Homeಮುಖಪುಟಕೇಂದ್ರದ 'ಐಟಿ ನಿಯಮಗಳ ತಿದ್ದುಪಡಿ'ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

ಕೇಂದ್ರದ ‘ಐಟಿ ನಿಯಮಗಳ ತಿದ್ದುಪಡಿ’ಯನ್ನು ಅಧಿಕೃತವಾಗಿ ರದ್ದುಗೊಳಿಸಿದ ಬಾಂಬೆ ಹೈಕೋರ್ಟ್

- Advertisement -
- Advertisement -

ಒಕ್ಕೂಟ ಸರ್ಕಾರದ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ನಕಲಿ ಮತ್ತು ಸುಳ್ಳು ವಿಷಯವನ್ನು ಗುರುತಿಸುವ ಮತ್ತು ನಿಯಂತ್ರಿಸುವ ಉದ್ದೇಶದಿಂದ ತಿದ್ದುಪಡಿ ಮಾಡಲಾದ ಮಾಹಿತಿ ತಂತ್ರಜ್ಞಾನ ನಿಯಮಗಳನ್ನು ಬಾಂಬೆ ಹೈಕೋರ್ಟ್ ಗುರುವಾರ ಅಧಿಕೃತವಾಗಿ ರದ್ದುಗೊಳಿಸಿದ್ದು, ಅವುಗಳನ್ನು “ಅಸಂವಿಧಾನಿಕ” ಎಂದು ಬಣ್ಣಿಸಿದೆ.

ನ್ಯಾಯಮೂರ್ತಿ ಎಎಸ್ ಚಂದೂರ್ಕರ್ ಅವರ ಏಕ ಪೀಠವು ಸೆಪ್ಟೆಂಬರ್ 20 ರಂದು, ತಿದ್ದುಪಡಿ ಮಾಡಿದ ನಿಯಮಗಳು ಅಸ್ಪಷ್ಟ ಮತ್ತು ವಿಶಾಲವಾಗಿದ್ದು, ವ್ಯಕ್ತಿಯ ಮೇಲೆ ಮಾತ್ರವಲ್ಲದೆ ಸಾಮಾಜಿಕ ಮಾಧ್ಯಮದ ಮಧ್ಯವರ್ತಿಗಳ ಮೇಲೂ ಪ್ರತಿಕೂಲ ಪರಿಣಾಮವನ್ನು ಉಂಟುಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂಬುದನ್ನು ಗಮನಿಸಿತು.

ಈ ವರ್ಷದ ಆರಂಭದಲ್ಲಿ ವಿಭಾಗೀಯ ಪೀಠವು ಈ ವಿಷಯದ ಕುರಿತು ತೀರ್ಪು ನೀಡಿದ ಬಳಿಕ ನ್ಯಾಯಮೂರ್ತಿ ಚಂದೂರ್ಕರ್ ಅವರು ಟೈ ಬ್ರೇಕರ್ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದರು.

ಪ್ರಕರಣದ ಕುರಿತು ಮೂರನೇ ನ್ಯಾಯಾಧೀಶರ ತೀರ್ಪಿನ ಬಳಿಕ, ನ್ಯಾಯಮೂರ್ತಿಗಳಾದ ಎಎಸ್ ಗಡ್ಕರಿ ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಗುರುವಾರ ಸ್ಟ್ಯಾಂಡ್-ಅಪ್ ಕಾಮಿಡಿಯನ್ ಕುನಾಲ್ ಕಮ್ರಾ, ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾ, ನ್ಯೂಸ್ ಬ್ರಾಡ್‌ಕಾಸ್ಟ್ ಮತ್ತು ಡಿಜಿಟಲ್ ಅಸೋಸಿಯೇಷನ್, ಅಸೋಸಿಯೇಷನ್ ​​​​ಆಫ್ ಇಂಡಿಯನ್ ಸಲ್ಲಿಸಿದ ಅರ್ಜಿಗಳ ಗುಂಪಿಗೆ ಔಪಚಾರಿಕವಾಗಿ ತೀರ್ಪು ಪ್ರಕಟಿಸಿತು.

“ಬಹುಮತದ ಅಭಿಪ್ರಾಯದ ದೃಷ್ಟಿಯಿಂದ, ನಿಯಮ 3 (1) (ವಿ) ಅನ್ನು ಅಸಂವಿಧಾನಿಕ ಎಂದು ಘೋಷಿಸಿ, ಅದನ್ನು ರದ್ದುಗೊಳಿಸಲಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಈ ಪ್ರಕರಣವನ್ನು ಆರಂಭದಲ್ಲಿ ನ್ಯಾಯಮೂರ್ತಿಗಳಾದ ಗೌತಮ್ ಪಟೇಲ್ (ಈಗ ನಿವೃತ್ತ) ಮತ್ತು ನೀಲಾ ಗೋಖಲೆ ಅವರ ವಿಭಾಗೀಯ ಪೀಠವು ಪರಿಶೀಲಿಸಿತ್ತು, ಅವರು ಜನವರಿಯಲ್ಲಿ ವಿಭಜಿತ ತೀರ್ಪು ನೀಡಿದ್ದರು.

