Homeಮುಖಪುಟಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

ಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

- Advertisement -
- Advertisement -

ಬಂಧಿಸಲು ನೀಡಿದ ಕಾರಣಗಳು ಆರೋಪಿಗೆ ಅರ್ಥವಾಗದ ಹಿಂದಿ ಭಾಷೆಯಲ್ಲಿವೆ ಎಂದು ಕಂಡುಕೊಂಡಿರುವ ಬಾಂಬೆ ಹೈಕೋರ್ಟ್ ಮಾದಕವಸ್ತು ಪ್ರಕರಣದಲ್ಲಿ ಸಿಲುಕಿದ್ದ ವಿದೇಶಿ ಪ್ರಜೆಯೊಬ್ಬರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು ಬಂಧನದ ಆಧಾರವನ್ನು ಒದಗಿಸುವುದು ಬಹಳ ಅಮೂಲ್ಯವಾದ ಸಾಂವಿಧಾನಿಕ ಹಕ್ಕು ಎಂದು ಅಭಿಪ್ರಾಯಪಟ್ಟಿದೆ.

“ಯಾಕೆ ಬಂಧಿಸಲಾಗಿದೆ ಎಂಬ ಅನುವಾದಿತ ಆವೃತ್ತಿಯನ್ನು ಆರೋಪಿಗೆ ನೀಡದಿರುವುದು ವಾಸ್ತವವಾಗಿ ಬಂಧನದ ಆಧಾರವನ್ನು ಬಂಧಿತನಿಗೆ ಪೂರೈಸದಂತಾಗುತ್ತದೆ. ಹೀಗಾಗಿ ಬಂಧನವು ದುರ್ಬಲಗೊಳ್ಳುತ್ತದೆ” ಎಂದು ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರ ಪಾಲುದಾರರ ಸಹೋದರ ಅಗಿಸಿಲಾಸ್ ಡಿಮೆಟ್ರಿಯಾಡ್ಸ್ ಆರೋಪಿಯಾಗಿದ್ದು ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಶಕ್ಕೆ ಪಡೆದಿತ್ತು. ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಅಕ್ರಮ ಸಾಗಾಟವನ್ನು ತಡೆಗಟ್ಟುವ ಕಾಯ್ದೆ (ಪಿಐಟಿಎನ್‌ಪಿಎಸ್‌ಎ) ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಒಂದು ತಿಂಗಳ ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ಸೆಪ್ಟೆಂಬರ್ 2021 ರಲ್ಲಿ ಕಂದಾಯ ಇಲಾಖೆ (ಪಿಐಟಿಎನ್‌ಡಿಪಿಎಸ್ ಘಟಕ) ಬಂಧನ ಆದೇಶವನ್ನು ಜಾರಿಗೊಳಿಸಿತು.

ವಕೀಲ ಕುಶಾಲ್ ಮೋರ್ ಮೂಲಕ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ ಆರೋಪಿ, ತಾನು ವಿದೇಶಿ ಪ್ರಜೆಯಾಗಿರುವುದರಿಂದ ತನಗೆ ಹಿಂದಿ ಭಾಷೆಯ ಅರಿವಿಲ್ಲ ಎಂದು ಸೂಚಿಸಿದ್ದಾರೆ. ಈ ಕಾರಣದಿಂದಾಗಿ, ಹಿಂದಿಯನ್ನು ಓದಲು, ಬರೆಯಲು ಅಥವಾ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಅಲ್ಲದೆ ಬಂಧನದ ದಾಖಲೆಗಳು ಹಿಂದಿಯಲ್ಲಿದ್ದು, ಅದಕ್ಕೆ ಯಾವುದೇ ಅನುವಾದವನ್ನು ಒದಗಿಸಲಾಗಿಲ್ಲ. ಇದರಿಂದಾಗಿ ಪರಿಣಾಮಕಾರಿ ಮತ್ತು ಸಂಪೂರ್ಣ ಪ್ರಾತಿನಿಧ್ಯವನ್ನು ನೀಡುವಲ್ಲಿ ವಿಫಲರಾಗಿದ್ದೇನೆ ಎಂದು ವಾದಿಸಿದ್ದರು.

ಎನ್‌ಸಿಬಿ ಪರ ವಕೀಲ ಶ್ರೀರಾಮ್ ಶಿರ್ಸಾತ್ ವಾದ ಮಂಡಿಸಿ, ಅರ್ಜಿದಾರರ ಪರ ವಕೀಲರೊಬ್ಬರು ಹಿಂದಿ ದಾಖಲೆಗಳನ್ನು ಭಾಷಾಂತರಿಸಿದ್ದಾರೆ ಎಂದು ವಾದಿಸಿದರು. ಆದರೆ ಆರೋಪಿಯು ಪಂಚನಾಮದಲ್ಲಿನ ಪುಟಗಳಿಗೆ ಸಹಿ ಹಾಕಲು ನಿರಾಕರಿಸಿದ್ದನ್ನು ಗಮನಿಸಿದ ನ್ಯಾಯಾಲಯವು, ಎನ್‌ಸಿಬಿಯ ವಾದವನ್ನು ಸುಳ್ಳು ಎಂದು ನಿರ್ಧಾರಿಸಿದೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ನ್ಯಾಯಾಲಯವು ಸೆಪ್ಟೆಂಬರ್ 2021 ರ ಬಂಧನ ಆದೇಶವನ್ನು ರದ್ದುಗೊಳಿಸಿ, ಆರೋಪಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...