Homeಕರ್ನಾಟಕಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಮಂಡಿಯೂರಿದ BJP ಆಡಳಿತದ ಮಂಗಳೂರು ಮಹಾನಗರ ಪಾಲಿಕೆ

ಬೀದಿಬದಿ ವ್ಯಾಪಾರಿಗಳ ಹೋರಾಟಕ್ಕೆ ಮಂಡಿಯೂರಿದ BJP ಆಡಳಿತದ ಮಂಗಳೂರು ಮಹಾನಗರ ಪಾಲಿಕೆ

- Advertisement -
- Advertisement -

ಬೀದಿಬದಿ ವ್ಯಾಪಾರಿಗಳ ಸತತ ಹೋರಾಟಕ್ಕೆ ಮಂಡಿಯೂರಿರುವ BJP ನೇತೃತ್ವದ ಮಂಗಳೂರು ಮಹಾನಗರ ಪಾಲಿಕೆ, ವ್ಯಾಪಾರಿಗಳ ವಿರುದ್ಧ ನಡೆಸುತ್ತಿದ್ದ ‘ತೆರವು ಕಾರ್ಯಾಚರಣೆ’ ಕೈಬಿಡುವುದಾಗಿ ಬುಧವಾರ ಘೋಷಿಸಿದೆ. ತಮ್ಮ ಮೇಲೆ ನಡೆಸುತ್ತಿರುವ ಕಾನೂನು ಬಾಹಿರ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ ಬೀದಿಬದಿ ವ್ಯಾಪಾರಿಗಳು ಬುಧವಾರದಿಂದ ಅನಿರ್ಧಿಷ್ಠಾವಧಿ ಧರಣಿ ಕೂತಿದ್ದರು.

ಈ ವೇಳೆ ಧರಣಿ ಸ್ಥಳಕ್ಕೆ ಆಗಮಿಸಿದ ಪಾಲಿಕೆ ಅಧಿಕಾರಿಗಳು ‘ತೆರವು ಕಾರ್ಯಾಚರಣೆಯನ್ನು ಕೈಬಿಡುತ್ತೇವೆ’ ಎಂದು ವ್ಯಾಪಾರಿಗಳಿಗೆ ಭರವಸೆ ನೀಡಿದ್ದಾರೆ.

ಇದನ್ನೂ ಓದಿ:‘ಮರ್ಯಾದೆಯಿಂದ ಬೀದಿಬದಿ ವ್ಯಾಪಾರಿಗಳ ವಸ್ತುಗಳನ್ನು ವಾಪಾಸು ಕೊಡಿ’

ಅನಧಿಕೃತ ಗೂಡಂಗಡಿ ಮತ್ತು ಪುಟ್‌ಪಾತ್‌ ವ್ಯಾಪಾರವನ್ನು ತೆರವು ಮಾಡಲು ಕಳೆದ ಬುಧವಾರದಂದು ಪಾಲಿಕೆಯ ಮೇಯರ್ ಮತ್ತು ಕಮೀಷನರ್‌‌‌‌ ಆದೇಶ ಹೊರಡಿಸಿದ್ದರು. ಅದರಂತೆ ಗುರುವಾರದಿಂದ ತೆರವು ಕಾರ್ಯಾಚರಣೆ ಪ್ರಾರಂಭವಾಗಿತ್ತು.

