Homeಅಂತರಾಷ್ಟ್ರೀಯಬುಬೋನಿಕ್ ಪ್ಲೇಗ್: ಚೀನಾದಲ್ಲಿ ಪತ್ತೆಯಾದ ಮತ್ತೊಂದು ಸೋಂಕು

ಬುಬೋನಿಕ್ ಪ್ಲೇಗ್: ಚೀನಾದಲ್ಲಿ ಪತ್ತೆಯಾದ ಮತ್ತೊಂದು ಸೋಂಕು

ಹೆಗ್ಗಣದಂತಹ ಪ್ರಾಣಿಗಳ ಮೈಮೇಲಿರುವ ಚಿಗಟಗಳಿಂದ ಬ್ಯಾಕ್ಟೀರಿಯಾಗಳು ಮನುಷ್ಯನಿಗೆ ರವಾನೆಯಾಗಿ ಆ ಮೂಲಕ ಸೋಂಕು ಹರಡುತ್ತದೆ ಎನ್ನಲಾಗುತ್ತಿದೆ.

- Advertisement -
- Advertisement -

ಕೊರೊನಾ ವೈರಸ್‌ನ ಆರಂಭ ಸ್ಥಳ ಎಂದು ಕರೆಯಲ್ಪಡುವ ಚೀನಾದಲ್ಲಿ ಈಗ ಮತ್ತೊಂದು ಸಾಂಕ್ರಮಿಕ ರೋಗವಾದ ’ಬುಬೋನಿಕ್ ಪ್ಲೇಗ್’ ಪತ್ತೆಯಾಗಿದೆ ಎಂದು ಬಿಬಿಸಿ ವರದಿ ಮಾಡಿದೆ.

ಚೀನಾದ ಸ್ವಾಯತ್ತ ಪ್ರದೇಶವಾದ ಇನ್ನರ್ ಮಂಗೋಲಿಯಾದ ಒಳಭಾಗದಲ್ಲಿ ಬುಬೋನಿಕ್ ಪ್ಲೇಗ್ ಸಾಂಕ್ರಾಮಿಕ ಪತ್ತೆಯಾಗಿದ್ದು, ಜನರಲ್ಲಿ ಭಯವನ್ನು ಉಂಟುಮಾಡಿದೆ. ಇದನ್ನು ಅನುಸರಿಸಿ ಚೀನಾ ಸರ್ಕಾರ ಹಲವಾರು ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದೆ ಎಂದು ವರದಿಯಾಗಿದೆ.

ಪ್ಲೇಗ್ ಹರಡುವ ಸಾಧ್ಯತೆ ಇರುವುದರಿಂದ ಲೆವೆಲ್ 3 ಅಲರ್ಟ್ ಹೊರಡಿಸಲಾಗಿದೆ. ಈ ಪ್ಲೇಗ್ ಕಾಯಿಲೆಗೆ ಬ್ಯಾಕ್ಟೀರಿಯಾಗಳು ಕಾರಣವಾಗುತ್ತವೆ. ಹೆಗ್ಗಣದಂತಹ ಪ್ರಾಣಿಗಳ ಮೈಮೇಲಿರುವ ಚಿಗಟಗಳಿಂದ ಬ್ಯಾಕ್ಟೀರಿಯಾಗಳು ಮನುಷ್ಯನಿಗೆ ರವಾನೆಯಾಗಿ ಆ ಮೂಲಕ ಸೋಂಕು ಹರಡುತ್ತದೆ ಎನ್ನಲಾಗುತ್ತಿದೆ.

21ನೇ ಶತಮಾನಕ್ಕೂ ಮುನ್ನ ಇಡೀ ವಿಶ್ವವನ್ನೇ ಅತಿ ಹೆಚ್ಚು ಬಾಧಿಸಿದ್ದ ಸಾಂಕ್ರಾಮಿಕ ಕಾಯಿಲೆಗಳಲ್ಲಿ ಪ್ಲೇಗ್ ಮತ್ತು ಕಾಲರಾ ಪ್ರಮುಖವಾದವು. ಸೆಪ್ಟಿಸೆಮಿಕ್ ಪ್ಲೇಗ್ ನ್ಯೂಮೋನಿಕ್ ಪ್ಲೇಗ್ ಮತ್ತು ಈಗ ಚೀನಾದಲ್ಲಿ ಪತ್ತೆಯಾದ ಬುಬೋನಿಕ್ ಪ್ಲೇಗ್ ಸೇರಿ ಪ್ಲೇಗ್‌ನಲ್ಲಿ ಒಟ್ಟು ಮೂರು ವಿಧಗಳಿವೆ.

ಯೆರ್ಸಿನಿಯಾ ಪೆಸ್ಟ್ಸ್ (Yersinia Pests) ಎಂದು ಹೆಸರಿಲಾಗಿರುವ ಬ್ಯಾಕ್ಟೀರಿಯಾಗಳು ಬುಬೋನಿಕ್ ಪ್ಲೇಗ್ ಕಾಯಿಲೆಗೆ ಕಾರಣವಾಗುತ್ತವೆ. ನ್ಯೂಮೋನಿಕ್ ಪ್ಲೇಗ್ ಗಾಳಿಯಲ್ಲು ಹರಡುವುದರಿಂದ ಬಹಳ ಅಪಾಯಕಾರಿ ಎನ್ನಲಾಗಿದೆ. ಆದರೆ, ಬುಬೋನಿಕ್ ಪ್ಲೇಗ್ ಮುಖ್ಯವಾಗಿ ಚಿಗಟಗಳ ಮೂಲಕ ಮನುಷ್ಯರಿಗೆ ರವಾನೆಯಾಗುತ್ತದೆ. ಸೋಂಕಿತ ಮನುಷ್ಯನ ಎಂಜಲು, ಗೊಣ್ಣೆ, ಕಫ, ರಕ್ತ ಇತ್ಯಾದಿ ಸಂಪರ್ಕದ ಮೂಲಕವೂ ಮತ್ತೊಬ್ಬರಿಗೆ ಹರಡುತ್ತದೆ. ಸೋಂಕಿತ ಹೆಗ್ಗಣದ ಮಾಂಸ ತಿಂದವರಿಗೂ ಸೋಂಕು ತಗುಲುತ್ತದೆ.

ಚೀನಾದ ಇನ್ನರ್ ಮಂಗೋಲಿಯಾದ ಕುರಿ ಕಾಯುವ ಒಬ್ಬರಲ್ಲಿ ಪ್ರಸ್ತುತ ಈ ಸೋಂಕು ಇರುವುದು ಪತ್ತೆಯಾಗಿದೆ. ಸೋಂಕಿನ ಕಾರಣವನ್ನು ಇನ್ನೂ ಗುರುತಿಸಲಾಗಿಲ್ಲವಾದರೂ, ರೋಗಿಯು ಪ್ರತ್ಯೇಕವಾಗಿದ್ದಾರೆ ಹಾಗೂ ಆರೋಗ್ಯವಾಗಿದ್ದಾರೆ ಎಂದು ಚೀನಾ ಸರ್ಕಾರ ವರದಿ ಮಾಡಿದೆ.


ಓದಿ: ಬಹುಜನ ಭಾರತ: ಅರುಣಾಚಲದ ಮೇಲೆ ಚೀನಾ ಕಣ್ಣು?


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...