Homeಮುಖಪುಟಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

ಬಂಧನದ ಆಧಾರ ಹಿಂದಿಯಲ್ಲಿ ಒದಗಿಸಿದ ಕಾರಣ ವಿದೇಶಿ ಪ್ರಜೆಯನ್ನು ಬಿಡುಗಡೆ ಆದೇಶಿಸಿದ ಬಾಂಬೆ ಹೈಕೋರ್ಟ್!

- Advertisement -
- Advertisement -

ಬಂಧಿಸಲು ನೀಡಿದ ಕಾರಣಗಳು ಆರೋಪಿಗೆ ಅರ್ಥವಾಗದ ಹಿಂದಿ ಭಾಷೆಯಲ್ಲಿವೆ ಎಂದು ಕಂಡುಕೊಂಡಿರುವ ಬಾಂಬೆ ಹೈಕೋರ್ಟ್ ಮಾದಕವಸ್ತು ಪ್ರಕರಣದಲ್ಲಿ ಸಿಲುಕಿದ್ದ ವಿದೇಶಿ ಪ್ರಜೆಯೊಬ್ಬರನ್ನು ಬಿಡುಗಡೆ ಮಾಡಲು ಆದೇಶಿಸಿದೆ. ನ್ಯಾಯಮೂರ್ತಿಗಳಾದ ರೇವತಿ ಮೋಹಿತೆ ದೇರೆ ಮತ್ತು ಪೃಥ್ವಿರಾಜ್ ಚವಾಣ್ ಅವರ ಪೀಠವು ಬಂಧನದ ಆಧಾರವನ್ನು ಒದಗಿಸುವುದು ಬಹಳ ಅಮೂಲ್ಯವಾದ ಸಾಂವಿಧಾನಿಕ ಹಕ್ಕು ಎಂದು ಅಭಿಪ್ರಾಯಪಟ್ಟಿದೆ.

“ಯಾಕೆ ಬಂಧಿಸಲಾಗಿದೆ ಎಂಬ ಅನುವಾದಿತ ಆವೃತ್ತಿಯನ್ನು ಆರೋಪಿಗೆ ನೀಡದಿರುವುದು ವಾಸ್ತವವಾಗಿ ಬಂಧನದ ಆಧಾರವನ್ನು ಬಂಧಿತನಿಗೆ ಪೂರೈಸದಂತಾಗುತ್ತದೆ. ಹೀಗಾಗಿ ಬಂಧನವು ದುರ್ಬಲಗೊಳ್ಳುತ್ತದೆ” ಎಂದು ಪೀಠವು ಹೇಳಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಬಾಲಿವುಡ್ ನಟ ಅರ್ಜುನ್ ರಾಂಪಾಲ್ ಅವರ ಪಾಲುದಾರರ ಸಹೋದರ ಅಗಿಸಿಲಾಸ್ ಡಿಮೆಟ್ರಿಯಾಡ್ಸ್ ಆರೋಪಿಯಾಗಿದ್ದು ಅವರನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ವಶಕ್ಕೆ ಪಡೆದಿತ್ತು. ಮಾದಕ ದ್ರವ್ಯ ಮತ್ತು ಸೈಕೋಟ್ರೋಪಿಕ್ ವಸ್ತುಗಳ ಅಕ್ರಮ ಸಾಗಾಟವನ್ನು ತಡೆಗಟ್ಟುವ ಕಾಯ್ದೆ (ಪಿಐಟಿಎನ್‌ಪಿಎಸ್‌ಎ) ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು.

