Homeಮುಖಪುಟಕೇಂದ್ರದ 'ಐಟಿ ನಿಯಮಗಳ ತಿದ್ದುಪಡಿ'ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಕೇಂದ್ರದ ‘ಐಟಿ ನಿಯಮಗಳ ತಿದ್ದುಪಡಿ’ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಮತ್ತು ಸುಳ್ಳು ವಿಷಯವನ್ನು ಗುರುತಿಸುವ ಮತ್ತು ನಿಯಂತ್ರಿಸುವ ಉದ್ದೇಶದಿಂದ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬಾಂಬೆ ಹೈಕೋರ್ಟ್ ಗುರುವಾರ ಅಧಿಕೃತವಾಗಿ ರದ್ದುಗೊಳಿಸಿದ್ದು, ಅವುಗಳನ್ನು “ಅಸಂವಿಧಾನಿಕ” ಎಂದು ಬಣ್ಣಿಸಿದೆ.

ನ್ಯಾಯಮೂರ್ತಿ ಎಎಸ್ ಚಂದೂರ್ಕರ್ ಅವರ ಏಕ ಪೀಠವು ಸೆಪ್ಟೆಂಬರ್ 20 ರಂದು, ತಿದ್ದುಪಡಿ ಮಾಡಿದ ನಿಯಮಗಳು ಅಸ್ಪಷ್ಟ ಮತ್ತು ವಿಶಾಲವಾಗಿದ್ದು, ವ್ಯಕ್ತಿಯ ಮೇಲೆ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮದ ಮಧ್ಯವರ್ತಿಗಳ ಮೇಲೂ ಪ್ರತಿಕೂಲ ಪರಿಣಾಮವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಗಮನಿಸಿತು.

ಈ ವರ್ಷದ ಆರಂಭದಲ್ಲಿ ವಿಭಾಗೀಯ ಪೀಠವು ಈ ವಿಷಯದ ಕುರಿತು ತೀರ್ಪು ನೀಡಿದ ಬಳಿಕ ನ್ಯಾಯಮೂರ್ತಿ ಚಂದೂರ್ಕರ್ ಅವರು ಟೈ ಬ್ರೇಕರ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ಮೂರನೇ ನ್ಯಾಯಾಧೀಶರ ತೀರ್ಪಿನ ಬಳಿಕ, ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಗುರುವಾರ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ನ್ಯೂಸ್ ಬ್ರಾಡ್‌ಕಾಸ್ಟ್ ಮತ್ತು ಡಿಜಿಟಲ್ ಅಸೋಸಿಯೇಷನ್, ಅಸೋಸಿಯೇಷನ್ ​​​​ಆಫ್ ಇಂಡಿಯನ್ ಸಲ್ಲಿಸಿದ ಅರ್ಜಿಗಳ ಗುಂಪಿಗೆ ಔಪಚಾರಿಕವಾಗಿ ತೀರ್ಪು ಪ್ರಕಟಿಸಿತು.

“ಬಹುಮತದ ಅಭಿಪ್ರಾಯದ ದೃಷ್ಟಿಯಿಂದ, ನಿಯಮ 3 (1) (ವಿ) ಅನ್ನು ಅಸಂವಿಧಾನಿಕ ಎಂದು ಘೋಷಿಸಿ, ಅದನ್ನು ರದ್ದುಗೊಳಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವನ್ನು ಆರಂಭದಲ್ಲಿ ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ (ಈಗ ನಿವೃತ್ತ) ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಪರಿಶೀಲಿಸಿತ್ತು, ಅವರು ಜನವರಿಯಲ್ಲಿ ವಿಭಜಿತ ತೀರ್ಪು ನೀಡಿದ್ದರು.

ನಿಯಮಗಳು ಸಾಮಾಜಿಕ ಜಾಳತಾಣದಲ್ಲಿ ಸೆನ್ಸಾರ್‌ಶಿಪ್‌ ಅನ್ನು ರೂಪಿಸುತ್ತವೆ ಎಂದು ನ್ಯಾಯಮೂರ್ತಿ ಪಟೇಲ್ ವಾದಿಸಿದರು. ಆದರೆ, ನ್ಯಾಯಮೂರ್ತಿ ಗೋಖಲೆ ಅವರು ವಾಕ್ ಸ್ವಾತಂತ್ರ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರದ ನಿಯಮಗಳನ್ನು ಸಮರ್ಥಿಸಿಕೊಂಡರು.

ನ್ಯಾಯಮೂರ್ತಿ ಚಂದೂರ್ಕರ್ ಅವರು ತಮ್ಮ ಅಭಿಪ್ರಾಯವನ್ನು ನ್ಯಾಯಮೂರ್ತಿ ಪಟೇಲ್ ಅವರ ಅಭಿಪ್ರಾಯದೊಂದಿಗೆ ಜೋಡಿಸಿದರು, ಮುಕ್ತ ಅಭಿವ್ಯಕ್ತಿಗೆ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ವಿವಾದದ ಕೇಂದ್ರವು ಫ್ಯಾಕ್ಟ್ ಚೆಕಿಂಗ್ ಯುನಿಟ್ (ಎಫ್‌ಸಿಯು) ಸ್ಥಾಪನೆಯಾಗಿದೆ. ಇದು ಸರ್ಕಾರಕ್ಕೆ ಸಂಬಂಧಿಸಿದಂತೆ ತಪ್ಪುದಾರಿಗೆಳೆಯುವ ಅಥವಾ ತಪ್ಪು ಎಂದು ಪರಿಗಣಿಸಲಾದ ಆನ್‌ಲೈನ್ ವಿಷಯವನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ನಿಯಮಗಳು ಮೂಲಭೂತ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತವೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿತು.

ಐಟಿ ನಿಯಮಗಳಿಗೆ ವಿವಾದಾತ್ಮಕ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರವು ಏಪ್ರಿಲ್ 6, 2023 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ರ ಭಾಗವಾಗಿ ಪರಿಚಯಿಸಿತು.

ಸರ್ಕಾರಿ ಚಟುವಟಿಕೆಗಳಿಗೆ ಸಂಬಂಧಿಸಿದ ನಕಲಿ ಅಥವಾ ತಪ್ಪುದಾರಿಗೆಳೆಯುವ ಯಾವುದೇ ವಿಷಯವನ್ನು ಮೇಲ್ವಿಚಾರಣೆ ಮಾಡಲು ನಿಯಮಗಳು ‘ಎಫ್‌ಯುಸಿ’ ಅನ್ನು ಕಡ್ಡಾಯಗೊಳಿಸಿದೆ.

ಇದನ್ನೂ ಓದಿ; ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...