Homeಮುಖಪುಟಕೇಂದ್ರದ 'ಐಟಿ ನಿಯಮಗಳ ತಿದ್ದುಪಡಿ'ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಕೇಂದ್ರದ ‘ಐಟಿ ನಿಯಮಗಳ ತಿದ್ದುಪಡಿ’ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಮತ್ತು ಸುಳ್ಳು ವಿಷಯವನ್ನು ಗುರುತಿಸುವ ಮತ್ತು ನಿಯಂತ್ರಿಸುವ ಉದ್ದೇಶದಿಂದ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬಾಂಬೆ ಹೈಕೋರ್ಟ್ ಗುರುವಾರ ಅಧಿಕೃತವಾಗಿ ರದ್ದುಗೊಳಿಸಿದ್ದು, ಅವುಗಳನ್ನು “ಅಸಂವಿಧಾನಿಕ” ಎಂದು ಬಣ್ಣಿಸಿದೆ.

ನ್ಯಾಯಮೂರ್ತಿ ಎಎಸ್ ಚಂದೂರ್ಕರ್ ಅವರ ಏಕ ಪೀಠವು ಸೆಪ್ಟೆಂಬರ್ 20 ರಂದು, ತಿದ್ದುಪಡಿ ಮಾಡಿದ ನಿಯಮಗಳು ಅಸ್ಪಷ್ಟ ಮತ್ತು ವಿಶಾಲವಾಗಿದ್ದು, ವ್ಯಕ್ತಿಯ ಮೇಲೆ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮದ ಮಧ್ಯವರ್ತಿಗಳ ಮೇಲೂ ಪ್ರತಿಕೂಲ ಪರಿಣಾಮವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಗಮನಿಸಿತು.

ಈ ವರ್ಷದ ಆರಂಭದಲ್ಲಿ ವಿಭಾಗೀಯ ಪೀಠವು ಈ ವಿಷಯದ ಕುರಿತು ತೀರ್ಪು ನೀಡಿದ ಬಳಿಕ ನ್ಯಾಯಮೂರ್ತಿ ಚಂದೂರ್ಕರ್ ಅವರು ಟೈ ಬ್ರೇಕರ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ಮೂರನೇ ನ್ಯಾಯಾಧೀಶರ ತೀರ್ಪಿನ ಬಳಿಕ, ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಗುರುವಾರ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ನ್ಯೂಸ್ ಬ್ರಾಡ್‌ಕಾಸ್ಟ್ ಮತ್ತು ಡಿಜಿಟಲ್ ಅಸೋಸಿಯೇಷನ್, ಅಸೋಸಿಯೇಷನ್ ​​​​ಆಫ್ ಇಂಡಿಯನ್ ಸಲ್ಲಿಸಿದ ಅರ್ಜಿಗಳ ಗುಂಪಿಗೆ ಔಪಚಾರಿಕವಾಗಿ ತೀರ್ಪು ಪ್ರಕಟಿಸಿತು.

“ಬಹುಮತದ ಅಭಿಪ್ರಾಯದ ದೃಷ್ಟಿಯಿಂದ, ನಿಯಮ 3 (1) (ವಿ) ಅನ್ನು ಅಸಂವಿಧಾನಿಕ ಎಂದು ಘೋಷಿಸಿ, ಅದನ್ನು ರದ್ದುಗೊಳಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವನ್ನು ಆರಂಭದಲ್ಲಿ ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ (ಈಗ ನಿವೃತ್ತ) ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಪರಿಶೀಲಿಸಿತ್ತು, ಅವರು ಜನವರಿಯಲ್ಲಿ ವಿಭಜಿತ ತೀರ್ಪು ನೀಡಿದ್ದರು.

ನಿಯಮಗಳು ಸಾಮಾಜಿಕ ಜಾಳತಾಣದಲ್ಲಿ ಸೆನ್ಸಾರ್‌ಶಿಪ್‌ ಅನ್ನು ರೂಪಿಸುತ್ತವೆ ಎಂದು ನ್ಯಾಯಮೂರ್ತಿ ಪಟೇಲ್ ವಾದಿಸಿದರು. ಆದರೆ, ನ್ಯಾಯಮೂರ್ತಿ ಗೋಖಲೆ ಅವರು ವಾಕ್ ಸ್ವಾತಂತ್ರ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರದ ನಿಯಮಗಳನ್ನು ಸಮರ್ಥಿಸಿಕೊಂಡರು.

ನ್ಯಾಯಮೂರ್ತಿ ಚಂದೂರ್ಕರ್ ಅವರು ತಮ್ಮ ಅಭಿಪ್ರಾಯವನ್ನು ನ್ಯಾಯಮೂರ್ತಿ ಪಟೇಲ್ ಅವರ ಅಭಿಪ್ರಾಯದೊಂದಿಗೆ ಜೋಡಿಸಿದರು, ಮುಕ್ತ ಅಭಿವ್ಯಕ್ತಿಗೆ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ವಿವಾದದ ಕೇಂದ್ರವು ಫ್ಯಾಕ್ಟ್ ಚೆಕಿಂಗ್ ಯುನಿಟ್ (ಎಫ್‌ಸಿಯು) ಸ್ಥಾಪನೆಯಾಗಿದೆ. ಇದು ಸರ್ಕಾರಕ್ಕೆ ಸಂಬಂಧಿಸಿದಂತೆ ತಪ್ಪುದಾರಿಗೆಳೆಯುವ ಅಥವಾ ತಪ್ಪು ಎಂದು ಪರಿಗಣಿಸಲಾದ ಆನ್‌ಲೈನ್ ವಿಷಯವನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ನಿಯಮಗಳು ಮೂಲಭೂತ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತವೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿತು.

ಐಟಿ ನಿಯಮಗಳಿಗೆ ವಿವಾದಾತ್ಮಕ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರವು ಏಪ್ರಿಲ್ 6, 2023 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ರ ಭಾಗವಾಗಿ ಪರಿಚಯಿಸಿತು.

ಸರ್ಕಾರಿ ಚಟುವಟಿಕೆಗಳಿಗೆ ಸಂಬಂಧಿಸಿದ ನಕಲಿ ಅಥವಾ ತಪ್ಪುದಾರಿಗೆಳೆಯುವ ಯಾವುದೇ ವಿಷಯವನ್ನು ಮೇಲ್ವಿಚಾರಣೆ ಮಾಡಲು ನಿಯಮಗಳು ‘ಎಫ್‌ಯುಸಿ’ ಅನ್ನು ಕಡ್ಡಾಯಗೊಳಿಸಿದೆ.

ಇದನ್ನೂ ಓದಿ; ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...