ಇದನ್ನೂ ಓದಿ: ಶಿಕ್ಷಣ ಮಾಧ್ಯಮದಲ್ಲಿ ಹಿಂದಿ ಹೇರಿಕೆ: ಕೇಂದ್ರದ ನಡೆ ವಿರೋಧಿಸಿದ ಸ್ಟಾಲಿನ್ ಜೊತೆಗೂಡಿದ ಕೇರಳ ಸಿಎಂ

ಒಂದು ತಿಂಗಳ ನಂತರ ಅವರಿಗೆ ಜಾಮೀನು ನೀಡಲಾಯಿತು ಮತ್ತು ಸೆಪ್ಟೆಂಬರ್ 2021 ರಲ್ಲಿ ಕಂದಾಯ ಇಲಾಖೆ (ಪಿಐಟಿಎನ್‌ಡಿಪಿಎಸ್ ಘಟಕ) ಬಂಧನ ಆದೇಶವನ್ನು ಜಾರಿಗೊಳಿಸಿತು.

ವಕೀಲ ಕುಶಾಲ್ ಮೋರ್ ಮೂಲಕ ಹೈಕೋರ್ಟ್‌ನಲ್ಲಿ ಇದನ್ನು ಪ್ರಶ್ನಿಸಿದ ಆರೋಪಿ, ತಾನು ವಿದೇಶಿ ಪ್ರಜೆಯಾಗಿರುವುದರಿಂದ ತನಗೆ ಹಿಂದಿ ಭಾಷೆಯ ಅರಿವಿಲ್ಲ ಎಂದು ಸೂಚಿಸಿದ್ದಾರೆ. ಈ ಕಾರಣದಿಂದಾಗಿ, ಹಿಂದಿಯನ್ನು ಓದಲು, ಬರೆಯಲು ಅಥವಾ ಅರ್ಥಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಅಲ್ಲದೆ ಬಂಧನದ ದಾಖಲೆಗಳು ಹಿಂದಿಯಲ್ಲಿದ್ದು, ಅದಕ್ಕೆ ಯಾವುದೇ ಅನುವಾದವನ್ನು ಒದಗಿಸಲಾಗಿಲ್ಲ. ಇದರಿಂದಾಗಿ ಪರಿಣಾಮಕಾರಿ ಮತ್ತು ಸಂಪೂರ್ಣ ಪ್ರಾತಿನಿಧ್ಯವನ್ನು ನೀಡುವಲ್ಲಿ ವಿಫಲರಾಗಿದ್ದೇನೆ ಎಂದು ವಾದಿಸಿದ್ದರು.

ಎನ್‌ಸಿಬಿ ಪರ ವಕೀಲ ಶ್ರೀರಾಮ್ ಶಿರ್ಸಾತ್ ವಾದ ಮಂಡಿಸಿ, ಅರ್ಜಿದಾರರ ಪರ ವಕೀಲರೊಬ್ಬರು ಹಿಂದಿ ದಾಖಲೆಗಳನ್ನು ಭಾಷಾಂತರಿಸಿದ್ದಾರೆ ಎಂದು ವಾದಿಸಿದರು. ಆದರೆ ಆರೋಪಿಯು ಪಂಚನಾಮದಲ್ಲಿನ ಪುಟಗಳಿಗೆ ಸಹಿ ಹಾಕಲು ನಿರಾಕರಿಸಿದ್ದನ್ನು ಗಮನಿಸಿದ ನ್ಯಾಯಾಲಯವು, ಎನ್‌ಸಿಬಿಯ ವಾದವನ್ನು ಸುಳ್ಳು ಎಂದು ನಿರ್ಧಾರಿಸಿದೆ.

ಇದನ್ನೂ ಓದಿ: ಬೋಧನಾ ಮಾಧ್ಯಮವಾಗಿ ಹಿಂದಿ ಹೇರಿಕೆ; ದಕ್ಷಿಣದ ರಾಜ್ಯಗಳು ಪ್ರತಿಭಟನೆ ನಡೆಸುತ್ತಿದ್ದರೂ ಒಕ್ಕೂಟ ಸರ್ಕಾರ ಮೌನ!

ನ್ಯಾಯಾಲಯವು ಸೆಪ್ಟೆಂಬರ್ 2021 ರ ಬಂಧನ ಆದೇಶವನ್ನು ರದ್ದುಗೊಳಿಸಿ, ಆರೋಪಿಗಳನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ನಿರ್ದೇಶಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...