Homeಮುಖಪುಟಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

ಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

- Advertisement -
- Advertisement -

ಬಂಧಿಸಲು ನೀಡಿದ ಕಾರಣಗಳು ಆರೋಪಿಗೆ ಅರ್ಥವಾಗದ ಹಿಂದಿ ಭಾಷೆಯಲ್ಲಿವೆ ಎಂದು ಕಂಡುಕೊಂಡಿರುವ ಬಾಂಬೆ ಹೈಕೋರ್ಟ್ ಮಾದಕವಸ್ತು ಪ್ರಕರಣದಲ್ಲಿ ಸಿಲುಕಿದ್ದ ವಿದೇಶಿ ಪ್ರಜೆಯೊಬ್ಬರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು ಬಂಧನದ ಆಧಾರವನ್ನು ಒದಗಿಸುವುದು ಬಹಳ ಅಮೂಲ್ಯವಾದ ಸಾಂವಿಧಾನಿಕ ಹಕ್ಕು ಎಂದು ಅಭಿಪ್ರಾಯಪಟ್ಟಿದೆ.

“ಯಾಕೆ ಬಂಧಿಸಲಾಗಿದೆ ಎಂಬ ಅನುವಾದಿತ ಆವೃತ್ತಿಯನ್ನು ಆರೋಪಿಗೆ ನೀಡದಿರುವುದು ವಾಸ್ತವವಾಗಿ ಬಂಧನದ ಆಧಾರವನ್ನು ಬಂಧಿತನಿಗೆ ಪೂರೈಸದಂತಾಗುತ್ತದೆ. ಹೀಗಾಗಿ ಬಂಧನವು ದುರ್ಬಲಗೊಳ್ಳುತ್ತದೆ” ಎಂದು ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರ ಪಾಲುದಾರರ ಸಹೋದರ ಅಗಿಸಿಲಾಸ್ ಡಿಮೆಟ್ರಿಯಾಡ್ಸ್ ಆರೋಪಿಯಾಗಿದ್ದು ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಶಕ್ಕೆ ಪಡೆದಿತ್ತು. ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಅಕ್ರಮ ಸಾಗಾಟವನ್ನು ತಡೆಗಟ್ಟುವ ಕಾಯ್ದೆ (ಪಿಐಟಿಎನ್‌ಪಿಎಸ್‌ಎ) ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಒಂದು ತಿಂಗಳ ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ಸೆಪ್ಟೆಂಬರ್ 2021 ರಲ್ಲಿ ಕಂದಾಯ ಇಲಾಖೆ (ಪಿಐಟಿಎನ್‌ಡಿಪಿಎಸ್ ಘಟಕ) ಬಂಧನ ಆದೇಶವನ್ನು ಜಾರಿಗೊಳಿಸಿತು.

ವಕೀಲ ಕುಶಾಲ್ ಮೋರ್ ಮೂಲಕ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ ಆರೋಪಿ, ತಾನು ವಿದೇಶಿ ಪ್ರಜೆಯಾಗಿರುವುದರಿಂದ ತನಗೆ ಹಿಂದಿ ಭಾಷೆಯ ಅರಿವಿಲ್ಲ ಎಂದು ಸೂಚಿಸಿದ್ದಾರೆ. ಈ ಕಾರಣದಿಂದಾಗಿ, ಹಿಂದಿಯನ್ನು ಓದಲು, ಬರೆಯಲು ಅಥವಾ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಅಲ್ಲದೆ ಬಂಧನದ ದಾಖಲೆಗಳು ಹಿಂದಿಯಲ್ಲಿದ್ದು, ಅದಕ್ಕೆ ಯಾವುದೇ ಅನುವಾದವನ್ನು ಒದಗಿಸಲಾಗಿಲ್ಲ. ಇದರಿಂದಾಗಿ ಪರಿಣಾಮಕಾರಿ ಮತ್ತು ಸಂಪೂರ್ಣ ಪ್ರಾತಿನಿಧ್ಯವನ್ನು ನೀಡುವಲ್ಲಿ ವಿಫಲರಾಗಿದ್ದೇನೆ ಎಂದು ವಾದಿಸಿದ್ದರು.

ಎನ್‌ಸಿಬಿ ಪರ ವಕೀಲ ಶ್ರೀರಾಮ್ ಶಿರ್ಸಾತ್ ವಾದ ಮಂಡಿಸಿ, ಅರ್ಜಿದಾರರ ಪರ ವಕೀಲರೊಬ್ಬರು ಹಿಂದಿ ದಾಖಲೆಗಳನ್ನು ಭಾಷಾಂತರಿಸಿದ್ದಾರೆ ಎಂದು ವಾದಿಸಿದರು. ಆದರೆ ಆರೋಪಿಯು ಪಂಚನಾಮದಲ್ಲಿನ ಪುಟಗಳಿಗೆ ಸಹಿ ಹಾಕಲು ನಿರಾಕರಿಸಿದ್ದನ್ನು ಗಮನಿಸಿದ ನ್ಯಾಯಾಲಯವು, ಎನ್‌ಸಿಬಿಯ ವಾದವನ್ನು ಸುಳ್ಳು ಎಂದು ನಿರ್ಧಾರಿಸಿದೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ನ್ಯಾಯಾಲಯವು ಸೆಪ್ಟೆಂಬರ್ 2021 ರ ಬಂಧನ ಆದೇಶವನ್ನು ರದ್ದುಗೊಳಿಸಿ, ಆರೋಪಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...