Homeಚಳವಳಿವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ವರವರ ರಾವ್ ಆರೋಗ್ಯ ಮತ್ತು ಚಿಕಿತ್ಸೆಯ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಸೂಚನೆ

ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ವರವರ ರಾವ್ ಇತ್ತೀಚೆಗಷ್ಟೇ ಕೊರೊನಾ ಪಾಸಿಟಿವ್ ಆಗಿದ್ದರು.

- Advertisement -
- Advertisement -

ಕ್ರಾಂತಿಕಾರಿ ಕವಿ ವರವರ ರಾವ್ ಅವರ ಆರೋಗ್ಯ ಮತ್ತು ಚಿಕಿತ್ಸೆಯ ಬಗ್ಗೆ ವರದಿ ಸಲ್ಲಿಸುವಂತೆ ಬಾಂಬೆ ಹೈಕೋರ್ಟ್ ಮಂಗಳವಾರ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿದೆ ಎಂದು ’ಲೈವ್ ಲಾ’ ವರದಿ ಮಾಡಿದೆ.

ಕೊರೆಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿರುವ ವರವರ ರಾವ್ ಇತ್ತೀಚೆಗಷ್ಟೇ ಕೊರೊನಾ ಪಾಸಿಟಿವ್ ಆಗಿದ್ದರು. ಅವರ ಆರೋಗ್ಯದ ಬಗ್ಗೆ ಹಾಗೂ ಅವರ ಚಿಕಿತ್ಸೆಯ ಬಗ್ಗೆ ಕುಟುಂಬವು ಆತಂಕ ಮತ್ತು ಹತಾಶೆಯನ್ನು ವ್ಯಕ್ತಪಡಿಸಿತ್ತು.

ನ್ಯಾಯಮೂರ್ತಿಗಳಾದ ಆರ್.ಡಿ. ಧನುಕಾ ಮತ್ತು ವಿ. ಜಿ. ಬಿಶ್ತ್ ಅವರ ವಿಭಾಗೀಯ ನ್ಯಾಯಪೀಠವು ಮಧ್ಯಂತರ ಜಾಮೀನು ನಿರಾಕರಣೆ ವಿರುದ್ಧ ರಾವ್ ಅವರ ಮನವಿ ಮತ್ತು ತಾಲೋಜ ಜೈಲು ಅಧಿಕಾರಿಗಳಿಗೆ ನಿರ್ದೇಶನ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿತು. ವರವರ ರಾವ್‌ ಅವರನ್ನು ಜೂನ್ 2, 2020 ರಂದು ಜೆಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ನಂತರ ಜೈಲಿನ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ವರವರ ಅವರ ಪರವಾಗಿ ಹಾಜರಾದ ವಕೀಲ ಸುದೀಪ್ ಪಾಸ್ಬೋಲಾ ಆಸ್ಪತ್ರೆಯಿಂದ ಅಥವಾ ಜೈಲು ಅಧಿಕಾರಿಗಳಿಂದ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಯನ್ನು ಪಡೆಯಲು ಕುಟುಂಬಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅರ್ಜಿಯಲ್ಲಿ ದೂರಿದ್ದಾರೆ.


ಓದಿ: ಕವಿ ವರವರ ರಾವ್ ಬಿಡುಗಡೆಗೊಳಿಸಿ: ಸಾಹಿತಿ, ಚಿಂತಕರ ಆಗ್ರಹ


ಅವರ ಕುಟುಂಬವು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಮತ್ತು ಮಹಾರಾಷ್ಟ್ರದ ಗೃಹ ಸಚಿವರಿಗೆ ಮಧ್ಯಪ್ರವೇಶ ಮಾಡಬೇಕು ಎಂದು ಪತ್ರ ಬರೆದಿದ್ದು, ಹನ್ನೆರಡು ದಿನಗಳಿಂದ ರಾವ್ ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿಗಳು ಬಂದಿಲ್ಲ ಎಂದು ಆರೋಪಿಸಿದ್ದಾರೆ.