ನಿಯಮಗಳು ಸಾಮಾಜಿಕ ಜಾಳತಾಣದಲ್ಲಿ ಸೆನ್ಸಾರ್‌ಶಿಪ್‌ ಅನ್ನು ರೂಪಿಸುತ್ತವೆ ಎಂದು ನ್ಯಾಯಮೂರ್ತಿ ಪಟೇಲ್ ವಾದಿಸಿದರು. ಆದರೆ, ನ್ಯಾಯಮೂರ್ತಿ ಗೋಖಲೆ ಅವರು ವಾಕ್ ಸ್ವಾತಂತ್ರ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವುದಿಲ್ಲ ಎಂದು ಕೇಂದ್ರದ ನಿಯಮಗಳನ್ನು ಸಮರ್ಥಿಸಿಕೊಂಡರು.

ನ್ಯಾಯಮೂರ್ತಿ ಚಂದೂರ್ಕರ್ ಅವರು ತಮ್ಮ ಅಭಿಪ್ರಾಯವನ್ನು ನ್ಯಾಯಮೂರ್ತಿ ಪಟೇಲ್ ಅವರ ಅಭಿಪ್ರಾಯದೊಂದಿಗೆ ಜೋಡಿಸಿದರು, ಮುಕ್ತ ಅಭಿವ್ಯಕ್ತಿಗೆ ನಾಗರಿಕರ ಹಕ್ಕುಗಳನ್ನು ರಕ್ಷಿಸುವ ಅಗತ್ಯವನ್ನು ಒತ್ತಿ ಹೇಳಿದರು.

ವಿವಾದದ ಕೇಂದ್ರವು ಫ್ಯಾಕ್ಟ್ ಚೆಕಿಂಗ್ ಯುನಿಟ್ (ಎಫ್‌ಸಿಯು) ಸ್ಥಾಪನೆಯಾಗಿದೆ. ಇದು ಸರ್ಕಾರಕ್ಕೆ ಸಂಬಂಧಿಸಿದಂತೆ ತಪ್ಪುದಾರಿಗೆಳೆಯುವ ಅಥವಾ ತಪ್ಪು ಎಂದು ಪರಿಗಣಿಸಲಾದ ಆನ್‌ಲೈನ್ ವಿಷಯವನ್ನು ಪತ್ತೆಹಚ್ಚಲು ವಿನ್ಯಾಸಗೊಳಿಸಲಾಗಿದೆ. ನಿಯಮಗಳು ಮೂಲಭೂತ ಹಕ್ಕುಗಳ ಮೇಲೆ ಪ್ರತಿಕೂಲ ಪರಿಣಾಮವನ್ನು ಬೀರುತ್ತವೆ ಎಂಬ ಅರ್ಜಿದಾರರ ವಾದವನ್ನು ನ್ಯಾಯಾಲಯವು ಒಪ್ಪಿಕೊಂಡಿತು.

ಐಟಿ ನಿಯಮಗಳಿಗೆ ವಿವಾದಾತ್ಮಕ ತಿದ್ದುಪಡಿಗಳನ್ನು ಕೇಂದ್ರ ಸರ್ಕಾರವು ಏಪ್ರಿಲ್ 6, 2023 ರಂದು ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ ಸಂಹಿತೆ) ನಿಯಮಗಳು, 2021 ರ ಭಾಗವಾಗಿ ಪರಿಚಯಿಸಿತು.

ಸರ್ಕಾರಿ ಚಟುವಟಿಕೆಗಳಿಗೆ ಸಂಬಂಧಿಸಿದ ನಕಲಿ ಅಥವಾ ತಪ್ಪುದಾರಿಗೆಳೆಯುವ ಯಾವುದೇ ವಿಷಯವನ್ನು ಮೇಲ್ವಿಚಾರಣೆ ಮಾಡಲು ನಿಯಮಗಳು ‘ಎಫ್‌ಯುಸಿ’ ಅನ್ನು ಕಡ್ಡಾಯಗೊಳಿಸಿದೆ.

ಇದನ್ನೂ ಓದಿ; ಮಾನನಷ್ಟ ಮೊಕದ್ದಮೆ ಪ್ರಕರಣ; ಶಿಕ್ಷೆ ಪ್ರಕಟವಾದ ಕೆಲವೇ ಗಂಟೆಗಳಲ್ಲಿ ಜಾಮೀನು ಪಡೆದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...