ಈ ವೇಳೆ ಬೀದಿಬದಿ ವ್ಯಾಪಾರಿಗಳಿಗೆ ಸರಕಾರವೇ ನೀಡಿದ್ದ ಗುರುತಿನ ಚೀಟಿಯಿದ್ದರೂ, ಅಂತಹ ವ್ಯಾಪಾರಿಗಳನ್ನು ಕೂಡಾ ಅಧಿಕಾರಿಗಳು ತೆರವುಗೊಳಿಸಿದ್ದು, ಅಲ್ಲದೆ ಹಲವು ವ್ಯಾಪಾರಿಗಳ ಗಾಡಿ ಮತ್ತಿತರ ವಸ್ತುಗಳನ್ನು ಅಧಿಕಾರಿಗಳ ಸಮ್ಮುಖದಲ್ಲಿ ನಿಯಮ ಬಾಹಿರವಾಗಿ ಜಜ್ಜಿ ನಾಶಪಡಿಸಲಾಗಿತ್ತು. ಇದನ್ನು ವಿರೋಧಿಸಿ ವ್ಯಾಪಾರಿಗಳು ಪ್ರತಿಭಟನೆ ನಡೆಸಿದ್ದರೂ ಪಾಲಿಕೆ ಜಗ್ಗಿರಲಿಲ್ಲ. ಹೀಗಾಗಿ ಬುಧವಾರದಿಂದ ಪಾಲಿಕೆ ವಿರುದ್ದ ಅನಿರ್ಧಿಷ್ಠಾವಧಿ ಧರಣಿಗೆ ಕರೆ ನೀಡಿದ್ದರು.

ಕಳೆದ ಗುರುವಾರದಿಂದ ಬಡ ಬೀದಿಬದಿ ವ್ಯಾಪಾರಿಗಳ ಮೇಲೆ ಎರಗಿದ್ದ ಪಾಲಿಕೆ, ಅವರ ವಸ್ತುಗಳನ್ನು ನಾಶ ಪಡಿಸುತ್ತಾ ಕಾನೂನು ಮೀರಿ ವರ್ತಿಸಿದ್ದರು. ಈ ವೇಳೆ ನಗರದ ಹಲವು ಕಡೆ ವ್ಯಾಪಾರಿಗಳು ಅಧಿಕಾರಿಗಳಿಗೆ ಘೆರಾವ್ ಹಾಕಿ, ಕಾನೂನಿನ ಪಾಠವನ್ನೂ ಮಾಡಿದ್ದರು. ಜೊತೆಗೆ ತೆರವು ಕಾರ್ಯಾಚರಣೆಗೆ ಬಂದಿದ್ದ ವಾಹನದ ಅಡಿಯಲ್ಲಿ ಮಲಗಿ ಪ್ರತಿಭಟಿಸಿದ್ದರು.

“ಬೀದಿಬದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಕಾದರೆ, ಪಟ್ಟಣ ವ್ಯಾಪಾರಿ ಸಮಿತಿಯ ಸಭೆ ನಡೆದು ಅಲ್ಲಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ, ಇದು ಕಾನೂನು’’ ಎಂದು ಬೀದಿಬದಿ ವ್ಯಾಪಾರಿ ಸಂಘದ ಅಧ್ಯಕ್ಷ ಮೊಹಮ್ಮದ್‌ ಮುಸ್ತಫಾ ಹೇಳುತ್ತಾರೆ. ಆದರೆ ಪಾಲಿಕೆಯು ಇದು ಯಾವುದನ್ನೂ ಪಾಲಿಸದೆ, ಸರ್ಕಾರವೇ ಗುರುತಿನ ಚೀಟಿ ನೀಡಿದ ಮತ್ತು ಗುರುತಿನ ಚೀಟಿ ನೀಡಲು ಸರ್ವೆ ಆಗಿರುವ ವ್ಯಾಪಾರಿಗಳನ್ನು ತೆರವುಗೊಳಿಸಿ, ಈ ವೇಳೆ ಮುಟ್ಟುಗೋಳು ಹಾಕಿದ್ದ ವಸ್ತುಗಳನ್ನು ನಾಶಪಡಿಸಿತ್ತು.

“ಮುಟ್ಟುಗೋಳು ಹಾಕಿರುವ ವಸ್ತುಗಳನ್ನು ಯಾವುದೆ ಕಾರಣಕ್ಕೂ ನಾಶ ಪಡಿಸಬಾರದು. ದಂಡ ಪಡೆದು ವ್ಯಾಪಾರಿಗಳಿಗೆ ಅವುಗಳನ್ನು ವಾಪಾಸು ಕೊಡಬೇಕು. ಆದರೆ ಪಾಲಿಕೆ ಇದನ್ನು ಮಾಡುತ್ತಿರಲಿಲ್ಲ” ಎಂದು ಮುಸ್ತಫಾ ತಿಳಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...