎಂದು ಕೂಡಾ ಅವರು ದಲಿತ ಸಮುದಾಯದ ಬಗ್ಗೆ ಕೂಡಾ ಹಗುರವಾಗಿ ಮಾತನಾಡಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ಮತ್ತು ಬಿಜೆಪಿಯ ಎರಡು ನಾಲಗೆ

ಫೋನಿನಲ್ಲಿ ಮಾತನಾಡುತ್ತಾ ಶಾಕಸ ಚರಂತಿಮಠ,“ಜಂಗಮರಿಗೆ ಬೇಡ ಜಂಗಮ ಪ್ರಮಾಣ ಪತ್ರ ನೀಡಬೇಕು ಅಂತ ನಾವು ರಾಜಕಾರಣಿಗಳು ಬಹಿರಂಗವಾಗಿ ಮಾತಾಡಿದ್ರೆ. ಈ ದಲಿತರು ಮೈ ಮೇಲೆ ಬೀಳ್ತಾವೆ” ಎಂದು ಹೇಳಿದ್ದಾರೆ.

ತಮ್ಮನ್ನು ಬೇಡ ಜಂಗಮದ ಪಟ್ಟಿಗೆ ಹಾಕಬೇಕು ಎಂದು ರಾಜ್ಯದ ಜಂಗಮ ಸಮುದಾಯದವರು ಹೋರಾಟ ನಡೆಸುತ್ತಿದ್ದಾರೆ. ಆದರೆ ಇದನ್ನು ಎಸ್‌‌ಟಿ ದಲಿತ ಸಮುದಾಯ ವಿರೋಧಿಸುತ್ತಿದ್ದು, ಬಲಿಷ್ಠ ಸಮುದಾಯವಾದ ಜಂಗಮ ಸಮುದಾಯವನ್ನು ಎಸ್‌ಟಿ ಪಟ್ಟಿಗೆ ಹಾಕಿದರೆ ನಿಜವಾಗಿಯು ಹಿಂದುಳಿದ ಎಸ್‌ಟಿ ದಲಿತರಿಗೆ ಅನ್ಯಾಯವಾಗುತ್ತದೆ ಅವರು ಪ್ರತಿಪಾದಿಸುತ್ತಿದ್ದಾರೆ.

ಬಿಜೆಪಿ ಶಾಸಕ ವೀರಣ್ಣ ಚರಂತಿಮಠ ಅವರು ವಿರುದ್ಧ ಮತ್ತು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. “ಆಡಳಿತ ಪಕ್ಷದ ಶಾಸಕರಾಗಿ, ದಲಿತ ಶಾಸಕರೊಬ್ಬರ ಮೇಲೆ ಅದರಲ್ಲೂ ಸ್ವಪಕ್ಷೀಯ ನಾಯಕರೊಬ್ಬರ ಬಗ್ಗೆ ಈ ರೀತಿಯಾಗಿ ನಾಲಗೆ ಹರಿಬಿಟ್ಟಿದ್ದಾರೆ. ಅಷ್ಟೆ ಅಲ್ಲದೆ ದಲಿತ ಸಮುದಾಯದ ಮೇಲೆ ಅವರಿಗೆ ಇರುವ ಅಸಮಾಧಾನ ಕೂಡಾ ಇದೀಗ ಬಹಿರಂಗವಾಗಿದೆ. ಆಡಳಿತರೂಢ ಬಿಜೆಪಿಗೆ ದಲಿತರ ಬಗ್ಗೆ ಯಾವುದೆ ಕಾಳಜಿ ಇಲ್ಲ ಎಂಬುವುದು ಈ ಆಡಿಯೊ ಮೂಲಕ ಬಹಿರಂಗವಾಗಿದೆ. ಎಲ್ಲವೂ ಬೂಟಾಟಿಕೆ” ಎಂದು ಸಾಮಾಜಿಕ ಕಾರ್ಯಕರ್ತ ಲಕ್ಷ್ಮಣ್ ಜೆ. ಹೇಳಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಹೆಚ್ಚಳ ವಿಚಾರದಲ್ಲಿ ಬಿಜೆಪಿ ಸರ್ಕಾರ ಎಸ್‌ಸಿ, ಎಸ್‌ಟಿ ಸಮುದಾಯವನ್ನು ತಪ್ಪುದಾರಿಗೆಳೆಯುತ್ತಿದೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇವನ ಹೆಸರು ವೀರಣ್ಣ ಚರಂಡಿ ಮಠನಾ,ಇವನ ನಾಲಿಗೆ ,ಬಾಷೆ ನೋಡಿದರೆ ಅಗೆ ಅನ್ನಿಸತ್ತೆ.

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...