ಎನ್ಐಎ ಸಲಹೆಗಾರ ಹೆಚ್ಚುವರಿ ಸಾಲಿಸಿಟರ್ ಜನರಲ್ ಅನಿಲ್ ಸಿಂಗ್ “ಕುಟುಂಬವು ಅವರನ್ನು ಮಾತನಾಡಲು ಅಥವಾ ಭೇಟಿಯಾಗಲು ಬಯಸಿದರೆ ಹಾಗೂ ಆಸ್ಪತ್ರೆ ಅನುಮತಿಸಿದರೆ ನಮಗೆ ಯಾವುದೇ ಸಮಸ್ಯೆ ಇಲ್ಲ. ನಾನಾವತಿ ಆಸ್ಪತ್ರೆ ಅತ್ಯುತ್ತಮ ಆಸ್ಪತ್ರೆ ಮತ್ತು ಅವರ ಆರೋಗ್ಯದ ಬಗ್ಗೆ ಅಥವಾ ಚಿಕಿತ್ಸೆ ಬಗ್ಗೆ ಯಾವುದೇ ಕುಂದುಕೊರತೆ ಇರುವುದಿಲ್ಲ” ಎಂದು ಹೇಳಿದರು

ಇದಕ್ಕೆ ಪ್ರತಿಕ್ರಿಯಿಸಿದ ಪಾಸ್ಬೋಲಾ, ಅವರ ಆರೋಗ್ಯದ ಬಗ್ಗೆ ಯಾವುದೇ ಮಾಹಿತಿ ಇಲ್ಲದಿರುವಾಗ ಯಾವುದೇ ಕುಂದುಕೊರತೆ ಇಲ್ಲ ಎಂದು ಹೇಗೆ ಹೇಳುತ್ತೀರಿ ಎಂದು ಪ್ರಶ್ನಿಸಿದ್ದಾರೆ.

ಈ ಸಮಯದಲ್ಲಿ ಅವರ ಆರೋಗ್ಯ ಮಾಹಿತಿಯನ್ನು ಹಂಚಿಕೊಂಡರೆ ಏನಾದರೂ ಸಮಸ್ಯೆ ಇದೆಯೇ ಎಂದು ನ್ಯಾಯಪೀಠ ರಾಜ್ಯವನ್ನು ಕೇಳಿದೆ. ಯಾವುದೇ ಮಾಹಿತಿ ಹಂಚಿಕೊಳ್ಳಲು ಕುಟುಂಬಕ್ಕೆ ಯಾವುದೇ ಆಕ್ಷೇಪವಿಲ್ಲದಿದ್ದರೆ ವರದಿ ಸಲ್ಲಿಸಲು ಆಸ್ಪತ್ರೆಗೆ ನಿರ್ದೇಶನ ನೀಡಬಹುದು ಎಂದು ಪಿಪಿ ದೀಪಕ್ ಠಾಕ್ರೆ ಹೇಳಿದ್ದಾರೆ.

ಹೀಗಾಗಿ, ರಾವ್ ಅವರ ಆರೋಗ್ಯ ಸ್ಥಿತಿ ಮತ್ತು ಚಿಕಿತ್ಸೆಯ ಕುರಿತು ವರದಿಯನ್ನು ಸಲ್ಲಿಸುವಂತೆ ನ್ಯಾಯಪೀಠ ನಾನಾವತಿ ಆಸ್ಪತ್ರೆಗೆ ನಿರ್ದೇಶಿಸಿತು. ಈ ವಿಷಯದ ಮುಂದಿನ ವಿಚಾರಣೆಯ ದಿನಾಂಕ ಆಗಸ್ಟ್ 7 ರಂದು ನಡೆಯಲಿದೆ.


ಓದಿ: ವರವರ ರಾವ್ ಅನಾರೋಗ್ಯದ ಸ್ಥಿತಿಯನ್ನು ದುರುಪಯೋಗ ಮಾಡುತ್ತಿದ್ದಾರೆ; ಅವರಿಗೆ ಜಾಮಿನು ನೀಡಕೂಡದು: NIA


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...